Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಕಾರಿಪುರ: ಬಿಜೆಪಿ ಕಾರ್ಯಕಾರಿ ಸಮಿತಿ...

ಶಿಕಾರಿಪುರ: ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ30 Aug 2017 4:18 PM IST
share
ಶಿಕಾರಿಪುರ: ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ

ಶಿಕಾರಿಪುರ,ಆ.30: ಭೀಕರ ಬರಗಾಲದಿಂದ ತತ್ತರಿಸಿರುವ ತಾಲೂಕಿನ ಪ್ರಮುಖ ಶಾಶ್ವತ ನೀರಾವರಿ ಯೋಜನೆಯ ಅನುಷ್ಠಾನಕ್ಕೆ ಮಂಜೂರಾತಿಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿದು ರಾಜ್ಯ ಸರ್ಕಾರ ರಾಜಕಾರಣ ಮಾಡುತ್ತಿದ್ದು, ಇಂತಹ ಕ್ಷುಲ್ಲಕ ವರ್ತನೆಯನ್ನು ತಾಲೂಕಿನ ರೈತರು,ಜನತೆ ಕ್ಷಮಿಸುವುದಿಲ್ಲ ಎಂದು ಶಾಸಕ ಬಿ.ವೈ ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರ ಪಟ್ಟಣದ ಮಾಳೇರಕೇರಿಯಲ್ಲಿನ ಪಕ್ಷದ ಕಚೇರಿಯಲ್ಲಿ ನಡೆದ ತಾಲೂಕು ಬಿಜೆಪಿ ಕಾರ್ಯಕಾರಣಿ ಸಭೆಯಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜಕೀಯ ಪಕ್ಷಗಳಿಗೆ ಸಾಮಾಜಿಕ ಹೊಣೆಗಾರಿಕೆಯಿದ್ದು, ಜನತೆಗೆ ನ್ಯಾಯ ದೊರಕಿಸಿದ ಬಗ್ಗೆ ಎಲ್ಲಾ ಪಕ್ಷಗಳಿಗೆ ಚುನಾವಣೆಯು ಆತ್ಮಾವಲೋಕನದ ಸಂದರ್ಬ ಎಂದ ಅವರು ಸಂಘಟನೆ ಮೂಲಕ ಶಕ್ತಿ ನೀಡಿ ಯಡಿಯೂರಪ್ಪನವರ ಹೋರಾಟಗಳನ್ನು ಬೆಂಬಲಿಸಿ ರಾಜ್ಯ ಮಟ್ಟದ ನಾಯಕರಾಗಿ ರೂಪಿಸಿದ ಹಿರಿಮೆ ಕಾರ್ಯಕರ್ತರು,ತಾಲೂಕಿನ ಜನತೆಗೆ ಸಲ್ಲಬೇಕು ಎಂದರು.

8 ಬಾರಿ ಶಾಸಕರಾಗಿ ವಿರೋಧಪಕ್ಷದಲ್ಲಿದ್ದ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ದೊರೆತ ಏಕೈಕ ಅವಕಾಶದಲ್ಲಿ ತಾಲೂಕು ಸರ್ವ ರೀತಿಯಲ್ಲಿ ಮಾದರಿಯಾಗಿಸುವ ದಿಸೆಯಲ್ಲಿ ಹೆಚ್ಚಿನ ಶ್ರಮವಹಿಸಿದ್ದು, ಇದರೊಂದಿಗೆ 4-5 ದಶಕ ರಾಜಕಾರಣದಲ್ಲಿ ಅಧಿಕಾರ ಅನುಭವಿಸಿದ ಪಕ್ಕದ ತಾಲೂಕಿನ ರಾಜಕಾರಣಿಯ ಕ್ಷೇತ್ರದ ಸ್ಥಿತಿ ಬಗ್ಗೆ ಜನತೆ ಅವಲೋಕಿಸಬೇಕಾಗಿದೆ ಎಂದ ಅವರು, ತಾಲೂಕಿನ ಪ್ರಮುಖ ನೀರಾವರಿ ಯೋಜನೆ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲು ಪಾದಯಾತ್ರೆ, ಹೋರಾಟ, ಪ್ರತಿಭಟನೆ ಹಮ್ಮಿಕೊಂಡು ವರ್ಷ ಗತಿಸಿದರೂ ಇಂದಿಗೂ ಸರ್ಕಾರ ವಿಳಂಬ ಧೋರಣೆಯ ಮೂಲಕ ಕ್ಷುಲ್ಲಕ ರಾಜಕಾರಣದಲ್ಲಿ ಮಗ್ನವಾಗಿದೆ ಎಂದು ಅವರು ಆರೋಪಿಸಿದರು.

ಭೀಕರ ಬರಗಾಲದಿಂದ ತತ್ತರಿಸಿರುವ ತಾಲೂಕಿನ ಬಗ್ಗೆ ರಾಜ್ಯ ಸರ್ಕಾರ ಕಡೆಗಣಿಸಿರುವುದನ್ನು ಮನಗಂಡು ಯಡಿಯೂರಪ್ಪನವರು ಕೇಂದ್ರದ ಜಲಸಂಪನ್ಮೂಲ ಸಚಿವೆ ಉಮಾಭಾರತಿರವರನ್ನು ಬೇಟಿಯಾಗಿ ತಾಳಗುಂದ, ಉಡುಗಣಿ ಹೋಬಳಿಗೆ ಹಾವೇರಿಯ ಹೊಂಕಣದಿಂದ, ಹೊಸೂರು ಹೋಬಳಿಗೆ ಹೊನ್ನಾಳಿಯ ತುಂಗಭದ್ರಾ ನದಿಯಿಂದ,ಅಂಜನಾಪುರ ಜಲಾಶಯಕ್ಕೆ ಅರಕೆರೆಯಿಂದ ತುಂಗಾ ನೀರಿಗಾಗಿ ಪ್ರತ್ಯೇಕ ಪೈಪ್‌ಲೈನ್,ಕಸಬಾ ಹೋಬಳಿಗೆ ಮುಡುಬಸಿದ್ದಾಪುರ ಬಳಿಯ ಕಲ್ಲುಒಡ್ಡು ಪಿಕ್‌ ಅಪ್ ಡ್ಯಾಂ ಹಾಗೂ ಸೊರಬ ತಾಲೂಕಿಗೆ ಮೂಡಿ ಬಳಿ ಏತ ನೀರಾವರಿ ಯೋಜನೆಗೆ ಮನವಿ ಸಲ್ಲಿಸಿದ ಪರಿಣಾಮ 1200 ಕೋಟಿ ವೆಚ್ಚದ ಯೋಜನೆಯ ತುರ್ತು ಅನುಷ್ಠಾನಕ್ಕಾಗಿ ಗುರುವಾರ ಕೇಂದ್ರ ನೀರಾವರಿ ನಿಗಮದ ಮುಖ್ಯ ಅಭಿಯಂತರ ಆರ್.ಕೆ ಜೈನ್ ಹಾಗೂ ರಾಜ್ಯ ನೀರಾವರಿ ನಿಗಮದ ಕುಲಕರ್ಣಿ ಯೋಜನಾ ವರದಿ ಸಿದ್ದಪಡಿಸಲು ಧಾವಿಸುತ್ತಿದ್ದಾರೆ ಎಂದು ತಿಳಿಸಿ ತಾಲೂಕಿನ ಜನತೆ ಪರವಾಗಿ ಸಚಿವರನ್ನು ಅಭಿನಂದಿಸಿದರು.

ಕೇಂದ್ರ ಸರ್ಕಾರ ಜೆನರಿಕ್ ಔಷಧ ಕೇಂದ್ರ, ಸುಕನ್ಯಾ ಯೋಜನೆ, ಉಚಿತ ಸಿಲಿಂಡರ್ ಜತೆಗೆ ಜಾರಿಗೊಳಿಸಿದ ನೂರಾರು ಯೋಜನೆಯ ಬಗ್ಗೆ ಕಾರ್ಯಕರ್ತರು ಮನವರಿಕೆ ಮಾಡಿಕೊಡಲು ತಿಳಿಸಿದ ಅವರು ಮುಖ್ಯಮಂತ್ರಿಗಳ ವಿರುದ್ಧ 25 ಕ್ಕೂ ಅಧಿಕ ದೂರುಗಳಿದ್ದರೂ ದಾಖಲಿಸದೆ ಎಸಿಬಿ ಯಡಿಯೂರಪ್ಪನವರ ವಿರುದ್ಧ ಕ್ಷಣಮಾತ್ರದಲ್ಲಿ ದೂರು ದಾಖಲಿಸುವ ಷಡ್ಯಂತ್ರ ರೂಪಿಸಲಾಗಿದ್ದು ಎಲ್ಲಾ ದೂರುಗಳಿಂದ ಮುಕ್ತರಾಗುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಅಭಿವೃದ್ಧಿಯಲ್ಲಿ ತಾಲೂಕಿನ ಜನತೆಗೆ ನ್ಯಾಯ ದೊರಕಿಸಲು ಹೆಚ್ಚು ಶ್ರಮಿಸಲಾಗಿದೆ ಎಂದ ಅವರು, ಈ ಬಾರಿಯ ಚುನಾವಣೆಯಲ್ಲಿ ಹಣ ಹೆಂಡದ ಆಮಿಷ ವಿಪರೀತವಾಗಲಿದ್ದು ಕಾರ್ಯಕರ್ತರು ಮತದಾರರ ಪ್ರೀತಿ ವಿಶ್ವಾಸಗಳಿಸಿ ಸಂಘಟನೆಗೆ ಶಕ್ತಿಯನ್ನು ತುಂಬುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ತಾ.ಬಿಜೆಪಿ ಅಧ್ಯಕ್ಷ ರೇವಣಪ್ಪ ಮಾತನಾಡಿದರು. ಮುಖಂಡ ಗುರುಮೂರ್ತಿ, ಕೆ.ಶೇಖರಪ್ಪ, ಪದ್ದಣ್ಣ, ಅಗಡಿ ಅಶೋಕ, ಹಾಲಪ್ಪ, ಕಬಾಡಿ ರಾಜು,ಟಿ.ಎಸ್ ಮೋಹನ, ಚಾರ್ಗಲ್ಲಿ ಪರಶುರಾಮ, ನಿವೇದಿತಾ, ಗಾಯತ್ರಿದೇವಿ, ಶುಭರಘು, ಸವಿತಾ ಬಾಯಿ ತಾಪಂ, ಜಿಪಂ ಸದಸ್ಯರು ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X