Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಹಜ್‌ಗೆ ಕ್ಷಣ ಗಣನೆ; ಸಿದ್ಧತೆಗಳು...

ಹಜ್‌ಗೆ ಕ್ಷಣ ಗಣನೆ; ಸಿದ್ಧತೆಗಳು ಸಂಪೂರ್ಣ: ಅಧಿಕಾರಿಗಳಿಂದ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ30 Aug 2017 7:55 PM IST
share
ಹಜ್‌ಗೆ ಕ್ಷಣ ಗಣನೆ; ಸಿದ್ಧತೆಗಳು ಸಂಪೂರ್ಣ: ಅಧಿಕಾರಿಗಳಿಂದ ಘೋಷಣೆ

ಮಿನಾ (ಸೌದಿ ಅರೇಬಿಯ), ಆ. 30: ಇಪ್ಪತ್ತು ಲಕ್ಷಕ್ಕೂ ಅಧಿಕ ಹಜ್ ಯಾತ್ರಿಗಳಿಗೆ ಸೇವೆ ಸಲ್ಲಿಸಲು ವಿವಿಧ ಸಂಸ್ಥೆಗಳು ಸಿದ್ಧವಾಗಿವೆ ಎಂದು ಸೌದಿ ಅರೇಬಿಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

  ‘ತರ್ವಿಯಾ ದಿನ’ದ ಸಿದ್ಧತೆಗಾಗಿ ಯಾತ್ರಿಕರು ಆಗಮಿಸಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ಮೇಜರ್ ಜನರಲ್ ಮನ್ಸೂರ್ ಅಲ್-ತುರ್ಕಿ ಹೇಳಿದರು. ‘ತರ್ವಿಯಾ ದಿನ ಆಚರಣೆ ಬುಧವಾರ ನಡೆದಿದೆ.

20 ಲಕ್ಷಕ್ಕೂ ಅಧಿಕ ಹಜ್ ಯಾತ್ರಿಗಳಿಗೆ ಸೇವೆ ಸಲ್ಲಿಸುವುದಕ್ಕಾಗಿ ಹಜ್ ಯೋಜನೆಯನ್ನು ರೂಪಿಸಲಾಗಿದೆ ಎಂದು ಅವರು ನುಡಿದರು.

ಈ ಪೈಕಿ, 17,47,440 ಯಾತ್ರಿಗಳು ಈಗಾಗಲೇ ವಿದೇಶಗಳಿಂದ ಆಗಮಿಸಿದ್ದಾರೆ ಹಾಗೂ ಪ್ರಜೆಗಳು ಮತ್ತು ನಿವಾಸಿಗಳು ಸೇರಿದಂತೆ ಸೌದಿ ಅರೇಬಿಯದ 2 ಲಕ್ಷ ಯಾತ್ರಿಗಳೂ ಇಸ್ಲಾಮ್‌ನ ಅತ್ಯುನ್ನತ ಧಾರ್ಮಿಕ ವಿಧಿಯಲ್ಲಿ ಭಾಗವಹಿಸಲಿದ್ದಾರೆ.

ಹಜ್ ನಿಯಮಾವಳಿಗಳ ಯಾವುದೇ ಉಲ್ಲಂಘನೆಯನ್ನು ಪತ್ತೆಹಚ್ಚಲು ಪವಿತ್ರ ಸ್ಥಳಗಳ ಪ್ರವೇಶ ದ್ವಾರಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು. ಹಜ್ ಪರ್ಮಿಟ್‌ಗಳನ್ನು ಹೊಂದಿರದ 4 ಲಕ್ಷಕ್ಕೂ ಅಧಿಕ ಮಂದಿಯನ್ನು ವಾಪಸ್ ಕಳುಹಿಸಲಾಗಿದೆ ಎಂದು ಅವರು ತಿಳಿಸಿದರು.

ಸರಿಯಾದ ಪರ್ಮಿಟ್‌ಗಳಿಲ್ಲದವರು ಚಲಾಯಿಸುತ್ತಿದ್ದ 2,08,236 ಕಾರುಗಳನ್ನು ವಾಪಸ್ ಕಳುಹಿಸಲಾಗಿದೆ ಹಾಗೂ ಮಕ್ಕಾ ಪ್ರವೇಶ ದ್ವಾರಗಳಲ್ಲಿ ಇನ್ನೂ 3,296 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಯಾತ್ರಿಗಳ ಪ್ರಯಾಣಕ್ಕಾಗಿ ಸಾವಿರಾರು ಬಸ್‌ಗಳ ನಿಯೋಜನೆ

19,500 ಬಸ್‌ಗಳು ಯಾತ್ರಿಕರನ್ನು ಮದೀನಾದಿಂದ ಮಕ್ಕಾಗೆ ಸಾಗಿಸಿವೆ ಹಾಗೂ 38,000 ಬಸ್‌ಗಳು ಇತರ ಸ್ಥಳಗಳಿಂದ ಯಾತ್ರಿಕರನ್ನು ಇತರ ಸ್ಥಳಗಳಿಂದ ಸಾಗಿಸಿವೆ. ಬಳಿಕ 9,000 ಬಸ್‌ಗಳು ಯಾತ್ರಿಗಳನ್ನು ಮಿನಾಕ್ಕೆ ಸಾಗಿಸಲಿವೆ ಎಂದು ಹಜ್ ಸಚಿವರ ಸಲಹಾಕಾರ ಹಾತಿಮ್ ಬಿನ್ ಹಸನ್ ಖಾದಿ ತಿಳಿಸಿದರು.

ಯಾತ್ರಿಕರಿಗಾಗಿ ಮಿನಾದಲ್ಲಿ ಶಿಬಿರಗಳು ಸಿದ್ಧಗೊಂಡಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X