Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೈಕೋರ್ಟ್‌ನಲ್ಲಿ 35 ನ್ಯಾಯಮೂರ್ತಿಗಳ...

ಹೈಕೋರ್ಟ್‌ನಲ್ಲಿ 35 ನ್ಯಾಯಮೂರ್ತಿಗಳ ಕೊರತೆ

ವಾರ್ತಾಭಾರತಿವಾರ್ತಾಭಾರತಿ24 Aug 2017 10:18 PM IST
share
ಹೈಕೋರ್ಟ್‌ನಲ್ಲಿ 35 ನ್ಯಾಯಮೂರ್ತಿಗಳ ಕೊರತೆ

ಬೆಂಗಳೂರು, ಆ.24: ಮಹತ್ವದ ತೀರ್ಪುಗಳನ್ನು ನೀಡುವ ಮೂಲಕವೇ ದೇಶದಲ್ಲಿ ಹೆಸರುವಾಸಿಯಾಗಿದ್ದ ಕರ್ನಾಟಕ ಹೈಕೋರ್ಟ್‌ನಲ್ಲೀಗ ವ್ಯಾಜ್ಯಗಳ ಇತ್ಯರ್ಥ ಹಾಗೂ ವಿಭಾಗೀಯ ಪೀಠಗಳ ರಚನೆಗೆ ಪ್ರಯಾಸ ಪಡಬೇಕಾದ ಸ್ಥಿತಿ ಎದುರಾಗಿದೆ.

ಹೈಕೋರ್ಟ್‌ನಲ್ಲಿ 35 ನ್ಯಾಯಮೂರ್ತಿಗಳ ಹುದ್ದೆಗಳು ಖಾಲಿ ಇರುವುದು ಈ ಸ್ಥಿತಿಗೆ ಕಾರಣವಾಗಿದೆ. 133 ವರ್ಷಗಳ ಸುದೀರ್ಘ ಇತಿಹಾಸವಿರುವ ಹೈಕೋರ್ಟ್‌ನಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ನ್ಯಾಯಮೂರ್ತಿಗಳ ಕೊರತೆ ಕಾಡುತ್ತಿದೆ. ಮಂಜೂರಾಗಿರುವ 62 ಹುದ್ದೆಗಳ ಪೈಕಿ ಹಾಲಿ 27 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಅವರಲ್ಲಿ ಬೆಂಗಳೂರಿನ ಪ್ರಧಾನ ಪೀಠದಲ್ಲಿ 17, ಧಾರವಾಡದಲ್ಲಿ 7 ಮತ್ತು ಕಲಬುರಗಿ ಪೀಠಗಳಲ್ಲಿ 3 ಮಂದಿ ಸೇವೆ ಸಲ್ಲಿಸುತ್ತಿದ್ದಾರೆ.

ಸಿಜೆ ಕೂಡ ಅಕ್ಟೋಬರ್‌ನಲ್ಲಿ ನಿವೃತ್ತಿಯಾಗಲಿದ್ದು, ಕಳೆದ ಜನವರಿಯಿಂದ ಇಲ್ಲಿಯವರೆಗೆ ನಾಲ್ವರು ನ್ಯಾಯಮೂರ್ತಿಗಳು ನಿವೃತ್ತಿಯಾಗಿದ್ದಾರೆ. 2018ರಲ್ಲಿ ಐವರು ನಿವೃತ್ತರಾಗುತ್ತಾರೆ. ಈ ರೀತಿ ಸಾಲು ಸಾಲಾಗಿ ನ್ಯಾಯಮೂರ್ತಿಗಳು ನಿವೃತ್ತರಾಗುತ್ತಿರುವುದರಿಂದ ವಿಭಾಗೀಯ ಪೀಠಗಳನ್ನು ರಚಿಸುವುದು ಹೇಗೆ, ಧಾರವಾಡ ಮತ್ತು ಕಲಬುರಗಿ ಪೀಠಗಳಿಗೆ ನ್ಯಾಯಮೂರ್ತಿಗಳನ್ನು ರೊಟೇಷನ್ ಆಧಾರದ ಮೇಲೆ ನಿಯೋಜಿಸುವುದು ಹೇಗೆ ಎಂಬ ಕಳವಳ ಮತ್ತು ಆತಂಕವನ್ನು ಆ.23ರಂದು ನ್ಯಾಯಮೂರ್ತಿ ಅಶೋಕ್ ಬಿ. ಹಿಂಚಿಗೇರಿ ಅವರ ಬೀಳ್ಕೊಡುಗೆ ಸ ಮಾರಂಭದಲ್ಲಿ ವ್ಯಕ್ತಪಡಿಸಿದ್ದರು.

ಜಿಲ್ಲಾ ನ್ಯಾಯಾಧೀಶರ ಸ್ಥಾನದಿಂದ ನ್ಯಾಯಮೂರ್ತಿಗಳಿಗೆ ಭಡ್ತಿ ನೀಡುವ ಪ್ರಕ್ರಿಯೆ ನಿರಂತರವಾಗಿ ನಡೆದಿದೆ. ಆದರೆ, ವಕೀಲರ ವೃಂದದ ನೇಮಕ ಎನ್‌ಜೆಎಸಿ ಸೇರಿ ಒಂದಲ್ಲಾ ಒಂದು ಕಾರಣದಿಂದಾಗಿ ಎರಡೂವರೆ ವರ್ಷಗಳಿಂದ ನನೆಗುದಿಗೆ ಬಿದ್ದಿದೆ. 2015ರ ಜನವರಿಯಲ್ಲಿ ವಕೀಲರ ವೃಂದದಿಂದ ನಾಲ್ವರು ನ್ಯಾಯಮೂರ್ತಿಗಳಾಗಿದ್ದರು. ಅಲ್ಲಿಂದೀಚೆಗೆ ಕರ್ನಾಟಕ ಹೈಕೋರ್ಟ್‌ನ ಕೊಲಿಜಿಯಂ ಆಗಿಂದಾಗ್ಗೆ ಸಭೆ ಸೇರಿ ಕೆಲವು ಪ್ರತಿಭಾವಂತ ವಕೀಲರೂ ಸೇರಿ ಸುಮಾರು 18ಕ್ಕೂ ಹೆಚ್ಚು ಮಂದಿಯ ಮೂರು-ನಾಲ್ಕು ಪಟ್ಟಿಗಳನ್ನು ಕಳುಹಿಸಿದ್ದರೂ ಸಹ ಒಂದೇ ಒಂದು ನೇಮಕವೂ ನಡೆದಿಲ್ಲ. ವಕೀಲರ ವಲಯದಲ್ಲಿ ನಿರಾಶೆ ಮೂಡಿದೆ. ವಯಸ್ಸು ಮೀರುತ್ತಿರುವುದರಿಂದ ಅರ್ಹತೆ ಇರುವವರಿಗೂ ಅವಕಾಶ ಸಿಗದಂತಾಗಿದೆ.

ಹೈಕೋರ್ಟ್‌ನಲ್ಲಿ ಶೇ.60ರಷ್ಟು ನ್ಯಾಯಮೂರ್ತಿಗಳ ಕೊರತೆ ಇರುವುದರಿಂದ ಹಾಲಿ ನ್ಯಾಯಮೂರ್ತಿಗಳಿಗೆ ಒತ್ತಡ ಹೆಚ್ಚಾಗುತ್ತಿದೆ. ಹೀಗಾಗಿ, ಶೀಘ್ರ ನ್ಯಾಯದಾನ ಕೂಡ ಮರೀಚಿಕೆಯಾಗುತ್ತಿದೆ.

ಮೊದಲು ಅಧೀನ ನ್ಯಾಯಾಲಯದಲ್ಲಿ ಶಿಕ್ಷೆಗೆ ಒಳಗಾದ ವ್ಯಕ್ತಿ ಬೆಳಗ್ಗೆ ಮೇಲ್ಮನವಿ ಸಲ್ಲಿಸಿದರೆ, ಸಂಜೆ ವಿಚಾರಣೆಗೆ ಬರುತ್ತಿತ್ತು. ಆದರೀಗ ವಾರ, ತಿಂಗಳಾದರೂ ಕೋರ್ಟ್ ಮುಂದೆ ಬರುವುದಿಲ್ಲ ಎನ್ನುತ್ತಾ ರೆ ಹೈಕೋರ್ಟ್ ವಕೀಲ ಅಮೃತೇಶ್.

‘ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿರುವುದರಿಂದ ಕಕ್ಷಿದಾರರಿಗೆ ತೊಂದರೆ ಆಗುತ್ತಿದೆ. ಇದರಿಂದ, ಸಾಮಾನ್ಯ ಜನತೆಗೆ ಅನ್ಯಾಯವಾಗುತ್ತಿದೆ. ಆದರೆ, ರಾಜಕೀಯ ಮುಖಂಡರ ಪ್ರಕರಣಗಳನ್ನು ಮಾತ್ರ ತುರ್ತಾಗಿ ಪರಿಗಣಿಸಿ ವಿಚಾರಣೆ ನಡೆಸುತ್ತಿದ್ದಾರೆ. ಹೀಗಾಗಿ, ಈ ಅನ್ಯಾಯವನ್ನು ಸರಿಪಡಿಸಲು ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಬೇಕು.’

-ಜಿ.ಆರ್.ಮೋಹನ್, ಹೈಕೋರ್ಟ್ ವಕೀಲ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X