ಪುತ್ತೂರು ಪತ್ರಕರ್ತರ ಸಂಘ: ಅಧ್ಯಕ್ಷರಾಗಿ ಮಹೇಶ್ ಆಯ್ಕೆ
ಪುತ್ತೂರು, ಆ. 30: ಪುತ್ತೂರು ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ ಹಾಗೂ ಕಾರ್ಯದರ್ಶಿಯಾಗಿ ಕಿರಣ್ ಪ್ರಸಾದ್ ಕುಂಡಡ್ಕ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ತಾಲ್ಲೂಕು ಪತ್ರಕರ್ತರ ಸಂಘದ ಸಭೆಯ ಅಧ್ಯಕ್ಷ ಸಂತೋಷ್ಕುಮಾರ್ ಶಾಂತಿನಗರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಬಳಿಕ ಹಿರಿಯ ವರದಿಗಾರ ಬಿ.ಟಿ.ರಂಜನ್ ಅವರು ಚುನಾವಣಾಧಿಕಾರಿಯಾಗಿ ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಕೃಷ್ಣಪ್ರಸಾದ್ ಬಲ್ನಾಡು ಅವರು ಸಹಾಯಕ ಚುನಾವಣಾಧಿಕಾರಿಯಾಗಿ ಸಹಕರಿಸಿದರು.
ಉಪಾಧ್ಯಕ್ಷರುಗಳಾಗಿ ಸುಧಾಕರ್ ಸುವರ್ಣ ತಿಂಗಳಾಡಿ ಮತ್ತು ಅನೀಶ್ ಕುಮಾರ್ ಮರೀಲ್, ಜೊತೆ ಕಾರ್ಯದರ್ಶಿಯಾಗಿ ಶ್ರವಣ್ ಕುಮಾರ್ ನಾಳ, ಕೋಶಾಧಿಕಾರಿಯಾಗಿ ಹರೀಶ್ ಅವರು ಅವಿರೋಧವಾಗಿ ಆಯ್ಕೆಗೊಂಡರು.
ಪತ್ರಕರ್ತರ ಸಂಘದ ಮಾಜಿ ಕಾರ್ಯದರ್ಶಿ ಉದಯಕುಮಾರ್ ಸ್ವಾಗತಿಸಿ , ನೂತನ ಕಾರ್ಯದರ್ಶಿ ಕಿರಣ್ಪ್ರಸಾದ್ ಕುಂಡಡ್ಕ ವಂದಿಸಿದರು.
Next Story