Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿನ್ನಾಭರಣ ಕಳವು ಪ್ರಕರಣ: ಇಬ್ಬರು...

ಚಿನ್ನಾಭರಣ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ26 Aug 2017 5:22 PM IST
share
ಚಿನ್ನಾಭರಣ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಹಾಸನ, ಆ.26:  ಜ್ಯುವೆಲ್ಲರಿ ಶಾಪಿನ ಚಿನ್ನಾಭರಣ ಕಳವು ಪ್ರಕರಣದಲ್ಲಿ ಅರಕಲಗೂಡು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ 97, ಲಕ್ಷದ 31 ಸಾವಿರದ 600 ರೂ. ಮೌಲ್ಯದ ಚಿನ್ನಾಭರಣ ಹಾಗೂ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ತಿಳಿಸಿದರು.

ಈ ಬಗ್ಗೆ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಭಾಂಗಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ,  ಆ.21 ರಂದು ರಾತ್ರಿ 11-45ರ ಸಮಯದಲ್ಲಿ ಅರಕಲಗೂಡು ಮಾರುತಿ ಕಾಂಪ್ಲೆಕ್ಸ್ ನಲ್ಲಿರುವ ಮದನ್‍ಲಾಲ್ ಅವರ ಕೃಷ್ಣ ಬ್ಯಾಂಕರ್ ಆ್ಯಂಡ್ ಜ್ಯವೆಲ್ಲರಿ ಶಾಪ್‍ನಲ್ಲಿ ಕಳವುವಾದ ಚಿನ್ನಾಭರಣವನ್ನು ಪೊಲೀಸರು ಪತ್ತೆ ಹಚ್ಚಲಾಗಿದೆ ಎಂದರು.

ಈ ಪ್ರಕರಣವನ್ನು ಭೇದಿಸಿದ  ಅರಕಲಗೂಡು ಪೊಲೀಸರು ಖಚಿತ ಮಾಹಿತಿ ಮೆರೆಗೆ ವಾಟರ್ ಸಪ್ಲೆಯಾಗಿ ಕೆಲಸ ಮಾಡುತ್ತಿದ್ದ ರಾಜಸ್ಥಾನದ ಓಂಪ್ರಕಾಶ್ (23) ಹಾಗೂ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಹೋಬಳಿಯ ಬರಗೂರು ಗ್ರಾಮದ ರಘು (27) ಇಬ್ಬರನ್ನು ಬಂಧಿಸಿದ್ದಾರೆ.

ಆರೋಪಿ ಓಂಪ್ರಕಾಶ್ ಎಂಬವನು ಕೃಷ್ಣ ಬ್ಯಾಂಕರ್ ಆ್ಯಂಡ್ ಜ್ಯವೆಲ್ಲರಿ ಶಾಪ್‍ನ ಮಾಲಕ ಮದನ್‍ಲಾಲ್ ಬಳಿ ಓಂಪ್ರಕಾಶ್ ಕೆಲಸ ಮಾಡುತ್ತಿದ್ದನು. ಅಲ್ಲದೆ ಮಾಲಕ ಮದನ್‍ಲಾಲ್ ಅವರ  ಮನೆಗೆ ಆರೋಪಿ  ಬಂದು ಹೋಗುತ್ತಿದ್ದನು. ಬಳಿಕ ಓಂಪ್ರಕಾಶ್ ಮಾಲಕನಿಂದ ಕೆಲಸ ಬಿಟ್ಟು ಮಾರ್ಚ್‍ನಲ್ಲಿ ಸ್ವಂತ ವಾಟರ್ ಸಪ್ಲೆ ಪ್ರಾರಂಭಿಸಿದ್ದಾನೆ. ಆರೋಪಿಯ ವಾಟರ್ ಸಪ್ಲೆ ಕೆಲಸದಲ್ಲಿ ರಘು ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ.

ಈ ಬಗ್ಗೆ ಪೊಲೀಸರು ಅನುಮಾನಾಸ್ಪದವಾಗಿ ರಘುವನ್ನು ತನಿಖೆಗೆ ಒಳಪಡಿಸಿದಾಗ  ಗಿರವಿ ಹಾಗೂ ಅಂಗಡಿಯ ಚಿನ್ನಾಭರಣವನ್ನು ಎರಡನೇ ಆರೋಪಿ ಚಾಲಕ ರಘು ಮನೆಯಲ್ಲಿ ಇಟ್ಟಿರುವುದಾಗಿ ತಿಳಿದು ಬಂದಿದೆ. ಒಟ್ಟು 3 ಕೆಜಿ 511 ಗ್ರಾಂ ಚಿನ್ನದ ಆಭರಣ ಹಾಗೂ 6 ಲಕ್ಷದ 3 ಸಾವಿರ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕಳ್ಳತನ ಕೃತ್ಯಕ್ಕೆ ಬಳಸಿದ ಟಾಟಾ ವಾಹನದ ಸಂಖ್ಯೆ ಕಂಡುಹಿಡಿಯುವಲ್ಲಿ ಅರಕಲಗೂಡು ಪೊಲೀಸರು ಯಶಸ್ವಿ ಕಾರ್ಯಚರಣೆ ನಡೆಸಿದ್ದಾರೆ. ಬಳಿಕ ಆರೋಪಿಗಳನ್ನು ಪತ್ತೆ ಹಚ್ಚಿ ಒಟ್ಟು ಮೌಲ್ಯ 97 ಲಕ್ಷದ 31 ಸಾವಿರದ 600 ರೂ.ವಶಪಡಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಪ್ರಕರಣವನ್ನು ಭೇದಿಸಿದ ಹೊಳೆನರಸೀಪುರ ಡಿಎಸ್ಪಿ ಎಂ.ಎನ್. ಶಶಿಧರ್ ನೇತೃತ್ವದ ಸಿಪಿಐ ಶಿವರಾಜ್ ಆರ್. ಮುಧೋಳ್ ಹಾಗೂ ರವಿಕಿರಣ್, ಪಿಎಸೈ ಅರಕಲಗೂಡು ಠಾಣೆಯ ಹಾಗೂ ಸಿಬ್ಬಂದಿಗಳಾದ ಬಸವರಾಜು, ಮಹೇಶ್, ಬಸಪ್ಪ, ವಿಜಿಕುಮಾರ್, ಚಂದ್ರಶೇಖರ್, ಸುರೇಶ್, ಜೀಪ್ ಚಾಲಕ ಜಗನ್ನಾಥ್  ಕೆಲಸವನ್ನು  ಶ್ಲಾಘಿಸಿದರು.

ಗೋಷ್ಠಿಯಲ್ಲಿ ಪೊಲೀಸ್ ಅಧೀಕ್ಷಕ ಜ್ಯೋತಿ ವೈಜನಾಥ್, ಅಪರ ಪೊಲೀಸ್ ಅಧಿಕಾರಿ ಎಂ.ಎನ್. ಶಶಿಧರ್ ಇತರರು ಉಪಸ್ಥಿತರಿದ್ದರು. 
     


   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X