Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಸಮಸ್ಯೆ ನಿವಾರಿಸುವ ಬದ್ಧತೆಯನ್ನು...

ರೈತರ ಸಮಸ್ಯೆ ನಿವಾರಿಸುವ ಬದ್ಧತೆಯನ್ನು ರಾಜ್ಯ ಸರಕಾರ ತೋರಿಸುತ್ತಿಲ್ಲ: ಪ್ರೊ.ಸಿ. ನರಸಿಂಹಪ್ಪ

ವಾರ್ತಾಭಾರತಿವಾರ್ತಾಭಾರತಿ26 Aug 2017 10:50 PM IST
share
ರೈತರ ಸಮಸ್ಯೆ ನಿವಾರಿಸುವ ಬದ್ಧತೆಯನ್ನು ರಾಜ್ಯ ಸರಕಾರ ತೋರಿಸುತ್ತಿಲ್ಲ: ಪ್ರೊ.ಸಿ. ನರಸಿಂಹಪ್ಪ

ದಾವಣಗೆರೆ, ಆ.26: ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಮಳೆಗಾಲಕ್ಕೂ ನೀರಿಲ್ಲದೆ ಅತಂತ್ರ ಸ್ಥಿತಿ ಅನುಭವಿಸುವಂತಾಗಿದ್ದು, ಭದ್ರಾ ರೈತರನ್ನು ಮಳೆಯಾಶ್ರಿತ ಬೆಳೆಕಡೆಗೆ ದೂಡುವಂತಹ ಅಮಾನವೀಯ, ಅಪರಾಧಿಕೃತ ಪ್ರಯತ್ನ ನಡೆಯುತ್ತಿದ್ದು ಇದನ್ನು ತಪ್ಪಿಸಬೇಕಿದೆ ಎಂದು ಭಾರತೀಯ ರೈತ ಒಕ್ಕೂಟ ಭದ್ರಾ ಶಾಖೆ ಪ್ರಧಾನ ಕಾರ್ಯದರ್ಶಿ ಪ್ರೊ.ಸಿ. ನರಸಿಂಹಪ್ಪ ಜನಪ್ರತಿನಿಧಿಗಳಿಗೆ ಒತ್ತಾಯಿಸಿದರು.

ಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಭದ್ರಾ ನಾಲೆ ಮಳೆಗಾಲದಲ್ಲಿಯೂ ಬೆಳೆಗಳಿಗೆ ತುರ್ತು ನೀರು ಹರಿಸುವ ಅವಶ್ಯಕತೆ ಇದೆ. ಆದರೆ, ನೀರು ನಿರ್ವಹಣೆಯಲ್ಲಿ ಸಂಬಂಧಪಟ್ಟವರು ಸಂಪೂರ್ಣ ವಿಫಲವಾಗಿದ್ದು, ಭದ್ರಾ ಅಣೆಕಟ್ಟು ದಿಕ್ಕೇ ಇಲ್ಲದ ಸ್ಥಿತಿಯಲ್ಲಿದೆ ಎಂದ ಅವರು, 2016ರ ಬೇಸಿಗೆ ಮತ್ತು ಮಳೆಗಾಲದ ಎರಡು ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆಯಾಗದ ಕಾರಣ 2.65 ಲಕ್ಷ ಎಕರೆ ಅಚ್ಚುಕಟ್ಟುದಾರರು ನೂರಾರು ಕೋಟಿ ನಷ್ಟ ಅನುಭವಿಸಿದ್ದಾರೆ ಎಂದು ಅವರು ದೂರಿದರು.

ಈ ಕೂಡಲೇ ಸಭೆ ಸೇರಿಸಿ ಅಚ್ಚುಕಟ್ಟಿಗೆ ನೀರು ಹರಿಸುವ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿಗಳು ನೀರಿಲ್ಲದ ಭಾಗದಲ್ಲಿ ಸಭೆ ಕರೆಯುತ್ತಾರೆ. ಆದರೆ, ನೀರಿರುವ ನಮ್ಮ ಭಾಗದಲ್ಲಿ ಮಾತ್ರ ಸಭೆ ಕರೆಯದೆ ರೈತರ ತೊಂದರೆ ನಿವಾರಿಸುವ ಬದ್ಧತೆ ತೋರಿಸುತ್ತಿಲ್ಲ. ನೀರಾವರಿ ಸಲಹಾ ಸಮಿತಿಯೂ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಮಾತನಾಡಿ, ಸಿಎಂ ಸಿದ್ದರಾಮಯ್ಯ ಕೇವಲ ಕಾವೇರಿ ಭಾಗದಲ್ಲಿ ಮೋಡ ಬಿತ್ತನೆ ಮಾಡುವುದು ಸರಿಯಲ್ಲ. ನಮ್ಮ ಭಾಗದಲ್ಲಿಯೂ ಅಂದರೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮೋಡಬಿತ್ತನೆಗೆ ಸೂಕ್ತ ವಾತಾವರಣವಿದೆ. ಈ ಭಾಗದಲ್ಲಿ ಮೋಡ ಬಿತ್ತನೆ ಮಾಡುವ ಅವಶ್ಯಕತೆ ಇದೆ. ಇದರಿಂದ ಉತ್ತಮ ಮಳೆ ಬರುತ್ತದೆ. ಕೇವಲ ಬೆಂಗಳೂರು ಭಾಗಕ್ಕೆ ಮಾತ್ರ ತೃಪ್ತಿಗೊಳಿಸಲು ಹೊರಟಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ ಎಚ್.ಆರ್. ಲಿಂಗರಾಜು, ಕೆ.ಎಂ. ಸುರೇಶ್, ಕುಂದುವಾಡ ಮಹೇಶ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X