Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗೋಹತ್ಯೆಗಿಂತ ಮೊದಲು ರೈತರ ಹತ್ಯೆ...

ಗೋಹತ್ಯೆಗಿಂತ ಮೊದಲು ರೈತರ ಹತ್ಯೆ ನಿಲ್ಲಿಸಿ: ಕೆ.ಎಸ್.ಪುಟ್ಟಣ್ಣಯ್ಯ

ವಾರ್ತಾಭಾರತಿವಾರ್ತಾಭಾರತಿ29 Aug 2017 8:02 PM IST
share
ಗೋಹತ್ಯೆಗಿಂತ ಮೊದಲು ರೈತರ ಹತ್ಯೆ ನಿಲ್ಲಿಸಿ: ಕೆ.ಎಸ್.ಪುಟ್ಟಣ್ಣಯ್ಯ

ಬೆಂಗಳೂರು, ಆ.29: ಕೇಂದ್ರ ಸರಕಾರ ಗೋಹತ್ಯೆ ನಿಲ್ಲಿಸಲು ಹರಸಾಹಸ ಪಡುತ್ತಿದೆ. ಆದರೆ, ಮೊದಲು ದೇಶದಲ್ಲಿ ನಡೆಯುತ್ತಿರುವ ರೈತರ ಹತ್ಯೆಗಳನ್ನು ನಿಲ್ಲಿಸಲಿ ಎಂದು ಸ್ವರಾಜ್ ಇಂಡಿಯಾ ಕರ್ನಾಟಕ ಪಕ್ಷದ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಒತ್ತಾಯಿಸಿದ್ದಾರೆ.

ಮಂಗಳವಾರ ನಗರದ ಗಾಂಧಿಭವನದಲ್ಲಿ ಸ್ವರಾಜ್ ಇಂಡಿಯಾ ಕರ್ನಾಟಕ ಹಮ್ಮಿಕೊಂಡಿದ್ದ ನಮ್ಮ ಪ್ರಜಾತಂತ್ರ ಎದುರಿಸುತ್ತಿರುವ ಸವಾಲುಗಳು ಕುರಿತ ಸಂವಾದವನ್ನುದ್ದೇಶಿಸಿ ಮಾತನಾಡಿದ ಅವರು, ಗೋಹತ್ಯೆ ನಡೆದರೆ ಬೀದಿಗೆ ಬಂದು ಕೂಗುತ್ತಾರೆ. ಆದರೆ, ರೈತನ ಹತ್ಯೆ ನಡೆದರೆ ಈ ಧ್ವನಿ ಎಲ್ಲಿ ಹೋಗುತ್ತದೆ. ಇಡೀ ವ್ಯವಸ್ಥೆ ಸೇರಿಕೊಂಡು ರೈತರನ್ನು ಕೊಲೆ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಡಿನಿಂದ ಒಂದು ಚಿರತೆ ಬೆಂಗಳೂರಿಗೆ ಬಂದರೆ, ಅದನ್ನು ಮತ್ತೆ ಕಾಡಿಗೆ ಜೋಪಾನವಾಗಿ ಬಿಟ್ಟು ಬರಲಾಗುತ್ತದೆ. ಅದೇ ನೂರಾರು ರೈತರು ಹಳ್ಳಿ ಬಿಟ್ಟು ಬೆಂಗಳೂರಿಗೆ ಬಂದರೆ, ಅವರನ್ನು ಪುನಃ ಏಕೆ ಹಳ್ಳಿಗೆ ಬಿಡುತ್ತಿಲ್ಲ ಎಂದ ಅವರು, ಇಂದಿಗೂ ನೂರಾರು ರೈತರು ನಗರ ಭಾಗದಲ್ಲಿ ಭಿಕ್ಷೆ ಬೇಡುತ್ತಿರುವುದನ್ನು ಕಾಣಬಹುದಾಗಿದೆ. ಇದಕ್ಕೆಲ್ಲಾ ಯಾರು ಶಾಶ್ವತ ಪರಿಹಾರ ನೀಡುವವರು ಎಂದು ಪ್ರಶ್ನಿಸಿದರು.

ಸಮಾಜ ಒಡೆದು ರಾಜಕೀಯ ನಡೆಸುವುದು ಹೆಚ್ಚಾಗುತ್ತಿದೆ. ನಮ್ಮ ದೇಶದಲ್ಲಿ ಜಾತಿಗೊಂದು ಸ್ಮಶಾನ ಇದೆ. ಪ್ರಾಣ ಹೋದರು, ಜಾತಿ ಬಿಟ್ಟು ಹೋಗುತ್ತಿಲ್ಲ ಎಂದ ಅವರು, ಶೇ. 90ರಷ್ಟು ಅಂಗವಿಕಲ ಮಕ್ಕಳ ಜನನಕ್ಕೆ ಜಾತಿಯಲ್ಲಿಯೇ ವಿವಾಹವಾಗುವುದು ಮುಖ್ಯ ಕಾರಣವಾಗಿದೆ ಎಂದು ವೈಜ್ಞಾನಿಕ ವರದಿ ಹೇಳಿದ್ದರೂ ಜಾತಿ ಬಿಡುತ್ತಿಲ್ಲ. ಹೀಗೇ ಮುಂದುವರೆದರೆ, ಕೈ-ಕಾಲು ಇರುವವರನ್ನು ಹುಡುಕಿಕೊಳ್ಳಬೇಕಾಗಬಹುದು ಎಂದು ವ್ಯಂಗ್ಯವಾಡಿದರು.

ಬರಗಾಲಕ್ಕೆ ಎಲ್ಲರೂ ಕಾರಣ, ಇದು ಕೇವಲ ರೈತರ ಸಮಸ್ಯೆ ಅಲ್ಲ. ದೇಶದ 130 ಕೋಟಿ ಜನರ ಸಮಸ್ಯೆ ಆಗಿದೆ. ಆದರೆ, ಇದರ ಬಗ್ಗೆ ಯಾವುದೇ ನೀತಿ ರಚನೆ ಮಾಡಿಲ್ಲ. ಆಹಾರ ಭದ್ರತೆ ಬೇಕು ಎನ್ನುವವರು ಬರಗಾಲದ ಬಗ್ಗೆಯೂ ಯೋಚಿಸುವ ಅಗತ್ಯ ಇದೆ. ಮುಂದೆ ಈ ಬಗ್ಗೆ ಹೋರಾಟ ನಡೆಸಲಾಗುವುದೆಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X