Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾನಗರ: ಮನೆಗೆ ನುಗ್ಗಿ ಚಿನ್ನಾಭರಣ...

ವಿದ್ಯಾನಗರ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

ವಾರ್ತಾಭಾರತಿವಾರ್ತಾಭಾರತಿ30 Aug 2017 6:31 PM IST
share
ವಿದ್ಯಾನಗರ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

ಹಾಸನ, ಆ.30: ವಿದ್ಯಾನಗರದ ಮನೆಯೊಂದರಲ್ಲಿ ಕಳ್ಳತನ ಮಾಡಲು ಹಿಂಬಾಗಿಲಿನಿಂದ ನುಗ್ಗಿರುವ ಕಳ್ಳರು ಮನೆ ಒಳಗೆ ಇದ್ದ ಲಕ್ಷಾಂತರ ರೂ ಬೆಲೆಬಾಳುವ ಚನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ದೋಚಿರುವ ಘಟನೆ ರಾತ್ರಿ ನಡೆದಿದೆ.

ವಿದ್ಯಾನಗರ ಕ್ರೈಸ್ಟ್ ಶಾಲೆ ಬಳಿ ಇರುವ ಗುತ್ತಿಗೆದಾರ ಸುಮ ಪರಶುರಾಮು ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ಮಂಗಳವಾರ ರಾತ್ರಿ 8ರ ವೇಳೆ ಹಾಲುವಾಗಿಲು ಬಳಿ ಇರುವ ಅತ್ತಿಗೆ ಮನೆಯಲ್ಲಿನ ಕಾರ್ಯಕ್ರಮವೊಂದಕ್ಕೆ ಪರಶುರಾಮು ತನ್ನ ಕುಟುಂಬ ಸಮೇತವಾಗಿ ತೆರಳಿದ್ದಾರೆ.  ಬುಧವಾರ ಬೆಳಗ್ಗೆ ಮನೆಗೆ ವಾಪಸ್ ಬಂದಾಗ ಕಳ್ಳತನ ಆಗಿರುವುದು ತಿಳಿದು ಬಂದಿದೆ.

ಮನೆ ಹಿಂಬಾಗಿಲಿನಿಂದ ಒಳ ನುಗ್ಗಿರುವ ಕಳ್ಳರು ದೇವರ ಬಾಗಿಲು ತೆರೆದು ಒಳ ಇದ್ದ ಪೂಜೆ ಸಾಮಾಗ್ರಿಯ ಬೆಳ್ಳಿ ಪದಾರ್ಥವನ್ನು ದೋಚಿದ್ದಾರೆ. ನಂತರದಲ್ಲಿ ಮಹಡಿ ಮೇಲೆ ತೆರಳಿ ಬೆಡ್ ರೂಂನ ಬೀರುವಿನಲ್ಲಿ ಇಡಲಾಗಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಮಾಸ್ಕ್ ಧರಿಸಿದ ಇಬ್ಬರು ವ್ಯಕ್ತಿಗಳು ರಾತ್ರಿ ಮನೆ ಒಳ ನುಗ್ಗಿರುವ ಕಳ್ಳರ ಬಗ್ಗೆ ಬಳಿಯೇ ಇದ್ದ ಮನೆಯೊಂದರ ಸಿಸಿ ಕ್ಯಾಮರದಲ್ಲಿ ದೃಶ್ಯ ಕಂಡು ಬಂದಿದೆ ಎಂದು ಹೇಳಲಾಗಿದೆ.

ಮನೆ ಒಳಗೆ ನುಗ್ಗಿರುವ ಕಳ್ಳರು 40 ಗ್ರಾಂ ಬೆಲೆ ಬಾಳುವ ಒಂದು ಜೊತೆ ಚಿನ್ನದ ಬಳೆ, 13 ಗ್ರಾಮ ಬೆಲೆ ಬಾಳುವ ರಿಂಗ್, 60 ಗ್ರಾಂ ಬೆಲೆ ಬಾಳುವ 2 ಚೈನ್ ಹಾಗೂ ದೇವರ ಕೋಣೆಯಲ್ಲಿದ್ದ ಬೆಳ್ಳಿ ತಟ್ಟೆ, ಪಂಚಪಾತ್ರೆ, ಮಂಗಳಾರತಿ, ದೇವರ ವಿಗ್ರಹ, ನಾಲ್ಕು ಬೆಳ್ಳಿ ದೀಪ, ಮೂರು ಸಣ್ಣ ದೀಪ, ಗಂಟೆ ಹಾಗೂ ನಾಲ್ಕು ಸಾವಿರ ಹಣ ದೋಚಿದ್ದಾರೆ. ಸುಮಾರು 7 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಹೆಚ್ಚಿನ ಒಡವೆ ಕಳುವಾಗಿದೆ ಎನ್ನಲಾಗಿದೆ.

 ವಿಷಯ ತಿಳಿದ ಪೊಲೀಸರು ಸ್ಥಳಕೆ ಶ್ವಾನದಳ ಹಾಗೂ ಬೆರಳಚ್ಚುಗಾರರ ಜೊತೆ ಆಗಮಿಸಿ ವಿವರ ಪಡೆದು ದೂರು ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸುಮ ಪರಶುರಾಮು: ಕಳ್ಳತನಗೊಂಡ ಮನೆ ಮಾಲಕರು ಸುಮ ಪರಶುರಾಮು ಸುದ್ದಿಗಾರರೊಂದಿಗೆ ಮಾತನಾಡಿ, ಹಾಲುವಾಗಿಲುನಲ್ಲಿರುವ ಅತ್ತಿಗೆ ಮನೆಯ ಕಾರ್ಯಕ್ರಮವೊಂದಕ್ಕೆ ಮಂಗಳವಾರ ರಾತ್ರಿ ಸುಮಾರು 8-10ಕ್ಕೆ ಮನೆಯವರೆಲ್ಲರು ಕಾರ್ಯಕ್ರಮಕ್ಕೆ ತೆರಳಿದ್ದೆವು. ಮರುದಿನ  ಬೆಳಗ್ಗೆ ಬಂದಾಗ ಕಳ್ಳತನವಾಗಿರುವ ಬಗ್ಗೆ ತಿಳಿದು ಬಂದಿದೆ. ಮನೆ ಹಿಂಬಾಗಿಲಿನಿಂದ ಒಳ ನುಗ್ಗಿರುವ ಕಳ್ಳರು ದೇವರ ಕೋಣೆಯಲ್ಲಿದ್ದ ಬೆಳ್ಳೆ ಪದಾರ್ಥ ಹಾಗೂ ಮಹಡಿ ಮೇಲೆ ಇದ್ದ ಬೀರು ಹೊಡೆದು ಒಳಗಿದ್ದ ಚಿನ್ನಾಭರಣವನ್ನು ದೋಚಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X