Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಲಿಂಗಾಯತ ಧರ್ಮಕ್ಕೆ ಸಂವಿಧಾನಾತ್ಮಕ...

'ಲಿಂಗಾಯತ ಧರ್ಮಕ್ಕೆ ಸಂವಿಧಾನಾತ್ಮಕ ಮಾನ್ಯತೆ ಸಿಕ್ಕದಿರುವುದು ಬೇಸರ'

ವಾರ್ತಾಭಾರತಿವಾರ್ತಾಭಾರತಿ24 Aug 2017 11:02 PM IST
share
ಲಿಂಗಾಯತ ಧರ್ಮಕ್ಕೆ ಸಂವಿಧಾನಾತ್ಮಕ ಮಾನ್ಯತೆ ಸಿಕ್ಕದಿರುವುದು ಬೇಸರ

 ದಾವಣಗೆರೆ, ಆ.24: ಡಿಸೆಂಬರ್ ನಲ್ಲಿ ಸ್ವತಂತ್ರ ಲಿಂಗಾಯಿತ ಧರ್ಮ ಮಾಡುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಗರದ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಗುರುವಾರ ಕಾಯಕ ದಾಸೋಹ ಮಂಟಪ, ಸೋಮೇಶ್ವರ ದೇವಸ್ಥಾನ ಟ್ರಸ್ಟ್‍ನಿಂದ ಹಮ್ಮಿಕೊಂಡಿದ್ದ ಚಿಂದೋಡಿ ಲೀಲಾರವರ ಸ್ಮರಣೋತ್ಸವ ಹಾಗೂ ಕೂಡಲ ಸಂಗಮದೆಡೆಗೆ ಪ್ರವಚ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. 

ಈ ಬೃಹತ್ ಹೋರಾಟದಲ್ಲಿ 25 ಲಕ್ಷಕ್ಕೂ ಹೆಚ್ಚು ಲಿಂಗಾಯತರು ಸೇರಿಲಿದ್ದು, ಶೀಘ್ರ ಸಮಾಜದ ಮುಖಂಡರು ಚೆರ್ಚಿಸಿ ರ್ಯಾಲಿಗೆ ದಿನ ನಿಗದಿಪಡಿಸಲಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ  ಶಾಮನೂರು ಶಿವಶಂಕರಪ್ಪ ಎರಡು ಸಮುದಾಯಗಳ ಹಿತ ಕಾಯಲು ಲಿಂಗಾಯತ, ವೀರಶೈವ ಎರಡು ಒಂದೇ ಎನ್ನುತ್ತಿದ್ದಾರೆ. ಇದು ಸರಿ ಅಲ್ಲ ಎಂದ ಅವರು, ಧರ್ಮದ ವಿಚಾರವಾಗಿ ಸೆ. 3ರಂದು ಮಹಾರಾಷ್ಟ್ರದಲ್ಲಿ ರ್ಯಾಲಿ ನಡೆಸಲಾಗುವುದು. ಗೋವಾ, ತೆಲಂಗಾಣ ಸೇರಿದಂತೆ ಐದು ರಾಜ್ಯಗಳಿಂದ 5 ಲಕ್ಷ ಜನ ಸೇರಿ ಸರಕಾರಕ್ಕೆ ಮನವಿ ಮಾಡಲಿದ್ದಾರೆ. ಅಲ್ಲದೆ, ಸೆ. 20ರಂದು ಮೈಸೂರು ಮತ್ತು ಸೆ. 22ರಂದು ಮುರುಘಾ ಶರಣರ ನೇತೃತ್ವದಲ್ಲಿ ಚಿತ್ರದುರ್ಗದಲ್ಲಿ ರ್ಯಾಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ರಾಜ್ಯ ಸರಕಾರ ಲಿಂಗಾಯತ ಧರ್ಮಕ್ಕಾಗಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದರೆ, ಯಡಿಯೂರಪ್ಪ ನೇತೃತ್ವದಲ್ಲಿ ಪ್ರಧಾನಿ ಮೋದಿ ಬಳಿ ನಿಯೋಗ ಹೋಗಿ ಸ್ವತಂತ್ರ್ಯ ಧರ್ಮಕ್ಕೆ  ಒತ್ತಾಯಿಸುತ್ತೇವೆ. ಎಲ್ಲರೂ  ಒಗ್ಗಟ್ಟಾಗಿ ಒಂದು ಧರ್ಮ ಸ್ಥಾಪಿಸಿಕೊಳ್ಳಬೇಕಾಗಿತ್ತು. ಆದರೆ, ಕೆಲವರು ವೀರಶೈವ ಅಂತ ಗೊಂದಲ ಸೃಷ್ಟಿಸಿದ್ದಾರೆ ಎಂದು ತಿಳಿಸಿದರು. 

900 ವರ್ಷಗಳ ಹಿಂದೆಯೇ ಲಿಂಗಾಯತ ಧರ್ಮ ಸ್ಥಾಪಿತವಾಗಿದೆ. ಇದು ಕಾಯಕ ಧರ್ಮವಾಗಿದ್ದು ಸಾಮಾಜಿಕ ನ್ಯಾಯ ಇದೆ. ಈ ಧರ್ಮ ಎಲ್ಲರನ್ನೂ ಅಪ್ಪಿಕೊಳ್ಳತ್ತದೆ. ವಿಶ್ವ ಧರ್ಮವಾಗುವ ಎಲ್ಲ ಅರ್ಹತೆ ಹೊಂದಿದೆ. ಇಂತ ಧರ್ಮಕ್ಕೆ ಇಲ್ಲಿವರೆಗೂ ಸಂವಿಧಾನಾತ್ಮಕ ಮಾನ್ಯತೆ ಸಿಕ್ಕದಿರುವುದು ಬೇಸರ ಮೂಡಿಸಿದೆ ಎಂದರು.

ದಾವಣಗೆರೆಯ ಗಾಜಿನ ಮನೆಗೆ(ಗ್ಲಾಸ್‍ಹೌಸ್) ಪದ್ಮಶ್ರೀ ಚಿಂದೋಡಿ ಲೀಲಾರ ಹೆಸರು ಹಾಗೂ  ಬೆಳಗಾವಿ ಗಾಜಿನ ಮನೆಗೆ ರಂಗಕರ್ಮಿ ಏಣಗಿ ಬಾಳಪ್ಪರ ಅವರ ಹೆಸರು ನಾಮಕರಣ ಮಾಡಿ ಎಂದು ಒತ್ತಾಯಿಸಿದ ಅವರು, ಕೆಲ ಭಾಗಗಳಲ್ಲಿ ಯಾವುದೇ ಕಲಾವಿದರು ಮರಣ ಹೊಂದಿದರೆ ಅಂತಹವರ ಹೆಸರನ್ನು ಸಮಾಜದ ಅಭಿವೃದ್ಧಿ ಕಾರ್ಯಗಳಿಗೆ ಹೆಸರಿಡುವ ಮೂಲಕ ಗೌರವ ನೀಡಲಾಗುತ್ತದೆ. ಆದರೆ, ಅಂತಹ ಪದ್ಧತಿ ಈ ಭಾಗದಲ್ಲಿ ಆಗುತ್ತಿಲ್ಲ ಎಂದು ವಿಷಾಧಿಸಿದರು.

ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಜನರಿಗೆ ಸಾಮಾಜಿಕ ಮತ್ತು ರಾಜಕೀಯ ಸ್ವಾತಂತ್ರ್ಯ ಸಿಕ್ಕಿದೆ. ಆದರೆ, ಧಾರ್ಮಿಕ, ಆರ್ಥಿಕ ಹಕ್ಕು ಈವರೆಗೂ ದೊರಕಿಲ್ಲ. ಈ ಕಾರಣಕ್ಕೆ  ಧರ್ಮದ ಗೊಂದಲ ಸೃಷ್ಟಿಯಾಗಿದೆ. ಶ್ರೀಮಂತರು ಇನ್ನಷ್ಟು ಸ್ಥಿತಿವಂತರಾಗುತ್ತಿದ್ದಾರೆ. ಬಡವರು ಬಡವರಾಗಿಯೇ ಉಳಿಯುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಧಾರಾವಾಡದ ಬಸವ ಮಹಾಮನೆ ಪ್ರವಚನಕರಾದ ಚಂದ್ರಾದೇವಿ, ಕೆಬಿಆರ್ ಡ್ರಾಮಾ ಕಂಪನಿ ಮಾಲಕ ಚಿಂದೋಡಿ ಎಲ್. ಚಂದ್ರಧರ್, ಸಪ್ತಗಿರಿ ವಿದ್ಯಾಸಂಸ್ಥೆ ಸಂಸ್ಥಾಪಕ ರಾಮಮೂರ್ತಿ, ರುದ್ರಮ್ಮ, ಶಿವರಾಜ್, ಸುನೀಲ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X