Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ರಿಯಾದ್: ಹಜ್ಜಾಜಿಗಳ ಸೇವೆಗೆ ಸಜ್ಜಾದ...

ರಿಯಾದ್: ಹಜ್ಜಾಜಿಗಳ ಸೇವೆಗೆ ಸಜ್ಜಾದ ಇಂಡಿಯಾ ಫ್ರೆಟರ್ನಿಟಿ ಫಾರಂ

ವಾರ್ತಾಭಾರತಿವಾರ್ತಾಭಾರತಿ30 Aug 2017 9:00 PM IST
share
ರಿಯಾದ್: ಹಜ್ಜಾಜಿಗಳ ಸೇವೆಗೆ ಸಜ್ಜಾದ ಇಂಡಿಯಾ ಫ್ರೆಟರ್ನಿಟಿ ಫಾರಂ

ರಿಯಾದ್, ಆ. 30: ಕಳೆದ ಹಲವಾರು ವರ್ಷಗಳಿಂದ ಹಜ್ ಯಾತ್ರಾರ್ಥಿಗಳ ನಿರಂತರ ಸೇವೆ ಮಾಡುತ್ತಿರುವ ಇಂಡಿಯಾ ಫ್ರೆಟರ್ನಿಟಿ ಫಾರಂನ ಸ್ವಯಂ ಸೇವಕರ ತಂಡವು ಈ ಬಾರಿಯೂ ಸಹ ಸೌದಿ ಅರೇಬಿಯಾದ ವಿವಿಧ ಪ್ರದೇಶಗಳ ಸಾವಿರಾರು ಅನಿವಾಸಿ ಭಾರತೀಯ ಸ್ವಯಂ ಸೇವಕರ ತಂಡದೊಂದಿಗೆ ಸೇವೆ ಮಾಡುತ್ತಿದೆ.

ಇದರ ಭಾಗವಾಗಿ ರಿಯಾದ್ ವಿಭಾಗದಿಂದ ಕೇರಳ, ಕರ್ನಾಟಕ, ತ. ನಾಡು, ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ. ಉ.ಪ್ರದೇಶ, ಬಿಹಾರ ಮತ್ತು ಉತ್ತರಾಖಂಡ ಸೇರಿದಂತೆ ಭಾರತದ ವಿವಿಧ ರಾಜ್ಯಗಳ ಅನಿವಾಸಿ ಭಾರತೀಯರ ಸ್ವಯಂ ಸೇವಕರ ತಂಡವು  ಹಜ್ ಯಾತ್ರಾರ್ಥಿಗಳ ಸೇವೆಗೆ ಪವಿತ್ರ ಮಕ್ಕ ತೆರಳಲು ಸಜ್ಜಾಗಿದೆ.

 ಆ. 26 ರಂದು ಬತ್ತದಲ್ಲಿರುವ ಶಿಫಾ ಅಲ್ ಜಝೀರಾ ಆಸ್ಪತ್ರೆಯ ಸಭಾಂಗಣದಲ್ಲಿ ಕ್ಯಾಪ್ಟನ್ ಜುನೇದ್ ಅನ್ಸಾರಿ ಮತ್ತು ಸಹ ಕ್ಯಾಪ್ಟನ್ ಅಲ್ತಾಫ್ ಮಂಜೇಶ್ವರ ರವರ ನೇತೃತ್ವದಲ್ಲಿ ಸ್ವಯಂ ಸೇವಕರಿಗೆ ತರಬೇತಿ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ  ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ಮಾಜಿ ಚೇಯರ್ ಮ್ಯಾನ್ ಜನಾಬ್ ಹೈದರ್ ಅಲಿ, IFFನ ಸಮಾಜ ಸೇವೆಯನ್ನು ಮುಕ್ತ ಕಂಠದಿಂದ ಶ್ಲಾಘಿಸುತ್ತ ಸ್ವಯಂ ಸೇವಕರಿಗೆ ಶುಭಹಾರೈಸಿದರು.

ಅಧ್ಯಕ್ಷತೆ ವಹಿಸಿದ ಇಂಡಿಯಾ ಫ್ರೆಟರ್ನಿಟಿ ಫಾರಂ ರಿಯಾದ್ ಕೇಂದ್ರ ಸಮಿತಿಯ ಅಧ್ಯಕ್ಷ  ಸಲೀಮ್ ಖಾಸಿಮಿ ಮಾತನಾಡಿ, ಹಜ್ಜಾಜಿಗಳ ಸೇವೆ ಮಾಡಲು ಇಂಡಿಯಾ ಫ್ರೆಟರ್ನಿಟಿ ಫಾರಂ ರಿಯಾದ್ ಘಟಕವು ಸಕಲ ಸಿದ್ಧತೆಯೊಂದಿಗೆ ಸಿದ್ಧವಿದೆ ಮತ್ತು ಸಮಾಜ ಸೇವೆಯ ಪ್ರಾಮುಖ್ಯತೆಯನ್ನು ಸವಿವರವಾಗಿ ತಿಳಿಸಿದರು.

ವೇದಿಕೆಯಲ್ಲಿ ಇಂಡಿಯನ್ ಸೋಶಿಯಲ್ ಫಾರಂನ ಕೇಂದ್ರ ಸಮಿತಿಯ ಅಧ್ಯಕ್ಷ ಕೋಯಾ ಉಪಸ್ಥಿತರಿದ್ದರು. ಸ್ವಯಂ ಸೇವಕರಿಗೆ ಮಲಯಾಳಂ, ತಮಿಳು, ಕನ್ನಡ ಮತ್ತು ಉರ್ದು ಭಾಷೆಯಲ್ಲಿ ತರಬೇತಿ ನೀಡಲಾಯಿತು. ಕಾರ್ಯಕ್ರಮವನ್ನು ಫಹೀಮ್ ಹೈದರಾಬಾದ್ ನಿರೂಪಿಸಿದರೆ, ಇಸ್ಮಾಯಿಲ್ ಇನೋಳಿ  ವಂದಿಸಿದರು.

ಈ ಸಂಧರ್ಭದಲ್ಲಿ ಇಂಡಿಯಾ ಫ್ರೆಟರ್ನಿಟಿ ಫಾರಂ ಜಿದ್ದಾ ಘಟಕವು ಹಜ್ ಯಾತ್ರಾರ್ಥಿಗಳಿಗಾಗಿ ಸಿದ್ಧಪಡಿಸಿದ  ಆಂಡ್ರಾಯ್ಡ್ ಆಪ್ Hajj Navigator ನ  ಸದುಪಯೋಗ ಪಡೆದುಕೊಳ್ಳಬೇಕಾಗಿ ಇಂಡಿಯಾ ಫ್ರೆಟರ್ನಿಟಿ ಫಾರಂ ಪ್ರಕಟಣೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X