Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಎಸ್‌ಎಫ್‌ನಲ್ಲಿ ನೀಡುವ ಆಹಾರವನ್ನು...

ಬಿಎಸ್‌ಎಫ್‌ನಲ್ಲಿ ನೀಡುವ ಆಹಾರವನ್ನು ಯಾರು ಬೇಕಾದರೂ ಪರೀಕ್ಷಿಸಬಹುದು: ಮುಖ್ಯಸ್ಥ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ27 Aug 2017 7:58 PM IST
share
ಬಿಎಸ್‌ಎಫ್‌ನಲ್ಲಿ ನೀಡುವ ಆಹಾರವನ್ನು ಯಾರು ಬೇಕಾದರೂ ಪರೀಕ್ಷಿಸಬಹುದು: ಮುಖ್ಯಸ್ಥ ಶರ್ಮಾ

ಹೊಸದಿಲ್ಲಿ,ಆ.27: ಗಡಿ ರಕ್ಷಣಾ ಪಡೆ(ಬಿಎಸ್‌ಎಫ್)ಯ ಪಾಕಶಾಲೆಗಳಲ್ಲಿ ಯಾವಾಗಲೂ ಉತ್ತಮ ಗುಣಮಟ್ಟದ ಆಹಾರವೇ ತಯಾರಾಗುತ್ತದೆ ಮತ್ತು ಯಾರೇ ಆದರೂ ಅದರ ಯಾವುದೇ ನೆಲೆಗೆ ಯಾವಾಗ ಬೇಕಾದರೂ ದಿಢೀರ್ ಭೇಟಿ ನೀಡಿ ಅದನ್ನು ಪರೀಕ್ಷಿಸಬಹುದು ಎಂದು ಬಿಎಸ್‌ಎಫ್ ಮುಖ್ಯಸ್ಥ ಕೆ.ಕೆ.ಶರ್ಮಾ ಅವರು ರವಿವಾರ ಇಲ್ಲಿ ಸವಾಲು ಹಾಕಿದರು. ಬಿಎಸ್‌ಎಫ್‌ನಲ್ಲಿ ಕಳಪೆ ಗುಣಮಟ್ಟದ ಆಹಾರವನ್ನು ನೀಡಲಾಗುತ್ತಿದೆ ಎಂದು ಯೋಧ ತೇಜ್ ಬಹಾದೂರ್ ಯಾದವ್ ಮಾಡಿದ್ದ ಆರೋಪವನ್ನು ಇತರ ಯೋಧರ ನೈತಿಕ ಸ್ಥೈರ್ಯವನ್ನು ಉಡುಗಿಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಬಳಸಿಕೊಳ್ಳುತ್ತಿದೆ ಎಂದು ಅವರು ದೂರಿದರು.

ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಅವರು, ತಾನು 2012ರಲ್ಲಿ ಹೆಚ್ಚುವರಿ ಡಿಜಿಯಾಗಿ ಬಿಎಸ್‌ಎಫ್‌ಗೆ ಸೇರಿದ್ದು, ಯೋಧರಾಗಲೀ ಅಧಿಕಾರಿಗಳಾಗಲೀ ಆಹಾರದ ಕುರಿತು ಎಂದೂ ದೂರಿರಲಿಲ್ಲ. ವರ್ಗಾವಣೆ ಅಥವಾ ನಿಯೋಜನೆ ಕುರಿತು ವಿವಾದಗಳಿರಬಹುದು. ಹೀಗಾಗಿ ಕಳಪೆ ಆಹಾರದ ಬಗ್ಗೆ ದೂರಿಕೊಂಡು ಈ ವ್ಯಕ್ತಿ(ಯಾದವ್) ಫೇಸ್‌ಬುಕ್‌ನಲ್ಲಿ ವೀಡಿಯೊ ಪೋಸ್ಟ್ ಮಾಡಿದಾಗ ತನಗೆ ತೀವ್ರ ಆಘಾತವಾಗಿತ್ತು ಎಂದು ತಿಳಿಸಿದರು.

ಪಡೆಯಲ್ಲಿ ಈಗಾಗಲೇ ಆರೋಗ್ಯಕರ ವ್ಯವಸ್ಥೆಗಳಿವೆ. ಪಾಕಶಾಲೆಗಳಲ್ಲಿ ತಯಾರಾಗುವ ಆಹಾರವನ್ನು ನಿರಂತರವಾಗಿ ಪರೀಕ್ಷಿಸಲಾಗುತ್ತದೆ. ಆಹಾರವು ಒಂದು ಸಮಸ್ಯೆಯೇ ಅಲ್ಲ ಎಂದ ಅವರು, ಇದನ್ನು ಯಾರು ಬೇಕಾದರೂ ಪರೀಕ್ಷಿಸಬಹುದು. ಆಹಾರದ ಗುಣಮಟ್ಟದ ಬಗ್ಗೆ ತಾನು ಖಾತರಿ ನೀಡುತ್ತೇನೆ ಎಂದರು.

ಈ ವರ್ಷದ ಆರಂಭದಲ್ಲಿ ಸಂಸದೀಯ ಸಮಿತಿಯು ತನ್ನನ್ನು ವಿಚಾರಣೆಗೊಳ ಪಡಿಸಿದಾಗಲೂ ಇದನ್ನೇ ಹೇಳಿದ್ದೇನೆ ಎಂದು ಶರ್ಮಾ ತಿಳಿಸಿದರು.

ಗಡಿಯಲ್ಲಿ ದುರ್ಗಮ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುವ ತಮಗೆ ನೀರಿನಂತಹ ‘ದಾಲ್’ ಮತ್ತು ಸುಟ್ಟು ಕರಕಲಾದ ಚಪಾತಿಗಳನ್ನು ನೀಡಲಾಗುತ್ತಿದೆ ಎಂದು ಯಾದವ್ ಕಳೆದ ಜನವರಿಯಲ್ಲಿ ಆರೋಪಿಸಿದ್ದರು. ವಿಚಾರಣೆಯ ಬಳಿಕ ಈ ಆರೋಪ ಸುಳ್ಳೆಂದು ಕಂಡು ಬಂದಿದ್ದು, ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಯಾದವ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ವೀಡಿಯೊಗಳನ್ನು ಐಎಸ್‌ಐ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅದು ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿಸಿತ್ತು ಎಂದು ಶರ್ಮಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X