Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಅಲ್ಪ ಉದ್ಯೋಗದ ಸಮಸ್ಯೆ :...

ಭಾರತದಲ್ಲಿ ಅಲ್ಪ ಉದ್ಯೋಗದ ಸಮಸ್ಯೆ : ನೀತಿ ಆಯೋಗ

ವಾರ್ತಾಭಾರತಿವಾರ್ತಾಭಾರತಿ27 Aug 2017 7:50 PM IST
share
ಭಾರತದಲ್ಲಿ ಅಲ್ಪ ಉದ್ಯೋಗದ ಸಮಸ್ಯೆ : ನೀತಿ ಆಯೋಗ

ಹೊಸದಿಲ್ಲಿ, ಆ.27: ಭಾರತವನ್ನು ಕಾಡುತ್ತಿರುವ ಬಹುದೊಡ್ಡ ಸಮಸ್ಯೆಯೆಂದರೆ ಅಲ್ಪ ಉದ್ಯೋಗ ಅಥವಾ ಅಪೂರ್ಣ ಉದ್ಯೋಗ(ಪೂರ್ಣಕಾಲಿಕ ಉದ್ಯೋಗ ಇಲ್ಲದಿರುವುದು) ಎಂದು ನೀತಿ ಆಯೋಗ ತಿಳಿಸಿದೆ.

ಆಮದು ಬದಲಿಗೆ ಸ್ಥಳೀಯ ಮಾರುಕಟ್ಟೆಯ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಿದರೆ ಹಲವು ಸಣ್ಣಪುಟ್ಟ ಉದ್ದಿಮೆಗಳ ಬೆಳವಣಿಗೆಗೆ ಸಹಾಯವಾಗುತ್ತದೆ ಎಂದು ಕಳೆದ ವಾರ ಬಿಡುಗಡೆಗೊಳಿಸಿದ ತನ್ನ ಮೂರು ವರ್ಷಗಳ ಕಾರ್ಯಯೋಜನೆಯಲ್ಲಿ ನೀತಿ ಆಯೋಗ ತಿಳಿಸಿದೆ.

ಕಳೆದ ಮೂರು ದಶಕಕ್ಕೂ ಹೆಚ್ಚಿನ ಅವಧಿಯನ್ನು ಪರಿಗಣಿಸಿದರೆ ನಿರುದ್ಯೋಗದ ಸರಾಸರಿ ಪ್ರಮಾಣ ಅತ್ಯಂತ ಕಡಿಮೆ ಎಂಬುದು ರಾಷ್ಟ್ರೀಯ ಮಾದರಿ ಸಮೀಕ್ಷಾ ಕಚೇರಿ ನಡೆಸಿರುವ ಉದ್ಯೋಗ -ನಿರುದ್ಯೋಗ ಸಮೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಆಯೋಗದ ವರದಿಯಲ್ಲಿ ತಿಳಿಸಲಾಗಿದೆ. ಭಾರತದಲ್ಲಿ ನಿರುದ್ಯೋಗ ಸಮಸ್ಯೆಗಿಂತ ಅಲ್ಪ(ಅರೆ) ಉದ್ಯೋಗದ ಸಮಸ್ಯೆ ತೀವ್ರವಾಗಿದೆ . ಇದೀಗ ಹೆಚ್ಚು ಉತ್ಪಾದಕತೆಯ ಅಧಿಕ ಸಂಬಳದ ಉದ್ಯೋಗವನ್ನು ರೂಪಿಸಬೇಕಿದೆ ಎಂದು 2017-18ರಿಂದ 2019-20ರವರೆಗಿನ ತನ್ನ ಕಾರ್ಯಯೋಜನೆಯಲ್ಲಿ ನೀತಿ ಆಯೋಗ ತಿಳಿಸಿದೆ.

ಜಾಗತಿಕ ಮಾರುಕಟ್ಟೆಯನ್ನು ದೃಷ್ಟಿಯಲ್ಲಿರಿಸಿಕೊಂಡು ‘ಮೇಕ್ ಇನ್ ಇಂಡಿಯ’ ಅಭಿಯಾನವನ್ನು ಮುನ್ನಡೆಸಬೇಕಿದೆ ಎಂದು ಆಯೋಗವು ದಕ್ಷಿಣ ಕೊರಿಯ, ತೈವಾನ್, ಸಿಂಗಾಪುರ ಮುಂತಾದ ಪ್ರಮುಖ ಉತ್ಪಾದನಾ ದೇಶಗಳ ಉದಾಹರಣೆ ಸಹಿತ ತಿಳಿಸಿದೆ.

 ಚೀನಾದಲ್ಲಿ ಬಹುತೇಕ ವಯಸ್ಸಾದ ಕಾರ್ಮಿಕರು ಇರುವ ಕಾರಣ ಅಲ್ಲಿ ಕಾರ್ಮಿಕರ ಸಂಬಳದ ಖರ್ಚು ಹೆಚ್ಚು. ಆದ್ದರಿಂದ ಅಲ್ಲಿರುವ ಹಲವು ಕಾರ್ಮಿಕ ಕೇಂದ್ರೀಕೃತ ಉದ್ದಿಮೆಗಳು ಕಾರ್ಮಿಕರ ಸಂಬಳ ಕಡಿಮೆ ಇರುವ ದೇಶಗಳ ಹುಡುಕಾಟದಲ್ಲಿವೆ. ಭಾರತದಲ್ಲಿ ಹೇರಳ ಮಾನವಸಂಪನ್ಮೂಲ ಹಾಗೂ ಸ್ಪರ್ಧಾತ್ಮಕ ಸಂಬಳಕ್ಕೆ ದುಡಿಯಬಲ್ಲ ಕಾರ್ಮಿಕರು ಇರುವ ಕಾರಣ ಇಂತಹ ಸಂಸ್ಥೆಗಳನ್ನು ಸಹಜವಾಗಿಯೇ ಭಾರತದತ್ತ ಆಕರ್ಷಿಸಬಹುದು ಎಂದು ವರದಿ ತಿಳಿಸಿದೆ.

ಆದ್ದರಿಂದ ಉತ್ಪಾದನೆ ಮತ್ತು ರಫ್ತು ಆಧಾರಿತ ಕಾರ್ಯಯೋಜನೆ ಈಗ ಸಕಾಲಿಕವಲ್ಲ ಎಂದು ವರದಿ ತಿಳಿಸಿದೆ. ಅಲ್ಲದೆ ಬಹುರಾಷ್ಟ್ರೀಯ ಸಂಸ್ಥೆಗಳನ್ನು ಆಕರ್ಷಿಸಲು ಕರಾವಳಿ ಉದ್ಯೋಗ ವಲಯ (ಸಿಇಝೆಡ್)ಗಳನ್ನು ಸ್ಥಾಪಿಸಬೇಕು ಎಂಬ ಸಲಹೆಯನ್ನೂ ನೀಡಿದೆ. ಅಲ್ಲದೆ ಜವಳಿ ಹಾಗೂ ಉಡುಪು ಉದ್ದಿಮೆಗಳಲ್ಲಿ ಇತ್ತೀಚಿನ ದಿನದಲ್ಲಿ ನಿಗದಿತ ಅವಧಿ ಉದ್ಯೋಗ ಎಂಬ ನೂತನ ವ್ಯವಸ್ಥೆ ಜಾರಿಗೆ ಬಂದಿದ್ದು ಈ ಆಯ್ಕೆಯನ್ನು ಇತರ ಕ್ಷೇತ್ರಗಳಿಗೂ ವಿಸ್ತರಿಸಬೇಕಿದೆ ಎಂದು ಆಯೋಗದ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X