Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕಾಬೂಲ್: ಮಸೀದಿ ಮೇಲೆ ಆತ್ಮಹತ್ಯಾ ದಾಳಿ;...

ಕಾಬೂಲ್: ಮಸೀದಿ ಮೇಲೆ ಆತ್ಮಹತ್ಯಾ ದಾಳಿ; ಮಡಿದವರ ಸಂಖ್ಯೆ 28ಕ್ಕೇರಿಕೆ

ವಾರ್ತಾಭಾರತಿವಾರ್ತಾಭಾರತಿ26 Aug 2017 10:33 PM IST
share
ಕಾಬೂಲ್: ಮಸೀದಿ ಮೇಲೆ ಆತ್ಮಹತ್ಯಾ ದಾಳಿ; ಮಡಿದವರ ಸಂಖ್ಯೆ 28ಕ್ಕೇರಿಕೆ

ಕಾಬೂಲ್,ಆ.26: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಮಸೀದಿಯಲ್ಲಿ ಶುಕ್ರವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಡಿದವರ ಸಂಖ್ಯೆ 28ಕ್ಕೇರಿದೆ.

ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಮಸೀದಿಯ ಆವರಣಕ್ಕೆ ನುಗ್ಗಿದ ಭಯೋತ್ಪಾದಕರಲ್ಲಿ ಇಬ್ಬರು ತಮ್ಮನ್ನು ಸ್ಫೋಟಿಸಿಕೊಂಡಿದ್ದರು. ಉಳಿದಿಬ್ಬರನ್ನು ಸ್ಥಳದಲ್ಲಿದ್ದ ಭದ್ರತಾಪಡೆಗಳು ಗುಂಡಿಕ್ಕಿ ಹತ್ಯೆಗೈದಿರುವುದಾಗಿ ಕಾಬೂಲ್‌ನ ಪೊಲೀಸ್ ಅಧಿಕಾರಿ ಮುಹಮ್ಮದ್ ಸಾದಿಕ್ ಮುರಾದಿ ತಿಳಿಸಿದ್ದಾರೆ. ಸ್ಫೋಟದಲ್ಲಿ 20 ಮಂದಿ ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಒಟ್ಟು 28 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆಂದು ಅವರು ಹೇಳಿದ್ದಾರೆ.

ಮಧ್ಯಾಹ್ನ ಪ್ರಾರ್ಥನೆಗಾಗಿ ಸೇರಿದ್ದ ಜನರ ಮೇಲೆ ಭಯೋತ್ಪಾದಕರು ಸುಮಾರು ನಾಲ್ಕು ತಾಸುಗಳ ಕಾಲ ಮನಬಂದಂತೆ ಗುಂಡುಹಾರಿಸಿದ್ದಾರೆ ಹಾಗೂ ಸ್ಫೋಟಕಗಳನ್ನು ಎಸೆದಿದ್ದರು.

ದಾಳಿಯ ಹೊಣೆ ನಿರಾಕರಿಸಿದ ತಾಲಿಬಾನ್

ಈ ಮಧ್ಯೆ ಈ ಭಯೋತ್ಪಾದಕ ದಾಳಿಯನ್ನು ಉಗ್ರಗಾಮಿ ಗುಂಪು ತಾಲಿಬಾನ್ ಖಂಡಿಸಿದೆ. ಈ ಬಗ್ಗೆ ತಾಲಿಬಾನ್ ವಕ್ತಾರ ಝಬಿಯುಲ್ಲಾ ಮುಜಾಹಿತ್ ಸುದ್ದಿಸಂಸ್ಥೆಯೊಂದಕ್ಕೆ ದೂರವಾಣಿ ಮೂಲಕ ಹೇಳಿಕೆ ನೀಡಿ, ತನ್ನ ಗುಂಪಿಗೂ, ಮಸೀದಿ ಮೇಲೆ ನಡೆದ ದಾಳಿಗೂ ಯಾವುದೇ ಸಂಬಂಧವಿಲ್ಲವೆಂದು ಸ್ಪಷ್ಟಪಡಿಸಿದೆ.

  ಕಾಬೂಲ್ ಮಸೀದಿಯಲ್ಲಿ ನಡೆದ ಆತ್ಮಾಹುತಿ ದಾಳಿಯನ್ನು ಅಫ್ಘಾನ್ ಅಧ್ಯಕ್ಷ ಅಶ್ರಫ್ ಗನಿ ಖಂಡಿಸಿದ್ದಾರೆ. ಭಯೋತ್ಪಾದಕರು ರಣರಂಗದಲ್ಲಿ ಸೋಲನುಭವಿಸುತ್ತಿದ್ದು, ಹತಾಶರಾಗಿರುವ ಅವರು ಧಾರ್ಮಿಕ ಸ್ಥಳಗಳ ಮೇಲೆ ದಾಳಿ ನಡೆಸುತ್ತಿದ್ದಾರೆಂದು ಹೇಳಿದ್ದಾರೆ.

ಅಫ್ಘಾನಿಸ್ತಾನದಿಂದ ಅಮೆರಿಕನ್ ಸೇನೆಯನ್ನು ಹಿಂತೆಗೆದುಕೊಳ್ಳಲಾಗುವುದಿಲ್ಲ, ಬದಲಿಗೆ ಇನ್ನೂ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ಕಳುಹಿಸುವುದಾಗಿ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ ಈ ಭಯೋತ್ಪಾದಕ ದಾಳಿ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X