Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಡೋಕಾಲಾದಲ್ಲಿ ರಸ್ತೆ ನಿರ್ಮಾಣ: ಭವಿಷ್ಯದ...

ಡೋಕಾಲಾದಲ್ಲಿ ರಸ್ತೆ ನಿರ್ಮಾಣ: ಭವಿಷ್ಯದ ಯೋಜನೆಗಳ ಬಗ್ಗೆ ಸಂದಿಗ್ಧತೆಯಲ್ಲಿ ಚೀನಾ

ವಾರ್ತಾಭಾರತಿವಾರ್ತಾಭಾರತಿ29 Aug 2017 10:20 PM IST
share
ಡೋಕಾಲಾದಲ್ಲಿ ರಸ್ತೆ ನಿರ್ಮಾಣ: ಭವಿಷ್ಯದ ಯೋಜನೆಗಳ ಬಗ್ಗೆ ಸಂದಿಗ್ಧತೆಯಲ್ಲಿ ಚೀನಾ

ಬೀಜಿಂಗ್,ಆ.29: ಭೂತಾನ್ ತನ್ನದೆಂದು ಹೇಳಿಕೊಂಡಿರುವ ಡೋಕಾ ಲಾ ಪ್ರದೇಶದಲ್ಲಿ ರಸ್ತೆ ನಿರ್ಮಾಣದ ತನ್ನ ಯೋಜನೆಯನ್ನು ಮುಂದುವರಿಸುವ ಬಗ್ಗೆ ಚೀನಾ ಸಂದಿಗ್ಧತೆಯಲ್ಲಿ ಸಿಲುಕಿದೆ. ಡೋಕಾ ಲಾದಲ್ಲಿ ರಸ್ತೆ ನಿರ್ಮಾಣದ ತನ್ನ ಯೋಜನೆಗಾಗಿ ‘ಎಲ್ಲ ಅಂಶಗಳನ್ನು’ ಚೀನಾ ಪರಿಶೀಲಿಸಲಿದೆ ಎಂದು ವಿದೇಶಾಂಗ ಸಚಿವಾಲಯವು ತಿಳಿಸಿದೆ.

ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವೆ ಎರಡು ತಿಂಗಳ ಹಿಂದೆ ಸೃಷ್ಟಿಯಾಗಿದ್ದ ಬಿಕ್ಕಟ್ಟು ಸೋಮವಾರವಷ್ಟೇ ಬಗೆಹರಿದಿದ್ದು, ಡೋಕಾ ಲಾದಿಂದ ಬಂದಿರುವ ವರದಿಗಳು ಚೀನಾ ರಸ್ತೆ ನಿರ್ಮಾಣ ಕಾಮಗಾರಿಯನ್ನು ಮುಂದುವರಿಸ ದಿರಬಹುದು ಎಂಬ ಸುಳಿವು ನೀಡಿವೆ.
 ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಡೋಕಾ ಲಾದಲ್ಲಿ ರಸ್ತೆ ನಿರ್ಮಾಣ ಯೋಜನೆಯನ್ನು ಚೀನಾ ಸ್ಥಗಿತಗೊಳಿಸಿದೆಯೇ ಎಂದು ಸುದ್ದಿಗಾರರು ಒಂದಕ್ಕಿಂತ ಹೆಚ್ಚು ಬಾರಿ ಪ್ರಶ್ನಿಸಿದರೂ ವಿದೇಶಾಂಗ ಸಚಿವಾಲಯದ ವಕ್ತಾರೆ ಹುಆ ಚುನ್‌ಯಿಂಗ್ ಅವರು ನೇರವಾಗಿ ಉತ್ತರಿಸಲಿಲ್ಲ. ಬದಲಾಗಿ ಅವರ ಉತ್ತರವು ಅಸ್ಪಷ್ಟತೆಯಿಂದ ಕೂಡಿದ್ದು, ಚೀನಾ ರಸ್ತೆ ನಿರ್ಮಾಣ ಯೋಜನೆಯನ್ನು ಸ್ಥಗಿತಗೊಳಿಸಿರಬಹುದು ಎಂಬ ಸಂಕೇತವನ್ನು ನೀಡಿತ್ತು.
ಚೀನಾ ಸುದೀರ್ಘ ಕಾಲದಿಂದ ಡೋಕಾ ಲಾದಲ್ಲಿ ರಸ್ತೆ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ತೊಡಗಿಕೊಂಡಿದೆ. ವಾಸ್ತವ ಪರಿಸ್ಥಿತಿಗೆ ಅನುಗುಣ ವಾಗಿ ಸಂಬಂಧಿತ ನಿರ್ಮಾಣ ಯೋಜನೆಗಳನ್ನು ರೂಪಿಸಲು ಹವಾಮಾನ ಸೇರಿದಂತೆ ಎಲ್ಲ ಅಂಶಗಳನ್ನು ನಾವು ಪರಿಗಣಿಸಲಿದ್ದೇವೆ ಎಂದು ಹುಆ ಹೇಳಿದರು.
ಗಡಿಗಳ ರಕ್ಷಣೆಯ ಅಗತ್ಯಗಳನ್ನು ಪೂರೈಸಲು ಮತ್ತು ಜನರ ಜೀವನ ಸ್ಥಿತಿಯನ್ನು ಉತ್ತಮಗೊಳಿಸಲು ಚೀನಾ ಸುದೀರ್ಘ ಕಾಲದಿಂದಲೂ ರಸ್ತೆ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುತ್ತಿದೆ ಎಂದರು.
ಡೋಕಾ ಲಾ ಪ್ರದೇಶದಲ್ಲಿ ಚೀನಿ ಗಡಿ ಸೈನಿಕರ ಉಪಸ್ಥಿತಿ ಮತ್ತು ಗಸ್ತು ಕಾರ್ಯ ಮುಂದುವರಿಯಲಿದೆ ಎಂದು ಹುಆ ಒತ್ತಿ ಹೇಳಿದರು.

ಡೋಕಾ ಲಾ ಬಿಕ್ಕಟ್ಟು ಬಗೆಹರಿದಿರುವುದನ್ನು ಚೀನಿ ತಜ್ಞರು ಸ್ವಾಗತಿಸಿದ್ದಾರಾದರೂ, ಭವಿಷ್ಯದಲ್ಲಿ ಇಂತಹ ಬಿಕ್ಕಟ್ಟುಗಳ ಬಗ್ಗೆ ಎಚ್ಚರಿಕೆ ಅಗತ್ಯ ಎಂದಿದ್ದಾರೆ. ಡೋಕಾ ಲಾದಲ್ಲಿ ಚೀನಿ ಪಡೆಗಳಿಂದ ರಸ್ತೆ ನಿರ್ಮಾಣವನ್ನು ಪ್ರತಿಭಟಿಸಿದ್ದ ಭೂತಾನದೊಂದಿಗೆ ಚೀನಾ ಸಮಾಲೋಚನೆಗಳನ್ನು ನಡೆಸುತ್ತಿದೆಯೇ ಎಂಬ ಪ್ರಶ್ನೆಗೆ ಹುಆ ಉತ್ತರಿಸಲಿಲ್ಲ. ಈವರೆಗೆ ಭಾರತೀಯ ಯೋಧರಿಂದ ಅತಿಕ್ರಮ ಪ್ರವೇಶದ ಬಿಕ್ಕಟ್ಟನ್ನು ನಾವು ಬಗೆಹರಿಸಿಕೊಂಡಿದ್ದೇವೆ ಎಂದು ಅವರು ಹೇಳಿದರು.
ಸೆ.3ರಿಂದ 5ರವರೆಗೆ ಷಿಯಾಮೆನ್ ನಗರದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯನ್ನು ಪ್ರಸ್ತಾಪಿಸಿದ ಅವರು, ಶೃಂಗಸಭೆಯ ಯಶಸ್ಸಿನಲ್ಲಿ ಗುಂಪಿನ ಎಲ್ಲ ಸದಸ್ಯ ರಾಷ್ಟ್ರಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಚೀನಾ ಆಶಿಸಿದೆ ಎಂದು ಹೇಳಿದರು. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
    
    ಮಾಧ್ಯಮಗಳಲ್ಲಿ ಒರಟುತನ  ಪ್ರದರ್ಶಿಸಿದ್ದ ಚೀನಾ:ಲಾಂಬಾ


ಡೋಕಾ ಲಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಚೀನಾ ಮಾಧ್ಯಮಗಳಲ್ಲಿ ನೀಡಿದ್ದ ಹೇಳಿಕೆಗಳು ತೀವ್ರ ಒರಟುತನದಿಂದ ಕೂಡಿದ್ದವು, ಆದರೆ ಭಾರತವು ಸುಮ್ಮನಿತ್ತು ಮತ್ತು ಅದರ ಈ ನಡೆ ಫಲವನ್ನು ನೀಡಿದೆ ಎಂದು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಾಂಬಾ ಅವರು ಹೇಳಿದರು. ಮಂಗಳವಾರ ದಿಲ್ಲಿಯಲ್ಲಿ ಕಾರ್ಯಕ್ರಮವೊಂದರ ನೇಪಥ್ಯದಲ್ಲಿ ಡೋಕಾ ಲಾ ವಿವಾದ ಕುರಿತು ಚೀನಾದ ಮಾಧ್ಯಮ ಪ್ರಚಾರ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಿದ್ದರು. ಪ್ರಸಕ್ತ ಸ್ಥಿತಿಯ ಕುರಿತು ಪ್ರಶ್ನೆಗೆ ಅವರು, ವಿದೇಶಾಂಗ ಸಚಿವಾಲಯವು ಈಗಾಗಲೇ ಹೇಳಿಕೆಯನ್ನು ನೀಡಿದೆ ಮತ್ತು ತಾನು ಹೇಳಬೇಕಾದ್ದು ಏನೂ ಇಲ್ಲ ಎಂದಷ್ಟೇ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X