Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರತಿ ಭಾಷೆ ತನ್ನ ನೆಲದಲ್ಲಿ ಪಾರಮ್ಯ...

ಪ್ರತಿ ಭಾಷೆ ತನ್ನ ನೆಲದಲ್ಲಿ ಪಾರಮ್ಯ ಹೊಂದಿರಬೇಕು: ನಾಗತಿಹಳ್ಳಿ

ವಾರ್ತಾಭಾರತಿವಾರ್ತಾಭಾರತಿ28 Aug 2017 8:55 PM IST
share
ಪ್ರತಿ ಭಾಷೆ ತನ್ನ ನೆಲದಲ್ಲಿ ಪಾರಮ್ಯ ಹೊಂದಿರಬೇಕು: ನಾಗತಿಹಳ್ಳಿ

ಮಣಿಪಾಲ, ಆ.28: ಪ್ರತಿಯೊಂದು ಭಾಷೆಯೂ ತನ್ನ ನೆಲದಲ್ಲಿ ಪಾರಮ್ಯ ವನ್ನು ಹೊಂದಿರಬೇಕು. ಪ್ರಾದೇಶಿಕ ಭಾಷೆಯೊಂದು ಅವನತಿ ಹೊಂದಿದರೆ, ಅದರೊಂದಿಗೆ ಆ ಪ್ರದೇಶದ ಸಾಂಸ್ಕೃತಿಕ ಸಂಪತ್ತು ಜಗತ್ತಿನಿಂದ ನಶಿಸಿಹೋಗುವ ಆತಂಕವಿದೆ ಎಂದು ಖ್ಯಾತ ಕನ್ನಡ ಚಲನಚಿತ್ರ ನಿರ್ದೇಶಕ, ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಮಣಿಪಾಲ ವಿವಿಯ ಸಿಎಲ್‌ಐಎಲ್ ವತಿಯಿಂದ ಗಂಗೂಬಾಯಿ ಹಾನಗಲ್ ಸಭಾಂಗಣದಲ್ಲಿ ಆಯೋಜಿಸಲಾದ ‘ಭಾಷಾ ರಾಜಕೀಯ ಮತ್ತು ಕಲಿಕಾ ಮಾಧ್ಯಮ: ಬಹುಭಾಷಾ ಜಗತ್ತಿನ ಸವಾಲುಗಳು’ ವಿಷಯದ ಕುರಿತ ವಿಚಾರಸಂಕಿರಣದಲ್ಲಿ ಅವರು ತನ್ನ ಅಭಿಪ್ರಾಯಗಳನ್ನು ಮಂಡಿಸಿ ಮಾತನಾಡುತಿದ್ದರು.

ಭಾಷೆಯ ಜೊತೆಗೆ ಅನೇಕ ಸಾಂಸ್ಕೃತಿಕ ವಿಷಯಗಳು ತಳಕುಹಾಕಿಕೊಂಡಿವೆ. ಭಾಷೆಯೊಂದು ಅಳಿದರೆ, ಇವೆಲ್ಲವೂ ಕಡಿದುಕೊಂಡು ಹೋಗುತ್ತವೆ. ಇಂಥ ದಿನಗಳು ಕನ್ನಡಕ್ಕೆ ಬಾರದಿರಲಿ ಎಂದವರು ಆತಂಕದಿಂದ ನುಡಿದರು.

ಕಲಿಕಾ ಮಾಧ್ಯಮದ ಕುರಿತಂತೆ, ರಾ.ಶಿಕ್ಷಣ ನೀತಿಯ ಕುರಿತಂತೆ ದೇಶದ ಉಚ್ಚ ನ್ಯಾಯಾಲಯ ನೀಡಿದ ತೀರ್ಪು, ಪ್ರಾದೇಶಿಕ ಭಾಷೆಗಳ ವಿರುದ್ಧ ಬಂದ ತೀರ್ಪಲ್ಲ. ಇಂಗ್ಲೀಷ್ ಶಾಲೆಗಳು ಲಾಬಿಯ ಮೂಲಕ ಪಡೆದುಕೊಂಡ ತೀರ್ಪು. ನಮ್ಮ ಇಚ್ಛಾಶಕ್ತಿಯ ಕೊರತೆಯಿಂದ ಬಂದಿರುವ ತೀರ್ಪು ಇದಾಗಿದೆ ಎಂದವರು ಅಭಿಪ್ರಾಯಪಟ್ಟರು.

ತನ್ನ ‘ಅಮೆರಿಕಾ ಅಮೆರಿಕಾ’ ಹಾಗೂ ‘ಮಾತಾಡ್ ಮಾತಾಡ್ ಮಲ್ಲಿಗೆ’ ಚಿತ್ರವನ್ನು ಕಾನ್ ಚಿತ್ರೋತ್ಸವದಲ್ಲಿ ಪ್ರದರ್ಶಿಸಿದಾಗ ಅದನ್ನು ಮೆಚ್ಚಿದ ಪ್ರೆಂಚ್ ವಿಮರ್ಶಕರೊಬ್ಬರು ಈ ಚಿತ್ರವನ್ನು ಇಂಗ್ಲೀಷ್ ಭಾಷೆಯಲ್ಲಿ ನಿರ್ಮಿಸಿದ್ದರೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸುತ್ತಿತ್ತು ಎಂದು ಸಲಹೆ ನೀಡಿದರು. ಆದರೆ ಇದನ್ನು ನಾನು ಕನ್ನಡದಲ್ಲಿ ಮಾತ್ರ ಮಾಡಲು ಸಾಧ್ಯ. ಬೇರೆ ಯಾವುದೇ ಭಾಷೆಯಲ್ಲಿ ಇದನ್ನು ಮಾಡಲು ನನಗೆ ಸಾಧ್ಯವಿಲ್ಲ ಎಂದು ತಿಳಿಸಿದ್ದೆ ಎಂದರು.

ಕಲಿಕೆಯಲ್ಲಿ ಮಾಧ್ಯಮವಾಗಿ ಕನ್ನಡವನ್ನು ಸಮರ್ಥಿಸಿಕೊಳ್ಳುವುದೆಂದರೆ ಅದೊಂದು ಭಾವನಾತ್ಮಕ ಪ್ರತಿಕ್ರಿಯೆಯಲ್ಲ. ಭಾಷೆಯೊಂದು ಸರಕಲ್ಲ. ಅದು ನಮ್ಮೆಲ್ಲರ ಅಂತರಾತ್ಮದ ಧ್ವನಿ. ಮಗು ಎಷ್ಟು ಭಾಷೆಯನ್ನು ಬೇಕಿದ್ದರೆ ಕಲಿಯಲಿ. ಆದರೆ ಮಾತೃಭಾಷೆಯನ್ನು ಮಾತ್ರ ನಿರ್ಲಕ್ಷಿಸಬಾರದು. ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ರಕ್ಷಿಸಲು ಸಂವಿಧಾನ ತಿದ್ದುಪಡಿಯೊಂದು ಆಗಲೇ ಬೇಕಿದೆ ಎಂದು ನಾಗತಿಹಳ್ಳಿ ಹೇಳಿದರು.

ಬೆಂಗಳೂರು ದೂರದರ್ಶನದಲ್ಲಿ ‘ಥಟ್ ಅಂಥ ಹೇಳಿ’ ಕಾರ್ಯಕ್ರಮದ ನಿರೂಪಕ ಹಾಗೂ ಕನ್ನಡ ಹೋರಾಟಗಾರ ಡಾ.ನಾ.ಸೋಮೇಶ್ವರ್ ಅವರು ಮಾತನಾಡಿ, ಮಗುವಿನ ಮಾನಸಿಕ, ಬೌದ್ಧಿಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಬೆಳೆವಣಿಗೆಯು ಶಿಕ್ಷಣದಿಂದ ಆಗಬೇಕು ಎಂದ ಅವರು ಬಹುಭಾಷಾ ಕಲಿಕೆಯಲ್ಲಿ ಮಗುವಿನ ಸಾಮರ್ಥ್ಯವನ್ನು ವೈಜ್ಞಾನಿಕವಾಗಿ ವಿಶ್ಲೇಷಣೆಗೊಳ ಪಡಿಸಿದರು.

 ಪ್ರಾದೇಶಿಕ ಭಾಷೆಯನ್ನು ಕಲಿಸದ ಶಿಕ್ಷಣ ವ್ಯವಸ್ಥೆ ಮಗುವಿನ ಬಲ ಭಾಗದ ಮೆದುಳಿನ ಬೆಳವಣಿಗೆಗೆ ಪ್ರತಿಕೂಲವಾಗಿರುತ್ತದೆ ಎಂದರು. ದಕ್ಷಿಣ ಭಾರತದ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನವನ್ನು ಖಂಡಿಸಿದ ಅವರು ಅದನ್ನು ಮೂರನೇ ಭಾಷೆಯಾಗಿ ಕಲಿಸುವುದನ್ನು ಸಹ ನಾವು ತಿರಸ್ಕರಿಸಬೇಕು ಎಂದರು.

ಖ್ಯಾತ ಶಿಕ್ಷಣ ತಜ್ಞ ಹಾಗೂ ಉಡುಪಿಯ ಡಾ.ಟಿಎಂಎ ಪೈ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಮಹಾಬಲೇಶ್ವರ ರಾವ ಅವರು ಮಾತನಾಡಿ, ದೇಶದಲ್ಲಿ 80ರ ದಶಕದ ಬಳಿಕ ಪ್ರಾದೇಸಿ ಭಾಷಾ ಮಾಧ್ಯಮ ಅವನತಿಯ ಹಂತದಲ್ಲಿದೆ. ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧವಿದೆ. ಆದರೆ ಸರಕಾರಗಳ ದೋಪೂರಿತ ಭಾಷಾ ನೀತಿಯಿಂದಾಗಿ ಇಂದು ಕನ್ನಡ ಶಾಲೆಗಳು ಮುಚ್ಚುತ್ತಿವೆ. ಕನ್ನಡ ಶಾಲೆಗಳ ಕುರಿತಂತೆ ನಮ್ಮ ಆಡಳಿತಗಾರರ, ರಾಜಕಾರಣಿಗಳ ನಿರ್ಲಕ್ಷವೇ ಇಂದಿನ ದುಸ್ಥಿತಿಗೆ ಕಾರಣ ಎಂದರು.

ಇಂಗ್ಲೀಷ್ ಭಾಷೆಯ ಮೂಲಕ ಕನ್ನಡವನ್ನು ಉಳಿಸುವ ನಿರ್ಧಾರವನ್ನು ಕಟುವಾಗಿ ಟೀಕಿಸಿದ ಡಾ.ರಾವ್, ಕನ್ನಡದ ಮೂಲಕವೇ ಕನ್ನಡವನ್ನು ಉಳಿಸಬೇಕು. 1ರಿಂದ 10ನೇ ತರಗತಿಯವರೆಗೆ ಕನ್ನಡ ಮಾಧ್ಯಮವನ್ನು ಜಾರಿ ಗೊಳಿಸಿದರೆ ಮಾತ್ರ ಕನ್ನಡ ಉಳಿಯಲು ಸಾಧ್ಯ ಎಂದರು.

ನಿವೃತ್ತ ಪ್ರಾಧ್ಯಾಪಕಿ ಹಾಗೂ ಕನ್ನಡ ಖ್ಯಾತನಾಮ ನಗೆ ಬರಹಗಾರ್ತಿ ಪ್ರೊ.ಭುವನೇಶ್ವರಿ ಹಡೆ ಮಾತನಾಡಿ, ಇಂದು ಸರಕಾರವೇ ಮುಂಚೂಣಿಗೆ ನಿಂತು ಇಂಗ್ಲೀಷ್ ಶಾಲೆಗಳಿಗೆ ಸರಿಸಮಾನವಾಗಿ ಕನ್ನಡ ಮಾಧ್ಯಮ ಶಾಲೆಗಳನ್ನು ಬೆಳೆಸಿದರೆ ಮಾತ್ರ ರಾಜ್ಯದಲ್ಲಿ ಕನ್ನಡ ಶಾಲೆಗಳು, ಭಾಷೆಗಳು ಉಳಿದು ಬೆಳೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಶಾಲೆಗಳ ಪರವಾಗಿ ಅಭಿಪ್ರಾಯ ಮಂಡಿಸಿದ ಬ್ರಹ್ಮಾವರ ಎಸ್‌ಎಂಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರಾಂಶುಪಾಲೆ ಅಭಿಲಾಷಾ ಹಂದೆ, ಕನ್ನಡವನ್ನು ಚೆನ್ನಾಗಿ ಕಲಿಯಲು ಶಬ್ದಗಳು ಮಗುವಿನ ಗ್ರಹಿಕೆಗೆ ಸಿಗಬೇಕು. ಕಲಿಕೆಗೆ ವಾತಾವರಣ ಮುಖ್ಯವಾಗುತ್ತದೆ. ಭಾಷೆಯೊಂದು ಬದುಕುವುದು ಜನರ ಜೀವನಕ್ರಮದಲ್ಲಿ ಎಂದರು.

ಸಂವಾದ ಕಾರ್ಯಕ್ರಮವನ್ನು ಪ್ರೊ.ವರದೇಶ ಹಿರೆಗಂಗೆ ನಿರ್ವಹಿಸಿದರು. ಮಣಿಪಾಲ ವಿವಿ ಯುರೋಪಿಯನ್ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ.ನೀತಾ ಇನಾಂದಾರ್ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರೆ, ರೇವತಿ ನಾಡಿಗೇರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X