Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆತ್ಯಾಧುನಿಕ ಕೃಷಿ ಉಪಕರಣಗಳನ್ನು ರೈತರಿಗೆ...

ಆತ್ಯಾಧುನಿಕ ಕೃಷಿ ಉಪಕರಣಗಳನ್ನು ರೈತರಿಗೆ ಒದಗಿಸಲಿ: ರಾಜ್ಯಪಾಲ ವಜುಭಾಯಿ ವಾಲಾ

ವಾರ್ತಾಭಾರತಿವಾರ್ತಾಭಾರತಿ28 Aug 2017 7:02 PM IST
share
ಆತ್ಯಾಧುನಿಕ ಕೃಷಿ ಉಪಕರಣಗಳನ್ನು ರೈತರಿಗೆ ಒದಗಿಸಲಿ: ರಾಜ್ಯಪಾಲ ವಜುಭಾಯಿ ವಾಲಾ

ಬೆಂಗಳೂರು, ಆ. 28: ಬೆಳೆ ನಷ್ಟ ತಪ್ಪಿಸಲು ಅಗ್ಗದ ದರದಲ್ಲಿ ಆತ್ಯಾಧುನಿಕ ಕೃಷಿ ಉಪಕರಣಗಳನ್ನು ರೈತರಿಗೆ ಒದಗಿಸಲು ಸರಕಾರ ಮುಂದಾಗಲಿ ಎಂದು ರಾಜ್ಯಪಾಲ ವಜುಭಾಯ್ ವಾಲಾ ಹೇಳಿದ್ದಾರೆ.

ಸೋಮವಾರ ನಗರದ ತುಮಕೂರು ರಸ್ತೆಯಲ್ಲಿರುವ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮೀಡಿಯಾ ಟುಡೇ ಗ್ರೂಪ್ ಸಹಯೋಗದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಹಮ್ಮಿಕೊಂಡಿರುವ ‘ಕೃಷಿ ತಂತ್ರಜ್ಞಾನ ಮತ್ತು ಫುಡೆಕ್ಸ್-2017’ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿಯಲ್ಲಿ ಯಾಂತ್ರೀಕರಣ ಹೆಚ್ಚಾದ ಬಳಿಕ ಖಾಸಗಿ ಕಂಪೆನಿಗಳು ಕೃಷಿ ಉಪಕರಣಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡುತ್ತಿವೆ. ಈ ಪೈಪೋಟಿಯಲ್ಲಿ ಕೃಷಿ ಯಂತ್ರಗಳ ಬೆಲೆಯು ಗಗನಕ್ಕೇರಿದೆ. ಇದರಿಂದ ಕೆಳ ಮತ್ತು ಮಧ್ಯಮ ಹಂತದ ಕೃಷಿಕರಿಗೆ ಕೃಷಿ ಉಪಕರಣಗಳು ಗಗನ ಕುಸುಮವಾಗಿವೆ ಎಂದರು.

ಬೆಳೆ ನಷ್ಟವನ್ನು ತಪ್ಪಿಸಲು ಅಗ್ಗದ ಬೆಲೆಯಲ್ಲಿ ರೈತರಿಗೆ ಅತ್ಯಾಧುನಿಕ ಕೃಷಿ ಉಪಕರಣಗಳನ್ನು ಪೂರೈಸುವ ಕೆಲಸ ಆಗಬೇಕಿದೆ. ಸರಕಾರಗಳು ಈ ಕುರಿತು ಹೆಚ್ಚು ಗಮನ ಹರಿಸಬೇಕು. ಸುಲಭ ನಿರ್ವಹಣೆಯ ಉಪಕರಣಗಳನ್ನು ರೈತರಿಗೆ ಒದಗಿಸುವುದರಿಂದ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದರು.

ಮೀಡಿಯಾ ಟುಡೇ ಗ್ರೂಪ್ ಮುಖ್ಯ ಸಮನ್ವಯಾಧಿಕಾರಿ ಎಸ್.ಜಾಫರ್ ನಖ್ವಿ ಮಾತನಾಡಿ, ಕೃಷಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ನೀಡುವ ಸುಧಾರಿತ ತಂತ್ರಜ್ಞಾನದ ಯಂತ್ರೋಪಕರಣಗಳ ಬಳಕೆ ಬಗ್ಗೆ ಮೇಳದಲ್ಲಿ ಮಾಹಿತಿ ನೀಡಲಾಗುತ್ತದೆ. ಕೃಷಿ ಕ್ಷೇತ್ರದ ಹೊಸ ಆವಿಷ್ಕಾರ, ಸುಧಾರಿತ ಯಂತ್ರೋಪಕರಣ ಪರಿಚಯಿಸುವುದು ಮೇಳದ ಉದ್ದೇಶ. ಸಂಸ್ಕರಿತ ಆಹಾರ ತಯಾರಿಕೆ ಬಗ್ಗೆಯೂ ಮಾಹಿತಿ ಸಿಗಲಿದೆ ಎಂದರು.

ಆ.28ರಿಂದ ಮೂರು ದಿನಗಳ ಕಾಲ ನಡೆಯುವ ಮೇಳದಲ್ಲಿ ಚೀನಾ, ಜಪಾನ್, ಕೊರಿಯಾ, ತೈವಾನ್ ಸೇರಿದಂತೆ 30ಕ್ಕೂ ಹೆಚ್ಚು ರಾಷ್ಟ್ರಗಳು ಪಾಲ್ಗೊಳ್ಳಲಿವೆ. 400ಕ್ಕೂ ಹೆಚ್ಚು ಪ್ರದರ್ಶನಕಾರರು ಭಾಗವಹಿಸಲಿದ್ದಾರೆ. 45,000ಕ್ಕೂ ಹೆಚ್ಚು ಮಂದಿ ಭೇಟಿ ನೀಡುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಆಯುಕ್ತ ಜಿ.ಸತೀಶ್, ಎಫ್‌ಕೆಸಿಸಿಐ ಅಧ್ಯಕ್ಷ ಕೆ.ರವಿ, ಉಪಾಧ್ಯಕ್ಷ ಸುಧಾಕರ್ ಎಸ್.ಶೆಟ್ಟಿ, ಮೀಡಿಯಾ ಟುಡೇ ಸಿಇಒ ಎಂ.ಬಿ.ನಖ್ವಿ ಸೇರಿ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X