Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಡಿದಾಟಿದ 70 ರೋಹಿಂಗ್ಯಗಳನ್ನು ಮರಳಿ...

ಗಡಿದಾಟಿದ 70 ರೋಹಿಂಗ್ಯಗಳನ್ನು ಮರಳಿ ಮ್ಯಾನ್ಮಾರ್‌ಗೆ ಹಸ್ತಾಂತರಿಸಿದ ಬಾಂಗ್ಲಾ

ವಾರ್ತಾಭಾರತಿವಾರ್ತಾಭಾರತಿ27 Aug 2017 10:47 PM IST
share
ಗಡಿದಾಟಿದ 70 ರೋಹಿಂಗ್ಯಗಳನ್ನು ಮರಳಿ ಮ್ಯಾನ್ಮಾರ್‌ಗೆ ಹಸ್ತಾಂತರಿಸಿದ ಬಾಂಗ್ಲಾ

ಢಾಕಾ,ಆ.27: ಮ್ಯಾನ್ಮಾರ್ ಸೇನೆ ಹಾಗೂ ಬಂಡುಕೋರರ ನಡುವೆ ಕಳೆದ ಮೂರು ದಿನಗಳಿಂದ ಭೀಕರ ಘರ್ಷಣೆ ನಡೆಯುತ್ತಿರುವ ರಾಕ್ನೆ ರಾಜ್ಯದಿಂದ ಬಾಂಗ್ಲಾದ ಗಡಿದಾಟಲು ಯತ್ನಿಸಿದ 70 ರೋಹಿಂಗ್ಯ ಮುಸ್ಲಿಮರನ್ನು ಬಾಂಗ್ಲಾ ಸೈನಿಕರು ಬಂಧಿಸಿ, ಬಲವಂತವಾಗಿ ಮ್ಯಾನ್ಮಾರ್‌ಗೆ ವಾಪಸ್ ಕಳುಹಿಸಿದ ಘಟನೆ ರವಿವಾರ ವರದಿಯಾಗಿದೆ.

 ಮ್ಯಾನ್ಮಾರ್‌ನ ಉತ್ತರದ ರಾಜ್ಯವಾದ ರಾಖಿನ್‌ನಿಂದ ಶನಿವಾರ ರಾತ್ರಿ ಬಾಂಗ್ಲಾದೊಳಗೆ ಪ್ರವೇಶಿಸಲು ಯತ್ನಿಸುತ್ತಿದ್ದ ರೋಹಿಂಗ್ಯ ಮುಸ್ಲಿಮರ ಮೇಲೆ ಮ್ಯಾನ್ಮಾರ್ ಸೇನಾಪಡೆಗಳು ಮೋರ್ಟಾರ್ ಹಾಗೂ ಮೆಶಿನ್‌ಗನ್‌ಗಳಿಂದ ದಾಳಿ ನಡೆಸಿದ್ದರು.

 ಅಪಾಯವನ್ನು ಲೆಕ್ಕಿಸದೆಯೇ ಬಾಂಗ್ಲಾದ ಗಡಿದಾಟಿದ 70 ಮಂದಿ ರೋಹಿಂಗ್ಯ ಮುಸ್ಲಿಮರು ಕುಟುಪಾಲಾಂಗ್ ನಿರಾಶ್ರಿತ ಶಿಬಿರದ ದಾರಿಯಾಗಿ ನಾಲ್ಕು ಕಿ.ಮೀ. ಸಾಗಿದಾಗ ಅವರನ್ನು ಬಾಂಗ್ಲಾ ಸೈನಿಕರು ಬಂಧಿಸಿದ್ದರು ಕುಟುಪಾಲಾಂಗ್ ನಿರಾಶ್ರಿತ ಶಿಬಿರದಲ್ಲಿ ಈಗಾಗಲೇ ಸಾವಿರಾರು ರೋಹಿಂಗ್ಯ ನಿರಾಶ್ರಿತರು ನೆಲೆಸಿದ್ದಾರೆ.

  ಗಡಿದಾಟಿ ಬಂದ ಎಲ್ಲಾ 70 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಆನಂತರ ಅವರನ್ನು ಗಡಿಭದ್ರತಾ ಸೈನಿಕರು ಮ್ಯಾನ್ಮಾರ್‌ಗೆ ಹಿಂದಕ್ಕೆ ಕಳುಹಿಸಿದ್ದಾರೆ ಎಂದು ಬಾಂಗ್ಲಾದ ಸ್ಥಳೀಯ ಪೋಲೀಸ್ ವರಿಷ್ಠ ಅಬುಲ್ ಖಾಯೆರ್ ತಿಳಿಸಿದ್ದಾರೆ.

 ಈ ಮಧ್ಯೆ ಬಾಂಗ್ಲಾ ಸರಕಾರವು ಯಾವುದೇ ರೋಹಿಂಗ್ಯ ಮುಸ್ಲಿಮರು ಅಕ್ರಮವಾಗಿ ಪ್ರವೇಶಿಸುವುಕ್ಕೆ ಅನುಮತಿ ನೀಡದಂತೆ ಕಾಕ್ಸ್‌ಬಜಾರ್ ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮ್ಯಾನ್ಮಾರ್ ಗಡಿಗೆ ತಾಗಿಕೊಂಡಿರುವ ಈ ಜಿಲ್ಲೆಯಲ್ಲಿ ಹಲವಾರು ರೋಹಿಂಗ್ಯ ನಿರಾಶ್ರಿತ ಶಿಬಿರಗಳಿದ್ದು, 4 ಲಕ್ಷಕ್ಕೂ ಅಧಿಕ ಮಂದಿ ವಾಸವಾಗಿದ್ದಾರೆ.

 ಆದರೆ ತೀವ್ರವಾದ ಗಡಿ ಕಾವಲಿನ ನಡುವೆಯೂ ಸುಮಾರು3 ಸಾವಿರ ಮಂದಿ ರೋಹಿಂಗ್ಯ ಮುಸ್ಲಿಮರು ಕಳೆದ ಶುಕ್ರವಾರದಿಂದೀಚೆಗೆ ನಿರಾಶ್ರಿತ ಶಿಬಿರವನ್ನು ತಲುಪಿದ್ದಾರೆಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ರಖ್ನೆಯಲ್ಲಿ ಶುಕ್ರವಾರದಿಂದ ರೊಹಿಂಗ್ಯ ಬಂಡುಕೋರರು ಹಾಗೂ ಸರಕಾರಿ ಪಡೆಗಳ ನಡುವೆ ನಡೆಯುತ್ತಿರುವ ಘರ್ಷಣೆಯಲ್ಲಿ ಈವರೆಗೆ ಕನಿಷ್ಠ 100 ಮಂದಿ ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X