Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್‌ನಲ್ಲಿ ‘ಬಂಡುಕೋರರಿಂದ...

ಮ್ಯಾನ್ಮಾರ್‌ನಲ್ಲಿ ‘ಬಂಡುಕೋರರಿಂದ ಪೊಲೀಸ್ ಠಾಣೆಗಳ ಮೇಲೆ ದಾಳಿ’; ಸೇನೆಯಿಂದ ಪ್ರತೀಕಾರ

18,000 ರೊಹಿಂಗ್ಯರು ಬಾಂಗ್ಲಾಕ್ಕೆ ಪಲಾಯನ

ವಾರ್ತಾಭಾರತಿವಾರ್ತಾಭಾರತಿ30 Aug 2017 11:56 PM IST
share
ಮ್ಯಾನ್ಮಾರ್‌ನಲ್ಲಿ ‘ಬಂಡುಕೋರರಿಂದ ಪೊಲೀಸ್ ಠಾಣೆಗಳ ಮೇಲೆ ದಾಳಿ’; ಸೇನೆಯಿಂದ ಪ್ರತೀಕಾರ

ಢಾಕಾ (ಬಾಂಗ್ಲಾದೇಶ), ಆ. 30: ಮ್ಯಾನ್ಮಾರ್‌ನಲ್ಲಿ ಹೊಸದಾಗಿ ಹಿಂಸಾಚಾರ ಭುಗಿಲೆದ್ದ ಬಳಿಕ 18,000ಕ್ಕೂ ಅಧಿಕ ರೊಹಿಂಗ್ಯ ಮುಸ್ಲಿಮರು ಆ ದೇಶವನ್ನು ತೊರೆದು, ಬಾಂಗ್ಲಾದೇಶಕ್ಕೆ ಗಡಿ ದಾಟಿ ಬಂದಿದ್ದಾರೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ (ಐಒಎಂ) ಬುಧವಾರ ತಿಳಿಸಿದೆ. ಅದೇ ವೇಳೆ, ನೂರಾರು ಮಂದಿ ಎರಡು ದೇಶಗಳ ಗಡಿಯಲ್ಲಿರುವ ‘ಯಾರಿಗೂ ಸೇರದ ಜಾಗ’ದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದಿದೆ.

ಮ್ಯಾನ್ಮಾರ್‌ನೊಂದಿಗಿನ ಬಾಂಗ್ಲಾದೇಶ ಗಡಿಯಲ್ಲಿರುವ ಕಾಕ್ಸ್‌ಬಝಾರ್‌ನಲ್ಲಿ ಐಒಎಂ ಕಚೇರಿ ಇದೆ. ಸಂಘಟನೆಯ ವಕ್ತಾರೆ ಸಂಜುಕ್ತಾ ಸಹಾನಿ ಈ ಹೊಸ ಅಂಕಿಸಂಖ್ಯೆಗಳನ್ನು ಬಿಡುಗಡೆ ಮಾಡಿದ್ದಾರೆ.

ಅದೇ ವೇಳೆ, ರೊಹಿಂಗ್ಯ ಬಂಡುಕೋರರು ನಡೆಸಿರುವ ದಾಳಿಗಳಿಗಾಗಿ ಮ್ಯಾನ್ಮಾರ್ ಸೇನೆಯು ಗ್ರಾಮಗಳನ್ನು ಸುಟ್ಟುಹಾಕುವ ಹಾಗೂ ನಾಗರಿಕರ ಮೇಲೆ ಗುಂಡು ಹಾರಿಸುವ ಮೂಲಕ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಮಾನವಹಕ್ಕು ಸಂಘಟನೆಗಳು ಮತ್ತು ರೊಹಿಂಗ್ಯ ಪರ ಹೋರಾಟಗಾರರು ಆರೋಪಿಸಿದ್ದಾರೆ.

ಹಿಂಸಾಚಾರಕ್ಕೆ ರೊಹಿಂಗ್ಯ ಬಂಡುಕೋರರು ಕಾರಣ ಎಂಬುದಾಗಿ ಮ್ಯಾನ್ಮಾರ್ ಸರಕಾರ ಆರೋಪಿಸಿದೆ.

 ಹಿಂಸಾಚಾರದಲ್ಲಿ ಮೃತಪಟ್ಟವರ ಅಧಿಕೃತ ಸಂಖ್ಯೆ ರವಿವಾರದ ಮಟ್ಟಿಗೆ 96. ಆದರೆ ನಿಜವಾಗಿ ಸತ್ತವರ ಸಂಖ್ಯೆ ತುಂಬಾ ಹೆಚ್ಚಾಗಿರಬಹುದು ಎಂದು ಹೇಳಲಾಗಿದೆ.

 ಮ್ಯಾನ್ಮಾರ್‌ನಲ್ಲಿರುವ ಸುಮಾರು 10 ಲಕ್ಷ ರೊಹಿಂಗ್ಯ ಮುಸ್ಲಿಮರ ಪೈಕಿ ಹೆಚ್ಚಿನವರು ರಖೈನ್ ರಾಜ್ಯದ ಉತ್ತರ ಭಾಗದಲ್ಲಿ ವಾಸಿಸುತ್ತಿದ್ದಾರೆ. ಬೌದ್ಧ ಪ್ರಾಬಲ್ಯದ ದೇಶದಲ್ಲಿ ಅವರು ಹಿಂಸಾಚಾರಕ್ಕೆ ಒಳಗಾಗಿದ್ದಾರೆ.

ಕಳೆದ ವಾರ, ರೊಹಿಂಗ್ಯ ಬಂಡುಕೋರರು ಪೊಲೀಸ್ ಠಾಣೆಗಳ ಮೇಲೆ ಸಂಘಟಿತ ದಾಳಿಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೆ ಸರಕಾರಿ ಪಡೆಗಳು ಸೇಡು ತೀರಿಸುತ್ತಿವೆ.

ರೊಹಿಂಗ್ಯ ಬಿಕ್ಕಟ್ಟು ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಗಳ ನಡುವಿನ ವಿವಾದವಲ್ಲ, ಅದು ಅಂತಾರಾಷ್ಟ್ರೀಯ ಬಿಕ್ಕಟ್ಟಾಗಿದೆ ಎಂದು ಸಹಾನಿ ಹೇಳಿದರು.

ಕಳೆದ ವರ್ಷದ ಅಕ್ಟೋಬರ್ ಒಂದರಿಂದ ಸುಮಾರು 87,000 ರೊಹಿಂಗ್ಯರು ಬಾಂಗ್ಲಾದೇಶ ಪ್ರವೇಶಿಸಿದ್ದಾರೆ ಹಾಗೂ ಈಗ ಕೇವಲ ಒಂದು ವಾರದಲ್ಲಿ ಹೊಸದಾಗಿ 18,000 ಮಂದಿ ಬಂದಿದ್ದಾರೆ ಎಂದು ಕಾಕ್ಸ್‌ಬಝಾರ್ ಜಿಲ್ಲೆಯ ಹಿರಿಯ ಸರಕಾರಿ ಅಧಿಕಾರಿ ಅಲಿ ಹುಸೈನ್ ‘ಅಸೋಸಿಯೇಟಡ್ ಪ್ರೆಸ್’ ಸುದ್ದಿ ಸಂಸ್ಥೆಗೆ ತಿಳಿಸಿದರು.

ಇದರಿಂದಾಗಿ ತಮ್ಮ ಸಂಪನ್ಮೂಲಗಳ ಮೇಲೆ ತೀವ್ರ ಒತ್ತಡ ಬಿದ್ದಿದೆ ಎಂದು ಅವರು ಹೇಳಿದರು.

‘‘ಇಲ್ಲಿ ನಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಾನು ಈಗಾಗಲೇ ಸರಕಾರದ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದೇನೆ. ಇಲ್ಲಿ ತುಂಬಾ ಸಂಕೀರ್ಣ ಪರಿಸ್ಥಿತಿ ನೆಲೆಸಿದೆ’’ ಎಂದರು.

ದೋಣಿ ಮುಳುಗಿ ಹಲವರ ಸಾವು

ಇನ್ನೊಂದು ಬೆಳವಣಿಗೆಯಲ್ಲಿ, ರೊಹಿಂಗ್ಯ ಮುಸ್ಲಿಮರನ್ನು ಒಯ್ಯತ್ತಿದ್ದ ದೋಣಿಯೊಂದು ನಾಫ್ ನದಿಯಲ್ಲಿ ಮಗುಚಿದ್ದು, ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ದೋಣಿಯು ಬಂಗಾಳಕೊಲ್ಲಿಯ ಶಾ ಪೊರಿರ್ ದ್ವೀಪದ ಮೂಲಕ ಬಾಂಗ್ಲಾದೇಶ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಮುಳುಗಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ನಾಲ್ಕು ಮೃತದೇಹಗಳನ್ನು ಮೇಲೆತ್ತಲಾಗಿದೆ ಹಾಗೂ ಹಲವಾರು ಮಂದಿ ನಾಪತ್ತೆಯಾಗಿರುವ ಸಾಧ್ಯತೆಯಿದೆ ಎಂದರು.

‘‘ದೋಣಿಯಲ್ಲಿ ಎಷ್ಟು ಜನರಿದ್ದರು ಎನ್ನುವುದು ನನಗೆ ಗೊತ್ತಿಲ್ಲ. ಶೋಧ ಕಾರ್ಯ ಮುಂದುವರಿಯುತ್ತಿದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X