Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದಕ್ಷಿಣ ಆಫ್ರಿಕ: ಮಾನವ ಮಾಂಸ...

ದಕ್ಷಿಣ ಆಫ್ರಿಕ: ಮಾನವ ಮಾಂಸ ತಿಂದಿದ್ದಾಗಿ ನೂರಾರು ಮಂದಿಯಿಂದ ತಪ್ಪೊಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ24 Aug 2017 11:01 PM IST
share
ದಕ್ಷಿಣ ಆಫ್ರಿಕ: ಮಾನವ ಮಾಂಸ ತಿಂದಿದ್ದಾಗಿ ನೂರಾರು ಮಂದಿಯಿಂದ ತಪ್ಪೊಪ್ಪಿಗೆ

ಜೊಹಾನ್ಸ್‌ಬರ್ಗ್, ಆ. 24: ದಕ್ಷಿಣ ಆಫ್ರಿಕದಲ್ಲಿ ನರಮಾಂಸ ಭಕ್ಷಣೆ ಆರೋಪಗಳನ್ನು ಎದುರಿಸುತ್ತಿರುವ ನಾಲ್ವರಲ್ಲಿ ಒಬ್ಬ ನೀಡಿರುವ ಮಾನವ ಮಾಂಸವನ್ನು ತಿಂದಿರುವುದಾಗಿ ನೂರಾರು ಮಂದಿ ಒಪ್ಪಿಕೊಂಡಿದ್ದಾರೆ.

 ಆರೋಪಿಗಳಾದ ನಿನೊ ಮಬತ (32 ವರ್ಷ), ಲಿಂಡೊಕುಹ್ಲೆ ಮಸೊಂಡೊ (32), ಸ್ತೆಂಬಿಸೊ ಸಿಟ್‌ಹೋಲ್ (31) ಮತ್ತು ಲುಂಗಿಸಾನಿ ಮಗುಬೇನ್ (30) ಎಸ್ಟ್‌ಕೋರ್ಟ್‌ನಲ್ಲಿರುವ ನ್ಯಾಯಾಲಯಕ್ಕೆ ಸೋಮವಾರ ಹಾಜರಾದರು.

ಮಹಿಳೆಯೊಬ್ಬರನ್ನು ಅತ್ಯಾಚಾರಗೈದು, ಕೊಲೆಮಾಡಿ, ದೇಹವನ್ನು ಛಿದ್ರಗೊಳಿಸಿ ತಿಂದ ಆರೋಪಗಳನ್ನು ಈ ನಾಲ್ವರು ಎದುರಿಸುತ್ತಿದ್ದಾರೆ ಎಂದು ‘ದ ವಿಟ್ನೆಸ್’ ಪತ್ರಿಕೆ ವರದಿ ಮಾಡಿದೆ.

ಆರೋಪಿಗಳಲ್ಲಿ ಓರ್ವ ಮಾನವ ದೇಹದ ಅಂಗಾಂಗಗಳನ್ನು ಹಿಡಿದುಕೊಂಡು ಕಳೆದ ಶುಕ್ರವಾರ ಮಧ್ಯ ದಕ್ಷಿಣ ಆಫ್ರಿಕದಲ್ಲಿರುವ ಎಸ್ಟ್‌ಕೋರ್ಟ್ ಪಟ್ಟಣದ ಪೊಲೀಸ್ ಠಾಣೆಯೊಂದಕ್ಕೆ ಹೋದನು ಹಾಗೂ ‘ಮಾನವ ಮಾಂಸವನ್ನು ತಿನ್ನಲು ಪ್ರಯತ್ನಿಸಿದ್ದಾಗಿ’ ಒಪ್ಪಿಕೊಂಡನು ಎಂದು ಪತ್ರಿಕೆ ಹೇಳಿದೆ.

ಎಸ್ಟ್‌ಕೋರ್ಟ್‌ನ ರೆನ್ಸ್‌ಬರ್ಗ್‌ಡ್ರಿಫ್ಟ್‌ನ ಮನೆಯೊಂದರಲ್ಲಿ ಹೆಚ್ಚಿನ ಮಾನವ ಅವಯವಗಳನ್ನು ಪೊಲೀಸರು ಪತ್ತೆಹಚ್ಚಿದರು.

ಆರೋಪಿಗಳ ಪೈಕಿ ಓರ್ವನಾಗಿರುವ ಮಬತನನ್ನು ಅಮಂಗ್ವೆ ಎಂಬಲ್ಲಿ ಬಂಧಿಸಲಾಗಿದ್ದು, ಆತನ ಮನೆಯಲ್ಲಿ ಮಾನವ ಅವಯವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದರು. ಮಬತನು ನಾಟಿ ವೈದ್ಯನೂ ಆಗಿದ್ದಾನೆ.

ಈ ನಡುವೆ, ಸೋಮವಾರ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ, ವಾರ್ಡ್ ಕೌನ್ಸಿಲರ್ ಮತೆಂಬನಿ ಮಜೊಲ ಸಮುದಾಯ ಸಭೆಯೊಂದನ್ನು ನಡೆಸಿದರು. ತಾವು ಮಬತನ ಮನೆಗೆ ಭೇಟಿ ಗೊತ್ತಿದ್ದೇ ಮಾನವ ಮಾಂಸವನ್ನು ತಿಂದಿರುವುದಾಗಿ ಸುಮಾರು 300 ನಿವಾಸಿಗಳು ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.

ಮಾನವ ಮಾಂಸವನ್ನು ತಿನ್ನುವ ಪದ್ಧತಿ ಎಸ್ಟ್‌ಕೋರ್ಟ್‌ಗೆ ಮಾತ್ರ ಸೀಮಿತವಾಗಿಲ್ಲ. ಇಡೀ ಉತುಲೇಕ ಜಿಲ್ಲೆಯಲ್ಲಿ ಆತ ಸಂಪರ್ಕ ಹೊಂದಿದ್ದಾನೆ ಎಂದು ಮಜೋಲ ಹೇಳಿದರು.

ಯಾರನ್ನು ನಂಬಬೇಕೆಂದು ಗೊತ್ತಾಗುತ್ತಿಲ್ಲ

‘‘ಏನು ಮಾಡಬೇಕು ಅಥವಾ ಯಾರನ್ನು ನಂಬಬೇಕೆಂದು ನಮಗೆ ಗೊತ್ತಾಗುತ್ತಿಲ್ಲ’’ ಎಂದು ಕೌನ್ಸಿಲರ್ ಮಜೋಲ ಪತ್ರಿಕೆಯೊಂದಿಗೆ ಹೇಳಿದರು.

‘‘ಇದು ನಮ್ಮ ಸಮುದಾಯದಲ್ಲೇ ನಡೆದಿದೆ. ಈ ಮಹಿಳೆಯನ್ನು ತಿಂದಿರುವುದಾಗಿ ನಮಗೆ ಗೊತ್ತಿರುವ ಹಾಗೂ ನಾವು ವ್ಯವಹರಿಸುವ ಜನರೇ ಈಗ ಒಪ್ಪಿಕೊಂಡಿದ್ದಾರೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X