Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಿಯುವ ಹಂತವನ್ನು ಅಲಕ್ಷಿಸದೇ...

ಕಲಿಯುವ ಹಂತವನ್ನು ಅಲಕ್ಷಿಸದೇ ಸುಶಿಕ್ಷಿತರಾಗಿ: ಪ್ರೊ.ಮಲ್ಲಿಕಾರ್ಜುನ ಹಲಸಂಗಿ

ವಾರ್ತಾಭಾರತಿವಾರ್ತಾಭಾರತಿ30 Aug 2017 11:10 PM IST
share
ಕಲಿಯುವ ಹಂತವನ್ನು ಅಲಕ್ಷಿಸದೇ ಸುಶಿಕ್ಷಿತರಾಗಿ: ಪ್ರೊ.ಮಲ್ಲಿಕಾರ್ಜುನ ಹಲಸಂಗಿ

ದಾವಣಗೆರೆ, ಆ.30: ಶಿಕ್ಷಣ, ಅರಿವು ಮತ್ತು ಜ್ಞಾನ ಮಾತ್ರ ಯುವಜನತೆಯ ಕೈಹಿಡಿದು ನಡೆಸಬಲ್ಲದು. ಕಲಿಯುವ ಹಂತವನ್ನು ಯಾವುದೇ ಕಾರಣಕ್ಕೆ ಅಲಕ್ಷಿಸದೆ, ಉತ್ಸಾಹ ಮತ್ತು ಸಕಾರಾತ್ಮಕ ಭಾವನೆಯಿಂದ ಸುಶಿಕ್ಷಿತರಾಗಬೇಕೆಂದು ಉಪನ್ಯಾಸಕ ಪ್ರೊ. ಮಲ್ಲಿಕಾರ್ಜುನ ಹಲಸಂಗಿ ಹೇಳಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಡಾ.ಸಿ.ವಿ ರಾಮನ್ ಕಾಲೇಜು ಆಶ್ರಯದಲ್ಲಿ ಬುಧವಾರ ನಗರದ ಡಾ.ಸಿ.ವಿ ರಾಮನ್ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ಯುವ ದಿನಾಚರಣೆ  ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. 

ವಿದ್ಯಾರ್ಥಿ ಜೀವನ ಒಂದು ನಿರ್ಣಾಯಕ ಹಂತ. ಯುವ ಶಕ್ತಿಯೇ ರಾಷ್ಟ್ರ ಶಕ್ತಿಯಾಗಿದ್ದು, ಸುಂದರ, ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ವಿದ್ಯಾರ್ಥಿಗಳ ಮತ್ತು ಶಿಕ್ಷಣದ ಪಾತ್ರ ಬಹಳ ಮುಖ್ಯವಾಗಿದೆ. ಆದರೆ ಇಂದಿನ ಶಿಕ್ಷಣದಿಂದ ಕೌಶಲ್ಯಗಳು ಕರಗತವಾಗುತ್ತಿಲ್ಲ. ಪ್ರಸ್ತುತ ಸನ್ನಿವೇಶದಲ್ಲಿ ಶಾಂತಿಯ ನಿರೀಕ್ಷೆ ದೊಡ್ಡ ಸವಲಾಗಿದೆ. ಶಾಂತಿ ಮರೀಚಿಕೆಯಾಗಿದೆ. ವ್ಯವಸ್ಥೆ ನಮ್ಮನ್ನು ದುರ್ಬಲಗೊಳಿಸುತ್ತಿದೆ ಎಂದರು.  

ನಮ್ಮ ದೇಶದಲ್ಲಿ 70 ಕೋಟಿ ಯುವಕರಿದ್ದು ಶೇ. 10 ರಷ್ಟು ಮಾತ್ರ ಕೌಶಲ್ಯಾತ್ಮಕ ಯುವಕರಿದ್ದು ಶೇ. 90 ರಲ್ಲಿ ಕೌಶಲ್ಯವಿಲ್ಲ. ನಮ್ಮ ವ್ಯವಸ್ಥೆ ಭ್ರಮೆಯನ್ನು ಬಿತ್ತುತ್ತಿದೆ. ಭ್ರಮೆಯನ್ನೇ ವಾಸ್ತವವಾಗಿಸುತ್ತಿದೆ. ಒಂದು ಹೆಣ್ಣು ಮಗು ನಿರ್ಭೀತವಾಗಿ ಇಂದಿಗೂ ಓಡಾಡಲು ಸಾಧ್ಯವಾಗದ ಅಭದ್ರತೆ ಇದೆ. ಆರ್ಥಿಕ ಬಿಕ್ಕಟ್ಟಿದೆ. ಇದಕ್ಕೆಲ್ಲ ಮುಖ್ಯ ಕಾರಣ ಗುಣಮಟ್ಟ ಶಿಕ್ಷಣದ ಕೊರತೆ. ಸಮಾಜ ಶಿಕ್ಷಣವನ್ನು ನಿಯಂತ್ರಿಸಬಾರದು. ಬದಲಾಗಿ ಶಿಕ್ಷಣ ಸಮಾಜವನ್ನು ನಿಯಂತ್ರಿಸುವಂತಿರಬೇಕು. ಸ್ವತಂತ್ರವಾಗಿ ಆಲೋಚಿಸಲು ಅವಕಾಶವೀಯುವ ಶಿಕ್ಷಣದ ಅವಶ್ಯಕತೆ ಎಂದು ಹೇಳಿದರು.

ಶಿಕ್ಷಣ ನಾಲ್ಕು ಮುಖ್ಯ ಅಂಶಗಳಾದ ಕೇಳುವುದು, ಮಾತನಾಡುವುದು, ಓದುವುದು ಮತ್ತು ಬರೆಯುವುದನ್ನು ಒಳಗೊಳ್ಳಬೇಕು. ವಿದ್ಯಾರ್ಥಿಗಳೂ ಕೂಡ ಕಲಿಯುವ ಹಂತವನ್ನು ಅಲಕ್ಷಿಸದೇ, ಸಕಾರಾತ್ಮಕ ಭಾವನೆಗಳನ್ನು ಹೊಂದಿ ನಿಮ್ಮ ಜೀವನದ ಶಿಲ್ಪಿ ನೀವೇ ಆಗಬೇಕೆಂದು ಕರೆ ನೀಡಿದರು.

ಈ ವೇಳೆ ಆಗಸ್ಟ್ 19 ರಂದು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಯುವ ದಿನಾಚರಣೆ ಕುರಿತು ಏರ್ಪಡಿಸಲಾಗಿದ್ದ ಪ್ರಬಂಧ ಮತ್ತು ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 

ಕಾರ್ಯಕ್ರಮದಲ್ಲಿ ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಡಾ. ಜಿ.ಡಿ ರಾಘವನ್, ಗಂಗಾಧರಯ್ಯ ಕಾಲೇಜಿನ ವಿದ್ಯಾರ್ಥಿನಿ ರೇಖಾ ಎಸ್. ಕೆ .ಮತ್ತು ಅಣ್ಣೇಶ್ ಯುವ ಸಂಪತ್ತಿನ ಕುರಿತು ಮಾತನಾಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X