Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಇರಾವತಿ ಕರ್ವೆ ಅವರ ಸಂಸ್ಕೃತಿ ಚಿಂತನೆ

ಇರಾವತಿ ಕರ್ವೆ ಅವರ ಸಂಸ್ಕೃತಿ ಚಿಂತನೆ

- ಕಾರುಣ್ಯ- ಕಾರುಣ್ಯ27 Aug 2017 12:18 AM IST
share

ದೇಶದ ಖ್ಯಾತ ವಿದ್ವಾಂಸರಾಗಿರುವ ಇರಾವತಿ ಕರ್ವೆ ತಮ್ಮ ‘ಯುಗಾಂತ’ ಕೃತಿಯ ಮೂಲಕ ಕನ್ನಡ ಸಾಹಿತ್ಯ ಪ್ರಿಯರಿಗೂ ಚಿರಪರಿಚಿತರು. ಇದೀಗ ಅವರ ‘ನಮ್ಮ ಸಂಸ್ಕೃತಿ’ ಸಂಸ್ಕೃತಿ ಚಿಂತನೆಯ ಬಿಡಿ ಬರಹಗಳನ್ನು ಚಂದ್ರಕಾಂತ ಪೋಕಳೆಯವರು ಕನ್ನಡಕ್ಕಿಳಿಸಿದ್ದಾರೆ.

ಇರಾವತಿ ಕರ್ವೆಯವರ ಮೂಲ ಮರಾಠಿ ಗ್ರಂಥದಲ್ಲಿ ಒಟ್ಟು ಹದಿನಾಲ್ಕು ಲೇಖನಗಳಿವೆ. ನಾಲ್ಕು ಲೇಖನಗಳನ್ನು ಅನುವಾದಕರು ಕೈ ಬಿಟ್ಟಿದ್ದಾರೆ. ಭಾರತದ ಹಿಂದೂ ಸಂಸ್ಕೃತಿ, ಕ್ರೈಸ್ತ ಮತ್ತು ಮುಸ್ಲಿಮ್ ಸಂಸ್ಕೃತಿ, ಜಾಗತಿಕ ಸಂಸ್ಕೃತಿಗಳ ತೌಲನಿಕ ಚಿಂತನೆ, ಬುಡಕಟ್ಟು ಸಮಾಜ, ಗೋವಧೆ ನಿಷೇಧದ ಚಳವಳಿ, ವಿವಾಹ ವಿಚ್ಛೇದನೆಗೆ ಸಂಬಂಧಿಸಿದ ಕಾನೂನು, ಭಾಷಿಕ ಸಮಸ್ಯೆ, ಎರಡು ಪೀಳಿಗೆಯ ನಡುವಣ ಸಂಬಂಧ, ಮಹಿಳೆಯರ ಸ್ಥಿತಿಗತಿ, ಶೈಕ್ಷಣಿಕ ಸಮಸ್ಯೆ ಈ ಬಗೆಯ ಸಾರ್ವತ್ರಿಕ ವಿಷಯಗಳಿಗೆ ಸಂಬಂಧಿಸಿದ ಹತ್ತು ಲೇಖನಗಳನ್ನು ಪೋಕಳೆ ಅನುವಾದ ಮಾಡಿದ್ದಾರೆ.

ವಿಶೇಷವೆಂದರೆ ಇಲ್ಲಿರುವ ಹೆಚ್ಚಿನ ಲೇಖನಗಳು 60ರ ದಶಕಕ್ಕೂ ಹಿಂದಿನವು. ಅಂದಿನ ಕಾಲಘಟ್ಟಕ್ಕೆ, ಸಂದರ್ಭಕ್ಕೆ ಪೂರಕವಾಗಿ ಲೇಖಕಿ ಸಂಸ್ಕೃತಿಯ ಕುರಿತಂತೆ ತನ್ನ ವ್ಯಾಖ್ಯಾನವನ್ನು ಮಾಡಿದ್ದಾರೆ. ಇದಾದ ಬಳಿಕ ದೇಶದಲ್ಲಿ ಸೃಷ್ಟಿಯಾದ ಚಳವಳಿಗಳು, ಹೋರಾಟಗಳು, ರಾಜಕೀಯ ಪಲ್ಲಟಗಳು ಸಂಸ್ಕೃತಿಯನ್ನು ಬೇರೆ ಬೇರೆ ನೆಲೆಯಲ್ಲಿ ನೋಡಿವೆ. ವ್ಯಾಖ್ಯಾನಗಳಲ್ಲಿ ಸಾಕಷ್ಟು ಬದಲಾವಣೆಗಳೂ ಆಗಿವೆ. ಆದರೂ, ಮಾನವಶಾಸ್ತ್ರಜ್ಞ, ಸಮಾಜ ಶಾಸ್ತ್ರಜ್ಞೆಯರಾಗಿರುವ ಇರಾವತಿ, ಸಂಸ್ಕೃತಿಯನ್ನು ನೋಡುವ ಕ್ರಮ ಇಂದಿಗೂ ಹೊಸತೇ ಆಗಿದೆ. ಇದನ್ನು ಹಿನ್ನೆಲೆಯಾಗಿಟ್ಟುಕೊಂಡು ಉಳಿದವರು ತಮ್ಮ ನೋಟಗಳನ್ನು ಹಿಗ್ಗಿಸಿದವರು ಹಲವರು.

ಸಂಸ್ಕೃತಿಯಲ್ಲಿರುವ ಕೆಡುಕನ್ನು ಉಚ್ಚಾಟನೆ ವಾಡುವಾಗ ವ್ಯಕ್ತಿ ಅಥವಾ ವರ್ಗದ ಬಗೆಗೆ ದ್ವೇಷವಾಗಲಿ, ಸೇಡಿನ ಭಾವನೆಯಾಗಲಿ ಇರಬಾರದು ಎನ್ನುವ ಎಚ್ಚರಿಕೆಯನ್ನು ನೀಡುತ್ತಾರೆ ಇರಾವತಿ. ನ್ಯಾಯನಿಷ್ಠುರತೆ ಎಂದರೆ ವೈರತ್ವ ಅಲ್ಲ ಎನ್ನುವುದನ್ನು ಇರಾವತಿ ಅಭಿಪ್ರಾಯಪಡುತ್ತಾರೆ. ಹಾಗೆಯೇ ಬ್ರಿಟಿಷರು ಮತ್ತು ಮುಸ್ಲಿಮರ ಸಂಸ್ಕೃತಿ ಹೇಗೆ ಈ ದೇಶದ ಮೇಲೆ ಪರಿಣಾಮ ಬೀರಿತು ಎನ್ನುವುದನ್ನೂ ಅವರು ಕುತೂಹಲಕರವಾಗಿ ನಿರೂಪಿಸುತ್ತಾರೆ. ಮಹಿಳೆಯ ಹಕ್ಕುಗಳ ಬಗ್ಗೆ ಚರ್ಚೆ ಮಾಡುತ್ತಾ, ಮಹಿಳೆಯರ ಹಕ್ಕಿನ ಭಾಷೆಯು ಹೋಗಿ, ನಾವು ಪ್ರತಿಯೊಬ್ಬ ಮನುಷ್ಯರ ಹಕ್ಕಿನ ಭಾಷೆಯ ಕುರಿತು ಮಾತನಾಡುವುದು ಸಾಧ್ಯವಾಗಬೇಕು ಎಂಬ ನಿಲುವು ತಾಳುತ್ತಾರೆ.

ನವಕರ್ನಾಟಕ ಪ್ರಕಾಶನ ಹೊರತಂದಿರುವ ಕೃತಿಯ ಮುಖಬೆಲೆ 85 ರೂ.

share
- ಕಾರುಣ್ಯ
- ಕಾರುಣ್ಯ
Next Story
X