Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಜ್ ಯಾತ್ರೆ ಹೆಸರಿನಲ್ಲಿ ಲಕ್ಷಾಂತರ ರೂ....

ಹಜ್ ಯಾತ್ರೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆಯ ಆರೋಪ: ಸಂಸ್ಥೆಯ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ25 Aug 2017 7:31 PM IST
share
ಹಜ್ ಯಾತ್ರೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆಯ ಆರೋಪ: ಸಂಸ್ಥೆಯ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ಮಂಗಳೂರು, ಆ.25: ಹಜ್ ಯಾತ್ರೆ ಕೈಗೊಳ್ಳಲು ವೀಸಾ ನೀಡುವುದಾಗಿ ಹೇಳಿ 95 ಮಂದಿ ಆಕಾಂಕ್ಷಿ ಯಾತ್ರಾರ್ಥಿಗಳಿಂದ ತಲಾ 70 ಸಾವಿರ ರೂ.ನಂತೆ ಪಡೆದುಕೊಂಡು ಟ್ರಾವೆಲ್ಸ್ ಸಂಸ್ಥೆಯೊಂದು ವಂಚನೆ ಮಾಡಿರುವುದಾಗಿ ಉಡುಪಿ ನಿವಾಸಿ ಎಂ.ಪಿ. ಮೊಯ್ದಿನಬ್ಬ ಎಂಬವರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

2017ರ ಹಜ್ ಯಾತ್ರೆಗೆ ಸಂಬಂಧಿಸಿದಂತೆ, ಮಂಗಳೂರಿನ ಮಿಶನ್‌ಸ್ಟ್ರೀಟ್‌ನ ರೀಗಲ್ ಪ್ಲಾಝಾದಲ್ಲಿ ಕಾರ್ಯಾಚರಿಸುತ್ತಿರುವ ಶಹದಾ ಟ್ರಾವೆಲ್ಸ್ ಸಂಸ್ಥೆಯು ಕಳೆದ ಜೂನ್ ತಿಂಗಳಲ್ಲಿ ಹಜ್‌ಗೆ ಹೋಗುವವರಿಗೆ ನಾನಾ ಕಾರಣಗಳಿಂದಾಗಿ ವೀಸಾಗಳು ಉಳಿಕೆಯಾಗಿವೆ ಎಂದು ತಿಳಿಸಿತ್ತು. ಮೊದಲು 35,000 ರೂ. ಮತ್ತು ನಂತರ 35,000 ರೂ. ನೀಡುವಂತೆ ತಿಳಿಸಿ ಪಾಸ್‌ಪೋರ್ಟ್‌ಗಾಗಿ ಸಂಸ್ಥೆಯವರು ಒತ್ತಾಯಿಸಿದ್ದರು. ಅದರಂತೆ ನಾನು ನನ್ನ ಪಾಸ್‌ಪೋರ್ಟ್ ಹಾಗೂ 35,000 ರೂ. ಜೂನ್ 21ರಂದು ಮತ್ತು ಆಗಸ್ಟ್ 16ರಂದು ಮತ್ತೆ 35,000 ರೂ. ಸೇರಿದಂತೆ ಒಟ್ಟು 70 ಸಾವಿರ ರೂ. ಪಾವತಿ ಮಾಡಿರುತ್ತೇನೆ. ಆ. 25ರೊಳಗೆ ವೀಸಾ ನೀಡಿ ಹಜ್ ಯಾತ್ರೆಗೆ ತಯಾರಾಗುವಂತೆ ನನಗೆ ತಿಳಿಸಲಾಗಿತ್ತು. ಆದರೆ ಆ. 21ರಿಂದ ನಿನ್ನೆ ಸಂಜೆ 7 ಗಂಟೆಯವರೆಗೆ ನಿರಂತರವಾಗಿ ನನಗೆ ಹಾಗೂ ಸುಮಾರು 95 ಮಂದಿಗೆ ಸುಳ್ಳು ಮಾಹಿತಿ ನೀಡಿದ್ದರು. ನಿನ್ನೆ 8 ಗಂಟೆಗೆ ಕರೆ ಮಾಡಿ ಎಲ್ಲಾ ವೀಸಾಗಳು ರದ್ದಾಗಿವೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ.

ನಾನು ಹಜ್ ಯಾತ್ರೆಗಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೆ. ನಂತರ ವಿಚಾರಿಸಿದಾಗ ನನ್ನಂತೆಯೇ ಸುಮಾರು 95 ಮಂದಿಗೆ ಇದೇ ರೀತಿ ಅನ್ಯಾಯವಾಗಿರುವುದು ತಿಳಿದು ಬಂತು. ಈ ಸಂಸ್ಥೆಯ ಮಾಲಕರು ಹಾಗೂ ಏಜೆಂಟರಿಂದ ನನಗೆ ಹಾಗೂ ಇತರ ಹಲವರಿಗೆ ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ತೊಂದರೆಯಾಗಿದೆ. ಅಲ್ಲದೆ ಪವಿತ್ರ ಹಜ್ ಯಾತ್ರೆ ಹೆಸರಿನಲ್ಲಿ ಅವಮಾನ ಮಾಡುವ ಕೃತ್ಯವೂ ಆಗಿದೆ. ನಮ್ಮೆಲ್ಲರ ಪಾಸ್‌ಪೋರ್ಟ್ ಹಾಗೂ ಹಣ ಅವರ ಕೈಯ್ಯಲ್ಲಿದೆ.

ಇವರಿಗೆ ಭಾರತದ ಹಜ್ ಕಮಿಟಿಯ ಪದಾಧಿಕಾರಿಗಳು, ರಾಜಕೀಯ ನಾಯಕರ ಬೆಂಬಲವೂ ಇದೆ ಎಂದು ದೂರುದಾರರು ಆರೋಪಿಸಿದ್ದಾರೆ. ಜನರನ್ನು ವಂಚಿಸುವ ಈ ಸಂಸ್ಥೆಯವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು ಎಂದು ಎಂ.ಪಿ. ಮೊಯ್ದಿನಬ್ಬ ಅವರು, ಮಂಗಳೂರು ಪೊಲೀಸ್ ಆಯುಕ್ತರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X