Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪದಕದ ಭರವಸೆಯಲ್ಲಿ ಶಿವ ಥಾಪ ಹಾಗೂ ವಿಕಾಸ್...

ಪದಕದ ಭರವಸೆಯಲ್ಲಿ ಶಿವ ಥಾಪ ಹಾಗೂ ವಿಕಾಸ್ ಕೃಷ್ಣನ್

ವಾರ್ತಾಭಾರತಿವಾರ್ತಾಭಾರತಿ25 Aug 2017 12:34 AM IST
share
ಪದಕದ ಭರವಸೆಯಲ್ಲಿ ಶಿವ ಥಾಪ ಹಾಗೂ ವಿಕಾಸ್ ಕೃಷ್ಣನ್

ಹ್ಯಾಂಬರ್ಗ್, ಆ.24: ಹತ್ತೊಂಬತ್ತನೆ ಆವೃತ್ತಿಯ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಶುಕ್ರವಾರ ಆರಂಭವಾಗಲಿದ್ದು, ಶಿವ ಥಾಪ ಹಾಗೂ ವಿಕಾಸ್ ಕೃಷ್ಣನ್ ಪದಕ ಜಯಿಸುವ ಗುರಿ ಹಾಕಿಕೊಂಡಿದ್ದಾರೆ.

ಸಾರ್ವಕಾಲಿಕ ಪದಕ ಪಟ್ಟಿಯಲ್ಲಿ ಜಂಟಿ 49ನೆ ಸ್ಥಾನದಲ್ಲಿರುವ ಭಾರತ 2009, 2011 ಹಾಗೂ 2015ರ ಆವೃತ್ತಿಯ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ತಲಾ ಒಂದು ಕಂಚು ಜಯಿಸಿತ್ತು.

ಪ್ರತಿಷ್ಠಿತ ಟೂರ್ನಿಯಲ್ಲಿ ಶಿವ ಥಾಪ(2015), ವಿಕಾಸ್(2011) ಹಾಗೂ ಪ್ರಸ್ತುತ ವೃತ್ತಿಪರ ಬಾಕ್ಸರ್ ಆಗಿ ಪರಿವರ್ತಿತರಾಗಿರುವ ವಿಜೇಂದರ್‌ಸಿಂಗ್(2009) ತಲಾ ಒಂದು ಬಾರಿ ಕಂಚು ಜಯಿಸಿದ್ದಾರೆ.

ಈ ವರ್ಷಾರಂಭದಲ್ಲಿ ತಾಷ್ಕಂಟ್‌ನಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್‌ನ ಮೂಲಕ ಭಾರತದ 8 ಬಾಕ್ಸರ್‌ಗಳು ಈ ವರ್ಷದ ವಿಶ್ವ ಚಾಂಪಿಯನ್‌ಶಿಪ್‌ಗೆ ಪ್ರವೇಶ ಪಡೆದಿದ್ದಾರೆ.

 ‘‘ನಮ್ಮ ತಯಾರಿ ಉತ್ತಮವಾಗಿದೆ. ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರು 2 ಬೆಳ್ಳಿ ಹಾಗೂ 2 ಕಂಚು ಪದಕ ಜಯಿಸಿ ಅಂಕಪಟ್ಟಿಯಲ್ಲಿ 3ನೆ ಸ್ಥಾನ ಪಡೆದಿದ್ದಾರೆ. ಫ್ರಾನ್ಸ್ ಹಾಗೂ ಝೆಕ್ ರಿಪಬ್ಲಿಕ್‌ಗೆ ತೆರಳಿ ತರಬೇತಿ ಪಡೆದಿದ್ದಾರೆ. ತಂಡ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ. ಆದರೆ ಪದಕ ಗೆಲ್ಲುವ ಬಗ್ಗೆ ಏನೂ ಹೇಳಲಾರೆ’’ಎಂದು ಭಾರತದ ಬಾಕ್ಸಿಂಗ್ ಕೋಚ್ ಸ್ಯಾಂಟಿಯಾಗೊ ಹೇಳಿದ್ದಾರೆ.

 ‘‘ಒಲಿಂಪಿಕ್ಸ್‌ನ ಬಳಿಕ ವಿಶ್ವ ಚಾಂಪಿಯನ್‌ಶಿಪ್ ನಮಗೆ ಅತ್ಯಂತ ಮುಖ್ಯ ಟೂರ್ನಮೆಂಟ್ ಆಗಿದೆ. ನಾನು ಈ ಪ್ರತಿಷ್ಠಿತ ಟೂರ್ನಿಗೆ ತಯಾರಿ ನಡೆಸುತ್ತಿದ್ದೇನೆ’’ ಎಂದು ಎರಡು ಬಾರಿ ಒಲಿಂಪಿಯನ್ ಹಾಗೂ ಸತತ ಮೂರು ಏಷ್ಯನ್ ಚಾಂಪಿಯನ್‌ಶಿಪ್ ಪದಕ ಜಯಿಸಿರುವ ಶಿವಥಾಪ ಹೇಳಿದ್ದಾರೆ.

 ಅಸ್ಸಾಂ ಬಾಕ್ಸರ್ ಥಾಪ 2015ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 56 ಕೆಜಿ ಬಾಟಮ್‌ವೇಟ್ ವಿಭಾಗದಲ್ಲಿ ಕಂಚು ಜಯಿಸಿದ್ದರು. ಈ ಬಾರಿ 60 ಕೆಜಿ ಲೈಟ್‌ವೇಟ್ ವಿಭಾಗದಲ್ಲಿ ಸ್ಪರ್ಧಿಸಲಿರುವ ಥಾಪ ಇದೇ ವಿಭಾಗದಲ್ಲಿ ಮೂರು ತಿಂಗಳ ಹಿಂದೆ ನಡೆದಿದ್ದ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕವನ್ನು ಜಯಿಸಿದ್ದಾರೆ.

25ರ ಹರೆಯದ ವಿಕಾಸ್ ಕೃಷ್ಣನ್ ಭಾರತಕ್ಕೆ ಪದಕ ಗೆದ್ದುಕೊಡುವ ಭರವಸೆ ಮೂಡಿಸಿದ್ದಾರೆ. ಮಾಜಿ ಏಷ್ಯನ್ ಗೇಮ್ಸ್ ಚಾಂಪಿಯನ್ ವಿಕಾಸ್ 75 ಕೆಜಿ ಮಿಡ್ಲ್‌ವೇಟ್ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದಾರೆ. ಏಷ್ಯನ್ ಚಾಂಪಿಯನ್‌ಶಿಪ್‌ನ ಬಳಿಕ ಪಟಿಯಾಲದ ನ್ಯಾಶನಲ್ ಕ್ಯಾಂಪ್‌ಗೆ ತೆರಳದೇ ಪುಣೆಯಲ್ಲಿ ಒಬ್ಬರೇ ತರಬೇತಿ ಪಡೆದಿದ್ದಾರೆ.

ಮಾಜಿ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್, ಹಿರಿಯ ಬಾಕ್ಸರ್ ಮನೋಜ್ ಕುಮಾರ್(69 ಕೆಜಿ)ಹಾಗೂ ಸುಮೀತ್ ಸಾಂಗ್ವಾನ್(91ಕೆಜಿ) ಪದಕದ ಭರವಸೆ ಮೂಡಿಸಿದ್ದಾರೆ.

10 ದಿನಗಳ ಕಾಲ ನಡೆಯಲಿರುವ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ 85 ದೇಶಗಳ 280 ಬಾಕ್ಸರ್‌ಗಳು ಭಾಗವಹಿಸಲಿದ್ದಾರೆ.

ಭಾರತದ ಬಾಕ್ಸಿಂಗ್ ತಂಡ:

ಅಮಿತ್ ಫಾಂಗಲ್(49ಕೆಜಿ), ಕವಿಂದರ್ ಬಿಶ್ಟ್(52ಕೆಜಿ), ಗೌರವ್ ಬಿಧುರಿ(56ಕೆಜಿ),ಶಿವ ಥಾಪ(60ಕೆಜಿ), ಮನೋಜ್ ಕುಮಾರ್(69 ಕೆಜಿ), ವಿಕಾಸ್ ಕೃಷ್ಣನ್(75 ಕೆಜಿ), ಸುಮಿತ್ ಸಾಂಗ್ವಾನ್(91 ಕೆಜಿ) ಹಾಗೂ ಸತೀಶ್ ಕುಮಾರ್(+91ಕೆಜಿ).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X