Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಧಾರ್ಮಿಕ ನಂಬಿಕೆಯ ನೆಪದಲ್ಲಿ ಹಿಂಸಾಚಾರ...

ಧಾರ್ಮಿಕ ನಂಬಿಕೆಯ ನೆಪದಲ್ಲಿ ಹಿಂಸಾಚಾರ ಸಹಿಸಲಾಗದು: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ27 Aug 2017 9:45 PM IST
share
ಧಾರ್ಮಿಕ ನಂಬಿಕೆಯ ನೆಪದಲ್ಲಿ ಹಿಂಸಾಚಾರ ಸಹಿಸಲಾಗದು: ಪ್ರಧಾನಿ ಮೋದಿ

 ಹೊಸದಿಲ್ಲಿ, ಆ.27: ಧಾರ್ಮಿಕ ನಂಬಿಕೆಯ ನೆಪದಲ್ಲಿ ನಡೆಸುವ ಯಾವುದೇ ರೀತಿಯ ಹಿಂಸಾಚಾರವನ್ನು ಸಹಿಸಲಾಗದು. ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಎಷ್ಟೇ ದೊಡ್ಡ ವ್ಯಕ್ತಿಯಾದರೂ ಕಾನೂನಿನ ಎದುರು ತಲೆಬಾಗಲೇ ಬೇಕು. ಕಾನೂನನ್ನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ ಎಂದು ಡೇರಾ ಸಚ್ಚಾ ಸೌದದ ಮುಖಂಡ ಗುರ್ಮಿತ್ ಸಿಂಗ್ ಬೆಂಬಲಿಗರು ನಡೆಸಿದ ಹಿಂಸಾಚಾರವನ್ನು ಪರೋಕ್ಷವಾಗಿ ಉಲ್ಲೇಖಿಸಿ ಪ್ರಧಾನಿ ಹೇಳಿದರು.

ಹಿಂಸಾತ್ಮಕ ಮಾರ್ಗದಿಂದ ತಮ್ಮ ಅಸಮಾಧಾನ ವ್ಯಕ್ತಪಡಿಸುವ, ಕಾನೂನನ್ನು ಕೈಗೆತ್ತಿಕೊಳ್ಳುವ ವ್ಯಕ್ತಿ ಅಥವಾ ಸಂಘಟನೆಯನ್ನು ಈ ದೇಶವಷ್ಟೇ ಅಲ್ಲ, ಯಾವುದೇ ಸರಕಾರ ಕೂಡಾ ಸಹಿಸಲು ಸಾಧ್ಯವೇ ಇಲ್ಲ . ಕಾನೂನು ಓರ್ವ ವ್ಯಕ್ತಿಯನ್ನು ಅಪರಾಧಿ ಎಂದು ಘೋಷಿಸಿದರೆ ಅಂತವರನ್ನು ಶಿಕ್ಷೆಗೆ ಒಳಪಡಿಸಲಾಗುವುದು. ಇದರಲ್ಲಿ ಬೇರೆ ಮಾತೇ ಇಲ್ಲ ಎಂದು ಅವರು ನುಡಿದರು.

  ಯಾವುದೇ ತೊಂದರೆಯ ನಿವಾರಣೆಗೆ ಅವಕಾಶ ಮತ್ತು ಎಲ್ಲರಿಗೂ ನ್ಯಾಯ ಒದಗಿಸುವ ಅವಕಾಶವನ್ನು ಡಾ ಅಂಬೇಡ್ಕರ್ ರಚಿಸಿರುವ ಸಂವಿಧಾನದಲ್ಲಿ ನೀಡಲಾಗಿದೆ. ಬುದ್ಧ ಮತ್ತು ಮಹಾತ್ಮಾ ಗಾಂಧೀಜಿಯವರಂತ ಮಹಾನ್ ವ್ಯಕ್ತಿಗಳು ಹಾಕಿಕೊಟ್ಟ ಅಹಿಂಸೆಯ ಪರಂಪರೆಯನ್ನು ಮರೆಯಬಾರದು ಎಂದವರು ಹೇಳಿದರು.

  ತಮ್ಮ ತಿಂಗಳ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಮಾತನಾಡಿದ ಪ್ರಧಾನಿ, ಬುದ್ಧ, ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್‌ರಂತಹ ಮಹಾನ್ ನಾಯಕರಿದ್ದ ನಾಡು ನಮ್ಮದು. ಶತಮಾನಗಳಿಂದಲೂ ನಮ್ಮ ಪೂರ್ವಜರು ಸಾಮುದಾಯಿಕ ವೌಲ್ಯ, ಅಹಿಂಸೆ, ಪರಸ್ಪರ ಗೌರವಿಸುವ ಮನೋಭಾವನೆಯನ್ನು ನಮಗೆ ಕೊಡುಗೆಯಾಗಿ ನೀಡಿದ್ದಾರೆ. ‘ಅಹಿಂಸೋ ಪರಮೋ ಧರ್ಮ’ ಎಂಬುದೇ ನಮ್ಮ ನಾಡಿದ ಧ್ಯೇಯವಾಕ್ಯವಾಗಿದೆ ಎಂದರು.

ಗಾಂಧೀ ಜಯಂತಿ ಆಚರಣೆಗೆ ಪೂರ್ವಭಾವಿಯಾಗಿ ‘ ಸ್ವಚ್ಛತಾ ಕಾರ್ಯ ಒಂದು ಸೇವೆ’ ಎಂಬ ಅಭಿಯಾನದಲ್ಲಿ ತೊಡಗುವಂತೆ ಜನತೆಗೆ ಕರೆ ನೀಡಿದ ಅವರು, ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಜನತೆ ‘ಪರಿವರ್ತನೆಗಾಗಿ ಕಲಿಸು, ಸಶಕ್ತತೆಗೆ ಶಿಕ್ಷಣ ನೀಡು, ಮುನ್ನಡೆಸಲು ಕಲಿ’ ಎಂಬ ಸಂಕಲ್ಪ ಕೈಗೊಳ್ಳಬೇಕು ಎಂದರು.

 ಜಮೀಯತ್-ಉಲೆಮ-ಇ- ಹಿಂದ್ ಸಂಘಟನೆಯಡಿ ಮುಸ್ಲಿಮರು ಇತ್ತೀಚೆಗೆ 22 ದೇವಸ್ಥಾನ ಹಾಗೂ ಎರಡು ಮಸೀದಿಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ್ದರಲ್ಲದೆ, ಗುಜರಾತ್‌ನ ನೆರೆಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಕೈಜೋಡಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X