Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಂಭೀರ ವಿಷಯ ನಗಣ್ಯ ಮಾಡುವುದು ಬಿಜೆಪಿಯ...

ಗಂಭೀರ ವಿಷಯ ನಗಣ್ಯ ಮಾಡುವುದು ಬಿಜೆಪಿಯ ಸಿದ್ಧಾಂತ: ಮನೀಶ್ ಸಿಸೋಡಿಯಾ

ವಾರ್ತಾಭಾರತಿವಾರ್ತಾಭಾರತಿ26 Aug 2017 6:33 PM IST
share
ಗಂಭೀರ ವಿಷಯ ನಗಣ್ಯ ಮಾಡುವುದು ಬಿಜೆಪಿಯ ಸಿದ್ಧಾಂತ: ಮನೀಶ್ ಸಿಸೋಡಿಯಾ

ಬೆಂಗಳೂರು, ಆ.26: ದೇಶದಲ್ಲಿ ಜರಗುವ ಗಂಭೀರ ವಿಷಯಗಳನ್ನು ನಗಣ್ಯ ಮಾಡುವುದು ಹಾಗೂ ನಗಣ್ಯ ವಿಷಯಗಳನ್ನು ಮುಖ್ಯ ವಿಷಯವನ್ನಾಗಿ ಪರಿವರ್ತಿಸುವುದು ಬಿಜೆಪಿಯ ಮೂಲ ಸಿದ್ಧಾಂತವೆಂದು ದಿಲ್ಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.

ಶನಿವಾರ ಆಮ್‌ಆದ್ಮಿ ಪಕ್ಷದ ವತಿಯಿಂದ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ‘ಆಪ್ ನಾಗರಿಕ ಸಂಬಲೀಕರಣ’ ಕಾರ್ಯಕ್ರಮ ಹಾಗೂ ‘ಜನರಿಂದ ಸರಕಾರ-ಒಂದು ಸಂವಾದ’ ದುಂಡುಮೇಜಿನ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಹರಿಯಾಣದ ಸ್ವಯಂ ಘೋಷಿತ ದೇವಮಾನವ ಬಾಬಾ ಗುರ್ಮಿಟ್ ರಾಮ್ ರಹೀಂ ಸಿಂಗ್ ಬೆಂಬಲಿಗರ ಹಿಂಸಾಚಾರ ಪ್ರಕರಣವು ಬಿಜೆಪಿಗೆ ಮುಖ್ಯ ವಿಷಯವೇ ಅಲ್ಲ. ಹಾಗೆಯೇ ಇತ್ತೀಚಿಗೆ ಉತ್ತರ ಪ್ರದೇಶದಲ್ಲಿ ನಡೆದ ಶಿಶುಗಳ ಮಾರಣ ಮೃಂದಗವು ಬಿಜೆಪಿ ನಗಣ್ಯವಾಗಿಯೇ ಕಾಣುತ್ತದೆ. ಇದು ಬಿಜೆಪಿ ಸಿದ್ಧಾಂತದ ಮೂಲ ಸ್ವರೂಪವೇ ಆಗಿದೆ ಎಂದು ಕಿಡಿಕಾರಿದರು.

ಸ್ವಯಂ ಘೋಷಿತ ದೇವಮಾನವ ಬಾಬಾ ಗುರ್ಮಿಟ್ ರಾಮ್‌ ರಹೀಂ ಸಿಂಗ್ ಮೇಲಿದ್ದ ಆರೋಪ ನ್ಯಾಯಾಲದಯಲ್ಲಿ ಸಾಭೀತಾಗಿದೆ. ಆದರೆ, ರಾಮ್‌ ರಹೀಂ ಸಿಂಗ್‌ರವರ ಬೆಂಬಲಿಗರು ತೀರ್ಪನ್ನು ವಿರೋಧಿಸಿ ಹಿಂಸಾಚಾರಕ್ಕೆ ಇಳಿದಿರುವುದು ದುರಾದೃಷ್ಟಕರ. ಗಲಭೆಯಲ್ಲಿ ಜನಸಾಮಾನ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಈ ಹತ್ಯೆಗಳ ನೇರ ಹೊಣೆಯನ್ನು ಹರಿಯಾಣದ ಬಿಜೆಪಿ ಸರಕಾರವೇ ಹೊರಬೇಕಾಗುತ್ತದೆ ಎಂದರು.

ಕೇಂದ್ರ ಸರಕಾರ ಮಧ್ಯೆ ಪ್ರವೇಶಿಸಲಿ: ಹರಿಯಾಣದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಸಾವು-ನೋವುಗಳ ಸಂಭವಿಸುತ್ತಿವೆ. ಹರಿಯಾಣ ಸೇರಿದಂತೆ ದೇಶದ ಜನತೆ ಭಯಗ್ರಸ್ತರಾಗಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ಕೇಂದ್ರದ ಬಿಜೆಪಿ ಸರಕಾರ ದೇಶದಲ್ಲಿ ಏನು ನಡೆದಿಲ್ಲದಂತೆ ಮೌನವಹಿಸಿರುವುದು ಆತಂಕ ಮೂಡಿಸಿದೆ ಎಂದು ವಿಷಾದಿಸಿದರು.

ಪ್ರಜಾಪ್ರಭುತ್ವದಡಿ ಆಯ್ಕೆಯಾದ ಬಿಜೆಪಿ ಸರಕಾರದ ನಾಯಕರು ಜನತೆಯ ಸಾವು-ನೋವುಗಳನ್ನು ಈ ಮಟ್ಟಕ್ಕೆ ನಿರ್ಲಕ್ಷಿಸಿರುವ ಉದಾಹರಣೆ ಎಲ್ಲೂ ಕಂಡಿಲ್ಲ. ಕನಿಷ್ಠ ಮಟ್ಟದ ಮನುಷ್ಯ ಪರವಾದ ವೌಲ್ಯಗಳನ್ನು ಕೇಂದ್ರ ಸರಕಾರ ಹೊಂದಿದ್ದರೆ ಕೂಡಲೇ ಹರಿಯಾಣದಲ್ಲಿ ನಡೆಯುತ್ತಿರುವ ಗಲಭೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕಠಿಣವಾದ ತೀರ್ಮಾನಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X