Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮನೆಗಳ ತೆರವಿಗೆ ಮುಂದಾದ ಸೇನೆ: ಉದ್ವಿಗ್ನ...

ಮನೆಗಳ ತೆರವಿಗೆ ಮುಂದಾದ ಸೇನೆ: ಉದ್ವಿಗ್ನ ಪರಿಸ್ಥಿತಿ

ವಾರ್ತಾಭಾರತಿವಾರ್ತಾಭಾರತಿ30 Aug 2017 10:20 PM IST
share
ಮನೆಗಳ ತೆರವಿಗೆ ಮುಂದಾದ ಸೇನೆ: ಉದ್ವಿಗ್ನ ಪರಿಸ್ಥಿತಿ

ಬೆಂಗಳೂರು, ಆ.30: ಇಲ್ಲಿನ ಜೆ.ಸಿ.ನಗರದ ಮೋದಿ ಗಾರ್ಡನ್ ಸಮೀಪದ ಮಸೀದಿ ಮತ್ತು ಆಂಜನೇಯ ದೇವಸ್ಥಾನದ ಬಳಿಯ ಮನೆಗಳ ತೆರವಿಗೆ ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರಿಂದ, ಸೇನೆಯ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿಗಳ ನಡುವೆ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಕಾನೂನು ಉಲ್ಲಂಘಿಸಿ ಸೇನೆಯ ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಬುಧವಾರ ಬೆಳಗ್ಗೆ 11ರ ಸುಮಾರಿಗೆ ಜೆ.ಸಿ.ಬಿ ಯಂತ್ರದ ಸಮೇತ ಸ್ಥಳಕ್ಕೆ ಬಂದ ಅರೆಸೇನಾ ತುಕಡಿಯ ಸಿಬ್ಬಂದಿಯು ಮಸೀದಿ ಸುತ್ತಲಿನ ಮೂರು ಮನೆ, ಕಿರಾಣಿ ಅಂಗಡಿ, ಆಂಜನೇಯ ದೇವಸ್ಥಾನ ಬಳಿಯ ಮನೆಯನ್ನು ಖಾಲಿ ಮಾಡುವಂತೆ ಹೇಳಿದರು.

ಇದರಿಂದ ಗಾಬರಿಗೊಂಡ ಸ್ಥಳೀಯ ನಿವಾಸಿಗಳು, ಮನೆಯಿಂದ ಹೊರಬಂದು ಸಿಬ್ಬಂದಿಯ ವರ್ತನೆಯನ್ನು ಪ್ರಶ್ನಿಸಿದಾಗ ಮಾತಿನ ಚಕಮಕಿ ನಡೆಯಿತು. ಸ್ಥಳಕ್ಕೆ ಬಂದ ಜೆ.ಸಿ.ನಗರ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಮಣ್ಣು ಸುರಿದರು: ಮಧ್ಯಾಹ್ನ 12:15 ಸುಮಾರಿಗೆ ಸೇನೆಯ ಸಿಬ್ಬಂದಿಯು ಟಿಪ್ಪರ್ ವಾಹನದಲ್ಲಿ ಮಣ್ಣು ತುಂಬಿಕೊಂಡು ಬಂದು, ನಿವಾಸಿಗಳು ಓಡಾಡುವ ರಸ್ತೆಗೆ ಸುರಿದರು. ಇದರಿಂದಾಗಿ ರಸ್ತೆಯಲ್ಲಿ ನಿತ್ಯವೂ ಓಡಾಡುತ್ತಿದ್ದ ಜನರಿಗೆ ತೊಂದರೆ ಉಂಟಾಯಿತು. ಆಗ ನಿವಾಸಿಗಳ ಪರ ನಿಂತ ಸ್ಥಳೀಯರು, ಸೇನೆಯ ವರ್ತನೆಯನ್ನು ಖಂಡಿಸಿ ಪ್ರತಿಭಟನೆ ಆರಂಭಿಸಿದರು. ಬಳಿಕ ಇಬ್ಬರ ನಡುವೆ ಪರಸ್ಪರ ನೂಕಾಟ ತಳ್ಳಾಟ ಉಂಟಾಯಿತು ಎಂದು ಮೂಲಗಳು ತಿಳಿಸಿವೆ.

ಮಧ್ಯಾಹ್ನ 3 ಗಂಟೆಯವರೆಗೂ ಸೇನೆ ಸಿಬ್ಬಂದಿ ಹಾಗೂ ಸ್ಥಳೀಯರು ನಡುವಿನ ಗಲಾಟೆ ಉಂಟಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಸಂಬಂಧ ಸ್ಥಳಕ್ಕೆ ಬಂದ ಶಾಸಕ ಝಮೀರ್ ಅಹ್ಮದ್, ಸ್ಥಳೀಯ ಮುಖಂಡರು ಹಾಗೂ ಸೇನೆ ಅಧಿಕಾರಿಗಳೊಂದಿಗೆ ಜತೆ ಸಂಧಾನ ನಡೆಸಿ ರಸ್ತೆಯಲ್ಲಿದ್ದ ಮಣ್ಣನ್ನು ತೆರವುಗೊಳಿಸಿ ಓಡಾಟಕ್ಕೆ ಅನುಕೂಲ ಮಾಡಿಕೊಟ್ಟರು.

ಸೇನೆ ವಿರುದ್ಧ ಅಸಮಾಧಾನ: ಜಾಗ ತೆರವು ಸಂಬಂಧ ಸೇನೆಯ ಅಧಿಕಾರಿಗಳು, ಹಲವು ವರ್ಷಗಳಿಂದ ನೋಟಿಸ್ ನೀಡುತ್ತಿದ್ದಾರೆ. ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದೇವೆ. ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಾಲಯವು ಸೂಚನೆ ನೀಡಿದ್ದು, ಆದೇಶ ಪ್ರತಿ ಕೈ ಸೇರಬೇಕಿದೆ. ಅದರ ಮಧ್ಯೆಯೇ ಸೇನಾ ಸಿಬ್ಬಂದಿ ಸ್ಥಳಕ್ಕೆ ಬಂದು ತೆರವು ಮಾಡುತ್ತಿದ್ದಾರೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು.

ಜಾಗದ ವಿವಾದ ಹೈಕೋರ್ಟ್‌ನಲ್ಲಿದೆ. ಈ ಬಗ್ಗೆ ಆದೇಶವಾಗಿದ್ದು, ಅದನ್ನು ಸೇನೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಅವರು ಆದೇಶ ಪ್ರತಿ ತೋರಿಸುವಂತೆ ಹೇಳಿದ್ದಾರೆ. ಹೈಕೋರ್ಟ್ ಪ್ರತಿ ಕೈಗೆ ಸಿಕ್ಕಿಲ್ಲ. ಸಿಕ್ಕ ಬಳಿಕ ತೋರಿಸುವುದಾಗಿ ಕಾಲಾವಕಾಶ ಪಡೆದಿದ್ದೇವೆ. ಹಬ್ಬದ ಬಳಿಕ ಮತ್ತೊಮ್ಮೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದೇವೆ.
-ಝಮೀರ್ ಅಹ್ಮದ್, ಶಾಸಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X