Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಾಮಾಣಿಕ ಅಧಿಕಾರಿಗಳ ತಲೆದಂಡವನ್ನು...

ಪ್ರಾಮಾಣಿಕ ಅಧಿಕಾರಿಗಳ ತಲೆದಂಡವನ್ನು ರಾಜ್ಯ ಸರಕಾರ ಮಾಡುತ್ತಿದೆ: ಬಿ.ಜೆ. ಪುಟ್ಟಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ27 Aug 2017 7:23 PM IST
share
ಪ್ರಾಮಾಣಿಕ ಅಧಿಕಾರಿಗಳ ತಲೆದಂಡವನ್ನು ರಾಜ್ಯ ಸರಕಾರ ಮಾಡುತ್ತಿದೆ: ಬಿ.ಜೆ. ಪುಟ್ಟಸ್ವಾಮಿ

ಕಡೂರು, ಆ.27: ಪ್ರಾಮಾಣಿಕ ಅಧಿಕಾರಿಗಳ ತಲೆದಂಡವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಬಿ.ಜೆ. ಪುಟ್ಟಸ್ವಾಮಿ ಆರೋಪಿಸಿದರು.

ಅವರು ಭಾನುವಾರ ಪಟ್ಟಣದ ಬಿಜಿಎಸ್ ಶಾಲಾ ಆವರಣದಲ್ಲಿ ಜಿ.ಕೆ.ಗಿರೀಶ್ ಉಪ್ಪಾರ ಚಾರಿಟಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ ಮಾತನಾಡಿದರು.

ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎಂ.ಎನ್. ಮೇಘರಿಕ್ ಅವರು ಸರ್ಕಾರದ ಮಾತನ್ನು ಕೇಳಲಿಲ್ಲ ಎಂಬ ದುರುದ್ದೇಶದಿಂದ ಅವರನ್ನು ಕೇವಲ ಒಂದೇ ತಿಂಗಳಲ್ಲಿ ಸ್ಥಾನ ಪಲ್ಲಟ ಮಾಡಿದ ಕೀರ್ತಿ ಸಿದ್ದರಾಮಯ್ಯ ಸರ್ಕಾರಕ್ಕೆ ಸಲ್ಲುತ್ತದೆ ಎಂದು ದೂರಿದರು.

ಮೈಸೂರಿನಲ್ಲಿ ದಕ್ಷ ಆಡಳಿತ ನೀಡಿದ ಜಿಲ್ಲಾಧಿಕಾರಿ ರೇಷ್ಮಾ, ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಮ್ಯಾಥ್ಯ್ ಬಹುಕೋಟಿ ಹಗರಣಗಳ ಬಗ್ಗೆ ವರಧಿ ನೀಡಿದ ಹಿನ್ನೆಲೆಯಲ್ಲಿ ಸಾಕ್ಷಿ ನಾಶ ಪಡಿಸಲು ಅಧಿಕಾರಿಗಳನ್ನು ಬೇರೆ ಸ್ಥಳಗಳಿಗೆ ಎತ್ತಂಗಡಿ ಮಾಡಿದ ಮೂರ್ಖ ಸರ್ಕಾರ ಇದು ಎಂದು ಲೇವಡಿ ಮಾಡಿದರು.

ಮುಖ್ಯಮಂತ್ರಿಗಳಿಗೆ ಕಾನೂನು ಸಲಹೆ ನೀಡಲು ನೇರವಾಗಿ ಉತ್ನತ ಮಟ್ಟದ ಪೊಲೀಸ್ ಅಧಿಕಾರಿಗಳು ಇರುತ್ತಾರೆ. ಆದರೆ ಅವರನ್ನು ಮೂಲೆಗುಂಪು ಮಾಡಿ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಎಲ್ಲಾ ಪ್ರಮುಖ ಸಲಹೆಗಳನ್ನು ಮುಖ್ಯಮಂತ್ರಿಗಳಿಗೆ ನೀಡುತ್ತಿರುವುದು ಕುಚ್ಯೋದ್ಯದ ಸಂಗತಿ ಎಂದರು.

ಕೇಂದ್ರದ ಮಾಜಿ ಸಚಿವೆ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆ ರೇಣುದೇವಿ ಮಾತನಾಡಿ, ಜನಸಾಮಾನ್ಯರಿಗೆ ನೀರು ಬಹುಮುಖ್ಯ ಮೂಲಭೂತ ಅಗತ್ಯಗಳಲ್ಲಿ ಒಂದು ಅಂತಹ ನೀರನ್ನು ನೀಡುತ್ತಿರುವ ಈ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು ಅಭಿನಂದನಾರ್ಯ ಎಂದು ನುಡಿದರು.

ಸಾನಿಧ್ಯ ವಹಿಸಿದ್ದ ಹೊಸದುರ್ಗ ಭಗೀರಥ  ಪೀಠದ ಶ್ರೀ ಪುರೂಶೋತ್ತಮಾನಂದ ಪುರಿ ಸ್ವಾಮಿ ಮಾತನಾಡಿ, ಈ ಉದ್ಯೋಗ ಮೇಳ ಒಂದು ಯಶಸ್ವಿ ಕಾರ್ಯಕ್ರಮ ಇಂದು ಇಲ್ಲಿ ಆಯ್ಕೆಯಾದ ಜನರಿಗೆ ಅವರು ಸಂಬಂಧಪಟ್ಟ ಕಂಪೆನಿಗಳಲ್ಲಿ ಕೆಲಸ ಆರಂಭಿಸುವವರೆಗೆ ಇದರ ನೇತೃತ್ವ ವಹಿಸಿದ ಗಿರೀಶ್ ಜವಾಬ್ದಾರಿ ನಿರ್ವಹಿಸಲಿ ಎಂದು ಸಲಹೆ ನೀಡಿದರು.

ಮತ್ತೋರ್ವ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮಿ ಮಾತನಾಡಿ, ಗಿರೀಶ್ ಉಪ್ಪಾರ ಅವರು ತಮ್ಮ ಈ ಶಾಲೆಯೊಳಗೆ ಉಚಿತವಾಗಿ ಕೊಳವೆಬಾವಿಯನ್ನು ಕೊರೆಸಿ ಶುದ್ಧ ನೀರಿನ ಘಟಕ ಅಳವಡಿಸಿ ಮಕ್ಕಳಿಗೆ ಉಪಯುಕ್ತವಾಗುವ ಕೆಲಸ ಮಾಡಿದ್ದಾರೆ ಎಂದು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಬಿಹಾರ ಪ್ರದೇಶ ಬಿಜೆಪಿ ಅಧ್ಯಕ್ಷ ಜಯಂತ್ ಚೌವ್ಹಾನ್, ಬೆಂಗಳೂರಿನ ಉದ್ಯಮಿ ಅನಿಲ್ ಜೈನ್, ಶೈಕ್ಷಣಿಕ ಸಲಹೆಗಾರ ಹರಿಬಾಬು, ಶ್ರಮರತ್ನ ಪ್ರಶಸ್ತಿ ವಿಜೇತ ಡಾ. ನಾಗರಾಜ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಎಂ. ತಿಪ್ಪೇಶ್, ಬಿಜೆಪಿ ಮುಖಂಡ ಕೆ.ಎಚ್. ಶಂಕರ್, ಪುರಸಭೆ ಉಪಾಧ್ಯಕ್ಷ ಸಿ.ರಾಜೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X