Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೌಹಾರ್ದ, ಸಹಬಾಳ್ವೆ ಮೂಡಿಸಲು ಸಾಮಾಜಿಕ...

ಸೌಹಾರ್ದ, ಸಹಬಾಳ್ವೆ ಮೂಡಿಸಲು ಸಾಮಾಜಿಕ ಜಾಲತಾಣಗಳು ಹೆಚ್ಚು ಪರಿಣಾಮಕಾರಿ: ಮುಹಮ್ಮದ್ ರಿಯಾಝ್

ವಾರ್ತಾಭಾರತಿವಾರ್ತಾಭಾರತಿ27 Aug 2017 5:48 PM IST
share
ಸೌಹಾರ್ದ, ಸಹಬಾಳ್ವೆ ಮೂಡಿಸಲು ಸಾಮಾಜಿಕ ಜಾಲತಾಣಗಳು ಹೆಚ್ಚು ಪರಿಣಾಮಕಾರಿ: ಮುಹಮ್ಮದ್ ರಿಯಾಝ್

ಬೆಂಗಳೂರು, ಆ. 27: ರೋಗಗ್ರಸ್ಥವಾಗಿರುವ ಸಮಾಜದಲ್ಲಿ ಸೌಹಾರ್ದ, ಸಹಬಾಳ್ವೆ ಮೂಡಿಸಲು ಸಾಮಾಜಿಕ ಜಾಲತಾಣಗಳು ಪರಿಣಾಮಕಾರಿಯಾಗಿದ್ದು, ಜಾಲತಾಣಗಳ ಮೂಲಕ ಜನಸಾಮಾನ್ಯರ ನೈಜ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಡಿವೈಎಫ್‌ಐನ ರಾಷ್ಟ್ರಾಧ್ಯಕ್ಷ ಮುಹಮ್ಮದ್ ರಿಯಾಝ್ ಕರೆ ನೀಡಿದ್ದಾರೆ.

ರವಿವಾರ ನಗರದ ಎಸ್‌ಸಿಎಂ ಹೌಸ್‌ನಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ರಾಜ್ಯ ಸಮಿತಿ ಆಯೋಜಿಸಿದ್ದ ಸಾಮಾಜಿಕ ಮಾಧ್ಯಮ ಕುರಿತ ರಾಷ್ಟ್ರಮಟ್ಟದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪತ್ರಕರ್ತ ಪಿ.ಸಾಯಿನಾಥ್ ಪ್ರಕಾರ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳು ಶೇ.70ರಷ್ಟು ಜನಪರವಾಗಿಲ್ಲ. ಸಿದ್ಧಾಂತಗಳನ್ನೇ ಗಾಳಿಗೆ ತೂರಿರುವ ಸುದ್ದಿ ಮಾಧ್ಯಮಗಳು ಲಾಭಕೋರ ಧೋರಣೆಗೆ ಜೋತುಬಿದ್ದಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಸುದ್ದಿ ಮಾಧ್ಯಮಗಳು ಕಾರ್ಪೊರೇಟ್ ಸಂಸ್ಥೆಗಳ ಗಾಳವಾಗುತ್ತಿವೆ. ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಗೂಡಿಸುವಂತ ಸುದ್ದಿ ಮಾಧ್ಯಮಗಳು ಕಡಿಮೆ ಆಗುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಸಮಾಜಘಾತುಕ ಶಕ್ತಿಗಳ ವಿರುದ್ಧ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಪ್ರಧಾನಿ ಮೋದಿ ಮುನ್ನೆಲೆಗೆ ಬಂದರು. ಇದೇ ಮಾದರಿಯಲ್ಲಿ ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಿಕೊಂಡು ದೇಶದೊಳಗಿನ ನೈಜ ಸಮಸ್ಯೆಗಳ ಬಗ್ಗೆ ಯುವ ಜನತೆಯಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಡಿವೈಎಫ್‌ಐ ಪ್ರತಿನಿಧಿಗಳಿಗೆ ಕರೆ ನೀಡಿದರು.

‘ನ್ಯೂಸ್ ಮಿನಿಟ್’ ಸಂಪಾದಕ ಪ್ರಬೀರ್ ಪುರಕಾಯಸ್ಥ ಮಾತನಾಡಿ, ಬಹುತೇಕ ಬುದ್ಧಿವಂತ ಜನರು ಮಾಹಿತಿಗಾಗಿ ಪತ್ರಿಕೆ ಮಾಧ್ಯಮಗಳಿಗಿಂತ ಹೆಚ್ಚಾಗಿ ಇಂಟರ್‌ನೆಟ್‌ನಿಂದ ಪಡೆದುಕೊಳ್ಳುತ್ತಿದ್ದಾರೆ. ಈ ಪರಿಣಾಮ ಸಾಮಾಜಿಕ ಜಾಲತಾಣಗಳು ಪ್ರವರ್ಧಮಾನಕ್ಕೆ ಬರುತ್ತಿವೆ ಎಂದು ತಿಳಿಸಿದರು.

ಮಠಗಳು, ಸ್ವಾಮೀಜಿಗಳು ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ವಿಚಾರಗಳನ್ನು ಬಿತ್ತುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಮಾಜದಲ್ಲಿನ ಸಮಸ್ಯೆಗಳಿಗೆ ಪರಿಹಾರದ ಜೊತೆಗೆ, ಸಮಾಜದ ಪ್ರಗತಿಗೆ ಪೂರಕವಾಗುವ ಅಂಶಗಳನ್ನು ಬಿತ್ತಲು ಯುವಜನರು ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕಿದೆ ಎಂದರು.

ಡಿವೈಎಫ್‌ಐನ ಕಾರ್ಯದರ್ಶಿ ಬಿ.ರಾಜಶೇಖರ್ ಮೂರ್ತಿ ಮಾತನಾಡಿ, ಸಾಮಾಜಿಕ ಜಾಲತಾಣಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಕಾರ್ಪೊರೇಟ್ ಸಂಸ್ಥೆಗಳು ಅಡ್ಡಗಾಲಾಗುತ್ತಿವೆ. ಇದರಿಂದ ಸರಕಾರದ ಕಾರ್ಯಕ್ರಮಗಳು, ವಿಜ್ಞಾನ ಮತ್ತು ತಂತ್ರಜ್ಞಾನಗಳು ಜನಸಾಮಾನ್ಯರಿಗೆ ಮರೀಚಿಕೆಯಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ವೇಳೆ ದೇಶದ 21 ರಾಜ್ಯಗಳ ಡಿವೈಎಫ್‌ಐ ಪ್ರತಿನಿಧಿಗಳು ಪಾಲ್ಗೊಂಡು ವಿಚಾರವನ್ನು ವಿನಿಮಯ ಮಾಡಿಕೊಂಡರು.

ಕಾರ್ಯಾಗಾರದಲ್ಲಿ ಡಿವೈಎಫ್‌ಐನ ಪ್ರಧಾನ ಕಾರ್ಯದರ್ಶಿ ಅಭಯ್ ಮುಖರ್ಜಿ ಸೇರಿದಂತೆ  ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X