Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೌಹಾರ್ದೆತೆಯೆಂಬ ಬೀಜ ಬಿತ್ತುವ ಕೆಲಸ...

ಸೌಹಾರ್ದೆತೆಯೆಂಬ ಬೀಜ ಬಿತ್ತುವ ಕೆಲಸ ಪ್ರತೀ ಮನೆಗಳಲ್ಲಿ ನಡೆಯಬೇಕು: ವಿಶ್ವನಾಥ್ ರೈ

ವಾರ್ತಾಭಾರತಿವಾರ್ತಾಭಾರತಿ27 Aug 2017 7:18 PM IST
share
ಸೌಹಾರ್ದೆತೆಯೆಂಬ ಬೀಜ ಬಿತ್ತುವ ಕೆಲಸ ಪ್ರತೀ ಮನೆಗಳಲ್ಲಿ ನಡೆಯಬೇಕು: ವಿಶ್ವನಾಥ್ ರೈ

ಮೂಡಿಗೆರೆ, ಆ.27: ಎಲ್ಲಾ ಜಾತಿಯ ಜನರನ್ನು ಯಾವುದೇ ಭೇದ ಭಾವ ತೋರದೆ ಹೊತ್ತಿರುವ ಭಾರತಾಂಬೆಯು ಸದಾ ನಗುತ್ತಿರಬೇಕೆಂದರೆ, ಈ ದೇಶದಲ್ಲಿ ಸೌಹಾರ್ದೆತೆಯಂತಹ ಮುಖ್ಯ ಸಂದೇಶವನ್ನು ಪ್ರತಿಯೊಬ್ಬ ಭಾರತೀಯನೂ ಸಾರಬೇಕಾಗಿದೆ ಎಂದು ವಿ.ಎಸ್.ಶಾಲೆಯ ಆಡಳಿತಾಧಿಕಾರಿ ವಿಶ್ವನಾಥ್ ರೈ ತಿಳಿಸಿದರು.

ಅವರು ಪಟ್ಟಣದ ಜೆ.ಎಂ.ರಸ್ತೆಯಲ್ಲಿ ಸರ್ವಧರ್ಮ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಸಮನ್ವಯ ಪ್ರಶಸ್ತಿ-2017 ಪಡೆದು ಮಾತನಾಡಿದರು.

ಭಾರತ ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯೂ ಎಲ್ಲಾ ಧರ್ಮವನ್ನು ಗೌರವಿಸಬೇಕು. ಇದು ಮಹಾತ್ಮ ಗಾಂಧೀಜಿಯವರ ಕನಸಾಗಿದ್ದು, ಅದನ್ನು ನನಸು ಮಾಡಲು ಪ್ರತಿಯೊಬ್ಬರೂ ಮುಂದಾಗಬೇಕಾಗಿದೆ. ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಚಿಕ್ಕಂದಿನಿಂದಲೇ ಮನಸ್ಸಿನಲ್ಲಿ ಸೌಹಾರ್ದೆತೆ ಎಂಬ ಬೀಜ ಬಿತ್ತಿವ ಕೆಲಸ ಮಾಡಿದರೆ ಉತ್ತಮ ಸಮಾಜ ತಾನಾಗಿಯೇ ನಿರ್ಮಾಣಗೊಳ್ಳುತ್ತದೆ ಎಂದರು.

ಎಂಇಎಸ್ ಶಾಲೆಯ ಮುಖ್ಯಸ್ಥ ಎಂ.ಎಸ್.ಹರೀಶ್ ಮಾತನಾಡಿ, ನಮ್ಮ ಧರ್ಮವನ್ನು ಗೌರವಿಸುವುದರ ಜೊತೆಗೆ ಎಲ್ಲಾ ಧರ್ಮವನ್ನು ಗೌರವಿಸಬೇಕು. ದೇಶ ಕಾಯುವುದು ಕೇವಲ ಸೈನಿಕರ ಕೆಲಸ ಮಾತ್ರವಲ್ಲ. ಈ ದೇಶದಲ್ಲಿರುವ ಎಲ್ಲಾ ಭಾರತೀಯರೂ ತಾನೊಬ್ಬ ಸೈನಿಕನೆಂಬ ಮನೋಭಾವನೆ ಮೂಡಿಸಿಕೊಳ್ಳಬೇಕು. ಆಗ ಮಾತ್ರ ಭಾರತ ಮಾತೆಗೆ ಗೌರವ ನೀಡುವುದರ ಜೊತೆಗೆ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಪತ್ರಕರ್ತ ಕಿರುಗುಂದ ಅಬ್ಬಾಸ್ ಮಾತನಾಡಿ, ಒಬ್ಬ ಮಾನವನನ್ನು ಸತ್ತ ನಂತರವೂ ನೆನಪಿಸಿಕೊಳ್ಳಬೇಕೆಂದರೆ ಆ ಮಾನವ ಸೌಹಾರ್ದತೆಯಿಂದ ಬಾಳಿದರೆ ಮಾತ್ರ ಸಾಧ್ಯ. ಸರ್ವಧರ್ಮವನ್ನು ಒಂದುಗೂಡಿಸುವ ಕೆಲಸವನ್ನು ಕೆಲವೇ ಪ್ರದೇಶಗಳಲ್ಲಿ ಸೀಮಿತವಾಗಬಾರದು. ಸೌಹಾರ್ಧತೆಯನ್ನು ಒಂದಾಗಿ ಕಟ್ಟಲು ಭಾರತದ ಮೂಲೆ ಮೂಲೆಗಳಲ್ಲಿ ನಡೆಯಬೇಕೆಂದರು.

ಈ ವೇಳೆ ವಿಎಸ್ ಶಾಲೆಯ ಆಡಳಿತಾಧಿಕಾರಿ ವಿಶ್ವನಾಥ್ ರೈಗೆ ಸಮಿತಿಯಿಂದ ಸಮನ್ವಯ ಪ್ರಶಸ್ತಿ-2017 ನೀಡಿ ಗೌರವಿಸಲಾಯಿತು. ಅಲ್ಲದೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಕಲಾಭಾರತಿ, ದ್ವಿತೀಯ ಸ್ಥಾನ ಸುನೀಲ್ ತಂಡ, ತೃತೀಯ ಸ್ಥಾನ ಹೈಡೆನ್ ಗ್ರೂಪ್ಸ್ ಪಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಎ.ಎಂ.ಮಹೇಶ್ ವಹಿಸಿದ್ದರು. ಎಚ್.ಪಿ.ಹರೀಶ್, ಸಮಿತಿಯ ಪುಟ್ಟರಾಜು, ಹಾ.ಬಾ.ಮಂಜು ಮತ್ತಿತರರು ಉಪಸ್ಥಿತರಿದ್ದರು. ಐವಿಆರ್ ಪಿಂಟೋ ಪ್ರಾರ್ಥಿಸಿದರೆ, ಮಲ್ಲೇಶ್ ಸ್ವಾಗತಿಸಿದರು. ಚಂದ್ರೇಶ್ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X