Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಸ್ಕರಣಾ ಘಟಕದ ಬಗ್ಗೆ ರೈತರು ಸೂಕ್ತ...

ಸಂಸ್ಕರಣಾ ಘಟಕದ ಬಗ್ಗೆ ರೈತರು ಸೂಕ್ತ ರೀತಿಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು: ಶಾಸಕ ಕೆ.ಎಸ್.ಪುಟ್ಟಣ್ಣಯ್ಯ

ವಾರ್ತಾಭಾರತಿವಾರ್ತಾಭಾರತಿ30 Aug 2017 10:49 PM IST
share
ಸಂಸ್ಕರಣಾ ಘಟಕದ ಬಗ್ಗೆ ರೈತರು ಸೂಕ್ತ ರೀತಿಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು: ಶಾಸಕ ಕೆ.ಎಸ್.ಪುಟ್ಟಣ್ಣಯ್ಯ

ಮಂಡ್ಯ, ಆ.30: ರೈತರು ತಮ್ಮ ಬೆಳೆ ಬೆಳೆಯುವ ಸಂದರ್ಭದಲ್ಲಿ ಬೆಳೆಗೆ ಸೂಕ್ತ ಪೌಷ್ಟಿಕಾಂಶ, ನೀರಿನ ಗಳಿಕೆ, ಬಳಕೆ, ಉಳಿಕೆಯ ಸಂಬಂಧ ವೈಜ್ಞಾನಿಕವಾಗಿ ವಿಶ್ಲೇಷಣೆ ಮಾಡಬೇಕಿದೆ ಎಂದು ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅಭಿಪ್ರಾಯಿಸಿದರು.

ತಾಲೂಕಿನ ವಿ.ಸಿ.ಫಾರಂನ ಕೆ.ವಿ.ಕೆ. ಆವರಣದಲ್ಲಿ ನಡೆದ ಸಂಕಲ್ಪದಿಂದ ಸಿದ್ಧಿ- ನ್ಯೂ ಇಂಡಿಯಾ ಮಂಥನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಬೆಳೆ ಬೆಳೆಯುವ ಸಂಬಂದ ಎಲ್ಲ ಎಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ರೈತರ ದುಡಿಮೆಗೆ ತಕ್ಕಂತೆ ಬೆಳೆಗಳ ಬೆಲೆ ನಿಗದಿ ಪಡಿಸಬೇಕಾದ ಅಗತ್ಯತೆ ಇದೆ. ಕೊಯ್ಲೋತ್ತರ ನಷ್ಟ ನಿರ್ವಹಣೆ, ಸುಧಾರಿತ ಬೀಜ, ಸಂಸ್ಕರಣಾ ಘಟಕ ಇತ್ಯಾದಿಗಳ ಬಗ್ಗೆ ರೈತರು ಸೂಕ್ತ ರೀತಿಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ತೋಟಗಾರಿಕಾ ಬೆಳೆಗಳ ರಕ್ಷಣೆ, ಕಾಳುಗಳ ಬೆಳೆ ರಕ್ಷಣೆ ಸಂಬಂಧ ವಿಜ್ಞಾನಿಗಳು ಹಾಗೂ ತಂತ್ರಜ್ಞಾನಿಗಳ ಸಂಶೋಧನೆ ನಿರಂತರವಾಗಿ ನಡೆಯುತ್ತಿದ್ದು, ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. 130 ಕೋಟಿ ಜನರಿಗೆ 70 ಲಕ್ಷ ಟನ್ ಆಹಾರ ಉತ್ಪಾದಿಸಿ, ಸ್ವಾವಲಂಬಿ ಹಾಗು ಸ್ವಾಭಿಮಾನಿ ಜೀವನ ನೀಡುವ ಆಶ್ವಾಸನೆಯನ್ನು ಸರ್ಕಾರಗಳು ನೀಡುತ್ತಿದ್ದು ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಹೇಳಿದರು.

ಸರ್ಕಾರ ಕೃಷಿ ನೀತಿ ಅನುಷ್ಠಾನಕ್ಕೆ ತರಲು ಮುಂದಾಗಿಲ್ಲ, ಜಿಲ್ಲೆಯಲ್ಲಿ 7 ಲಕ್ಷ ಕುಟುಂಬಗಳು 1 ಎಕರೆ ಭೂಮಿಯನ್ನು ಹೊಂದಿರುವಂತಹ ಕುಟುಂಬಗಳಾಗಿವೆ. ಆದರೂ ಇಲ್ಲಿ ಕೃಷಿ ನೀತಿ ಅನುಷ್ಠಾನಕ್ಕೆ ತರಲು ಸಾಧ್ಯವಾಗುತ್ತಿಲ್ಲ, ಭೂಮಿ ಆಧಾರಿತ ಆದಾಯ ಖಾತ್ರಿ ಯೋಜನೆಯ ಕೃಷಿ ಪದ್ದತಿ ಸೃಷ್ಠಿಸಲು ಸರ್ಕಾರ ಇಚ್ಛಾಸಕ್ತಿ ತೋರುತ್ತಿಲ್ಲ ಎಂದು ಸರ್ಕಾರಗಳ ವಿರುದ್ಧ ಕಿಡಿಕಾರಿದರು.

ದೇಶದಲ್ಲಿ 26 ಕೋಟಿ ಉದ್ಯೋಗ ಖಾಲಿ ಇವೆ. ಆದರೆ ಇದನ್ನು ಭರ್ತಿ ಮಾಡುವಲ್ಲಿ ಸರ್ಕಾರಗಳು ವಿಫಲವಾಗಿವೆ. ಇಷ್ಟೆಲ್ಲ ಉದ್ಯೋಗಗಳು ಖಾಲಿ ಇದ್ದು, ಸರ್ಕಾರ ಉದ್ಯೋಗ ಭರ್ತಿ ಮಾಡಿ, ರೈತರ ಮೇಲಿನ ಹೊರೆಯನ್ನು ಕಡಿಮೆ ಮಾಡಬೇಕು ಒತ್ತಾಯಿಸಿದರು.

ಈ ವೇಳೆ ಕೃಷಿ ವಿವಿ ನಿವೃತ್ತ ಶಿಕ್ಷಣ ನಿರ್ದೇಶಕ ಡಾ.ಸಿ.ಶಂಕರಯ್ಯ ಅವರು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ತಾ.ಪಂ ಅಧ್ಯಕ್ಷ ಕೆ.ಎಂ.ಬೀರಪ್ಪ, ಬೆಂಗಳೂರಿನ ಕೃತಂಅಸಂ ಸಂಸ್ಥೆಯ ನಿರ್ದೇಶಕ ಡಾ.ಶ್ರೀನಾಥದೀಕ್ಷಿತ್, ವಿ.ಸಿ.ಫಾರಂ ಕೃಷಿ ವಿವಿ ಡೀನ್ ಡಾ.ಟಿ.ಶಿವಶಂಕರ್, ಸಹಸಂಶೋಧನಾ ನಿರ್ದೇಶಕ ಡಾ.ಸಿ.ಆರ್.ರವಿಶಂಕರ್, ಕೆ.ವಿ.ಕೆ. ಕಾರ್ಯಕ್ರಮ ಸಂಯೋಜಕ ಡಾ.ರಂಗನಾಥ್, ಜಂಟಿ ಕೃಷಿ ನಿರ್ದೇಶಕಿ ಡಾ.ರಾಜಸುಲೋಚನಾ, ಸಹವಿಸ್ತರಣಾ ನಿರ್ದೇಶಕ ಡಾ.ವೆಂಕಟೇಶ್,  ಮುಖಂಡ ಯೋಗೇಶ್ ಇನ್ನಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X