Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯಡಿಯೂರಪ್ಪ ಮನೆಯಲ್ಲಿ ದಲಿತ ಕುಟುಂಬಗಳಿಗೆ...

ಯಡಿಯೂರಪ್ಪ ಮನೆಯಲ್ಲಿ ದಲಿತ ಕುಟುಂಬಗಳಿಗೆ ಹೋಳಿಗೆ ಊಟ

ವಾರ್ತಾಭಾರತಿವಾರ್ತಾಭಾರತಿ28 Aug 2017 6:54 PM IST
share
ಯಡಿಯೂರಪ್ಪ ಮನೆಯಲ್ಲಿ ದಲಿತ ಕುಟುಂಬಗಳಿಗೆ ಹೋಳಿಗೆ ಊಟ

ಬೆಂಗಳೂರು, ಆ.28: ಜನಸಂಪರ್ಕ ಅಭಿಯಾನದ ವೇಳೆ ತನಗೆ ಆತಿಥ್ಯ ನೀಡಿದ್ದ ದಲಿತ ಕುಟುಂಬಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತನ್ನ ಮನಗೆ ಬರಮಾಡಿಕೊಂಡು ಹೋಳಿಗೆ ಊಟ ಹಾಕಿ ಸತ್ಕರಿಸಿದರು.

ಸೋಮವಾರ ನಗರದ ಡಾಲರ್ಸ್‌ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ 33 ದಲಿತ ಕುಟುಂಬದ ಸದಸ್ಯರು ಆಗಮಿಸಿದರು. ಈ ವೇಳೆ ಯಡಿಯೂರಪ್ಪ, ಪಕ್ಷದ ಕಾರ್ಯಕರ್ತರು ಹಾಗೂ ಮನೆಯ ಸದಸ್ಯರು ಅತಿಥಿಗಳನ್ನು ನಗುಮುಖದಿಂದ ಬರಮಾಡಿಕೊಂಡು, ಊಟ ಉಪಚಾರ ಮಾಡಿದರು.

ಹೋಳಿಗೆ ಊಟ: ಮನೆಗೆ ಬರುವ ಅತಿಥಿಗಳಿಗಾಗಿ ಯಡಿಯೂರಪ್ಪ ಮನೆಯಲ್ಲಿಯೇ ಊಟವನ್ನು ಸಿದ್ಧಪಡಿಸಿದ್ದರು. ಹೋಳಿಗೆ, ಪಲಾವ್, ಅನ್ನ ಸಂಬಾರ್, ಜಾಂಗೀರನ್ನು ತಯಾರಿಸಲಾಗಿತ್ತು. ಪ್ರಯಾಣದ ಕುಶಲೋಪಚರ ವಿಚಾರಿಸಿದ ಬಳಿಕ ಯೂಡಿರಪ್ಪ ತಮ್ಮ ಜೊತೆಯಲ್ಲಿಯೇ ದಲಿತ ಕುಟುಂಬಗಳನ್ನು ಊಟಕ್ಕೆ ಆಹ್ವಾನಿಸಿದರು. ಊಟದ ನಂತರ ಅತಿಥಿಗಳಿಗೆ ಸೀರೆ ಹಾಗೂ ಪಂಚೆಯನ್ನು ಉಡುಗೊರೆಯಾಗಿ ನೀಡಲಾಯಿತು.

ಈ ವೇಳೆ ಮಾತನಾಡಿದ ಯಡಿಯೂರಪ್ಪ, ಜನಸಂಪರ್ಕ ಅಭಿಯಾನದ ವೇಳೆ ದಲಿತರ ಮನೆಗಳಿಗೆ ಕೇವಲ ಊಟಕ್ಕೆ ಹೋಗಲಿಲ್ಲ. ಅವರ ನಿಜವಾದ ಸ್ಥಿತಿಯನ್ನು ತಿಳಿಯಬೇಕಾಗಿತ್ತು. ಹೀಗಾಗಿ ಅವರಿಗೆ ಮನೆಗೆ ಭೇಟಿ ನೀಡಿದೆ. ಸ್ವಾತಂತ್ರ ಬಂದು 70 ವರ್ಷಗಳು ಕಳೆದರು ದಲಿತ ಸಮುದಾಯ ಕನಿಷ್ಠ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಕುರಿತು ಅರಿವಿಗೆ ಬಂತು ಎಂದು ವಿಷಾದಿಸಿದರು.

ದಲಿತ ಸಮುದಾಯದ ಉದ್ದೇಶಪೂರ್ವಕವಾಗಿ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಶಿಕ್ಷಣ ಕುರಿತು ಹೆಚ್ಚಿನ ಜಾಗೃತಿಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ವತಿಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ದಲಿತ ಸಮುದಾಯದ ಮುಂದಿನ ಪೀಳಿಗೆಯನ್ನು ಆರ್ಥಿಕವನ್ನು ಸದೃಢರನ್ನಾಗಿ ಮಾಡಬೇಕಾಗಿದೆ ಎಂದು ತಿಳಿಸಿದರು.

ನನ್ನ ಆಡಳಿತಾವಧಿಯಲ್ಲಿ ಹೆಣ್ಣು ಮಕ್ಕಳಿಗೆ ಭಾಗ್ಯ ಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದೆ. ಇದರ ಪ್ರಯೋಜನ ಈಗ ತಿಳಿಯುವುದಿಲ್ಲ. ಹೆಣ್ಣು ಮಕ್ಕಳಗೆ 18ವರ್ಷದ ನಂತರ ಅವರ ಖಾತೆಗೆ 2 ಲಕ್ಷ ರೂ.ಹೆಚ್ಚು ಹಣ ಬರಲಿದೆ. ಆಗ ನಾನು ಮಾಡಿದ ಜನಪರ ಯೋಜನೆಯ ಕುರಿತು ಜನತೆಗೆ ತಿಳಿಯಲಿದೆ ಎಂದು ಹೇಳಿದರು.

ಚಿತ್ರದುರ್ಗ ಜಿಲ್ಲೆಯ ಬಸವ ಮೂರ್ತಿ ಮಾದಾರ ಚೆನ್ನಯ್ಯ ಮಾತನಾಡಿ, 12ನೆ ಶತಮಾನದಲ್ಲಿ ಬಸವಣ್ಣ ಮತ್ತು ಮಾದಾರ ಚೆನಯ್ಯ ಅನ್ಯೋನ್ಯತೆಯ ದ್ಯೋತಕವಾಗಿದ್ದರು. ಇದನ್ನು ಮುಂದುವರೆಸುವ ನಿಟ್ಟಿನಲ್ಲಿ ಯಡಿಯೂರಪ್ಪ ಮುಂದಾಗಿರುವುದು ಸಂತಸ ತಂದಿದೆ ಎಂದು ತಿಳಿಸಿದರು.

ದಲಿತರ ಮೇಲೆ ದೌರ್ಜನ್ಯವಾಗುತ್ತಿರುವುದು ಹಿಂದುಳಿದ ಜಾತಿಗಳಿಂದಲೇ ಹೊರತು ಮೇಲ್ವರ್ಗದವರಿಂದಲ್ಲ. ಕೇವಲ ತಮ್ಮ ಅಧಿಕಾರದ ಲಾಲಸೆಗಾಗಿ ದಲಿತರನ್ನು ಬಳಕೆ ಮಾಡಿಕೊಳ್ಳುವ ಮನಸ್ಥಿತಿಗಳು ಹೆಚ್ಚಾಗುತ್ತಿದೆ. ಈ ಬಗ್ಗೆ ದಲಿತ ಸಮುದಾಯಕ್ಕೆ ಚೆನ್ನಾಗಿ ಅರಿವಿದೆ ಎಂದ ಅವರು, ಹಿಂದುಳಿದ ಹಾಗೂ ದಲಿತ ಸಮುದಾಯದ ಹರಿಕಾರನೆಂದು ಬಿಂಬಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತ ಸಮುದಾಯ ಅಧಿಕಾರಿ ರತ್ನಪ್ರಭಾರನ್ನು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಯಾಕೆ ನೇಮಿಸಿಲ್ಲ. ಕೇವಲ ಮಾತಿನಲ್ಲಿ ದಲಿತ ಪರ ಘೋಷಣೆಗಳನ್ನು ಕೂಗುವುದರಿಂದ ಯಾವುದೇ ಪ್ರಯೋಜವಾಗುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಶೋಭಾ ಕರಂದ್ಲಾಜೆ, ಎ.ನಾರಾಯಣ ಸ್ವಾಮಿ, ಶಾಸಕ ಬಿ.ವೈ.ರಾಘವೇಂದ್ರ, ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ, ಮುಖಂಡರಾದ ಕೆ. ಶಿವರಾಂ, ಬಿ.ಜೆ.ಪುಟ್ಟಸ್ವಾಮಿ ಮತ್ತಿತರರಿದ್ದರು.

ನಾನು ದಲಿತ ಮನೆಗಳಿಗೆ ಭೇಟಿ ನೀಡಿದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸುವುದು ಅವರಿಗೆ ಶೋಭೆ ತರುವುದಿಲ್ಲ. ನಾನಾದರು ದಲಿತರ ಮನೆಗೆ ಹೋಗಿದ್ದೇನೆ. ಹಾಗೂ ಅವರನ್ನು ಕರೆದು ಸತ್ಕರಿಸಿದ್ದೇನೆ. ಆದರೆ, ಸಿದ್ದರಾಮಯ್ಯ ಎಂದಾದರು ದಲಿತರನ್ನು ತಮ್ಮ ಮನೆಗಳಿಗೆ ಬರಮಾಡಿಕೊಂಡಿದ್ದಾರೆಯೇ.

 ಬಿ.ಎಸ್.ಯಡಿಯೂರಪ್ಪ 

ಬಿಜೆಪಿ ರಾಜ್ಯಾಧ್ಯಕ್ಷ ಹಾಸನದಲ್ಲಿರುವ ನನ್ನ ಮನೆಗೆ ಯಡಿಯೂರಪ್ಪ ಬಂದಿದ್ದರು. ಅವರ ಊಟಕ್ಕೆ ಹೋಳಿಗೆ, ರೊಟ್ಟಿ, ಹುಚ್ಚೆಳ್ಳು ಚಟ್ನಿ ಮಾಡಿದ್ದೆ. ಅವರು ನನ್ನ ಮನೆಗೆ ಬಂದಿದ್ದು ತುಂಬಾ ಸಂತೋಷವಾಗಿತ್ತು. ಆದರೆ, ಅವರ ಮನೆಗೆ ನಮ್ಮನ್ನು ಕರೆಸುತ್ತಾರೆಂದು ಕನಸಿನಲ್ಲಿಯೇ ಅಂದುಕೊಂಡಿರಲಿಲ್ಲ. ನಮ್ಮನ್ನು ಕರೆದು ಊಟ ಹಾಕಿ ಸತ್ಕರಿಸಿದ ಈ ಘಟನೆಯನ್ನು ಎಂದಿಗೂ ಮರೆಯುವುದಿಲ್ಲ.

-ರುಕ್ಮಿಣಿ ದಲಿತ ಮಹಿಳೆ ಹಾಸನ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X