Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 200 ಅಡಿ ಹೊರವರ್ತುಲ ರಸ್ತೆ ಯೋಜನೆ:...

200 ಅಡಿ ಹೊರವರ್ತುಲ ರಸ್ತೆ ಯೋಜನೆ: ಪ್ರಾಧಿಕಾರದ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ31 Aug 2017 5:16 PM IST
share

ಶಿವಮೊಗ್ಗ, ಆ. 31: ನಗರದ ಹೊರವಲಯದಲ್ಲಿ ಹೊಸದಾಗಿ 200 ಅಡಿ ವಿಸ್ತೀರ್ಣದ ಹೊರ ವರ್ತುಲ ರಸ್ತೆ ನಿರ್ಮಾಣ ಯೋಜನೆಯ ಕುರಿತಂತೆ ಸ್ಥಳ ಪರಿಶೀಲನೆ ನಡೆಸಿ ಸಮಗ್ರ ಮಾಹಿತಿ ನೀಡುವಂತೆ ಬೆಂಗಳೂರಿನ ಟೌನ್ ಪ್ಲ್ಯಾನಿಂಗ್ ವಿಭಾಗವು ಶಿವಮೊಗ್ಗ - ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ. 

ಈ ಸೂಚನೆಯಂತೆ ಪ್ರಾಧಿಕಾರದ ಅಧ್ಯಕ್ಷ ಇಸ್ಮಾಯಿಲ್ ಖಾನ್, ಆಯುಕ್ತ ಮೂಕಪ್ಪ ಕರಭೀಮಣ್ಣವರ್ ನೇತೃತ್ವದಲ್ಲಿ ಪ್ರಾಧಿಕಾರದ ಅಧಿಕಾರಿಗಳ ತಂಡವು ಹೊರ ವರ್ತುಲ ರಸ್ತೆ ಹಾದು ಹೋಗುವ ಪ್ರದೇಶಗಳಲ್ಲಿ ಕೆಲ ಸ್ಥಳಗಳಿಗೆ ಖುದ್ದು ಭೇಟಿಯಿತ್ತು ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿತು. 

ಸೂಚನೆ: ಸರಿಸುಮಾರು 33 ಕಿ.ಮೀ. ಉದ್ದದ ಹೊರ ವರ್ತುಲ ರಸ್ತೆ ನಿರ್ಮಾಣದ ರೂಪುರೇಷೆ ಸಿದ್ದಪಡಿಸಲಾಗಿದೆ. ಈಗಾಗಲೇ ಪ್ರಾಧಿಕಾರದ ಮಹಾಯೋಜನೆಯಡಿ ರಸ್ತೆ ಹಾದು ಹೋಗುವ ಪ್ರದೇಶಗಳನ್ನು ಗುರುತಿಸಲಾಗಿದೆ. ಈ ರಸ್ತೆ ನಿರ್ಮಾಣಕ್ಕೆ ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತ ಬೇಕಾಗಿರುವುದರಿಂದ ಯೋಜನೆ ಇಲ್ಲಿಯವರೆಗೂ ಕಾರ್ಯಗತಗೊಂಡಿಲ್ಲ. ಭೂ ಸ್ವಾದೀನ ಪ್ರಕ್ರಿಯೆಯೂ ಆರಂಭವಾಗಿಲ್ಲ. 

ಈ ಮೊದಲು ಪ್ರಾಧಿಕಾರದವತಿಯಿಂದಲೇ ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಚಿಂತನೆ ನಡೆಸಲಾಗಿತ್ತು. ಆದರೆ ಆರ್ಥಿಕ ಹೊರೆಯಿಂದ ಅನುಷ್ಠಾನಕ್ಕೆ ಹಿಂದೇಟ ಹಾಕಲಾಗಿತ್ತು. ಈ ನಡುವೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 206 ಹಾಗೂ 13 ಕ್ಕೆ ಬೈಪಾಸ್ ರೀತಿಯಲ್ಲಿ ಸುಮಾರು 13 ಕಿ.ಮೀ. ನಷ್ಟು ಹೊರವರ್ತುಲ ರಸ್ತೆ ಅಭಿವೃದ್ಧಿಪಡಿಸಲು ನಿರ್ಧರಿಸಿತ್ತು. 

ಉಳಿದ ಅರ್ಧ ಭಾಗದ ರಸ್ತೆ ನಿರ್ಮಾಣ ಕಾರ್ಯವನ್ನು ಪ್ರಾಧಿಕಾರದವತಿಯಿಂದ ಕೈಗೆತ್ತಿಕೊಳ್ಳುವ ಚಿಂತನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿಯೇ ಪ್ರಾಧಿಕಾರದ ಮೂಲಕ ರಸ್ತೆ ನಿರ್ಮಾಣ ಮಾಡಬೇಕಾದ ಸ್ಥಳದ ವಸ್ತುಸ್ಥಿತಿಯ ಅಧ್ಯಯನ ನಡೆಸಿ, ವರದಿ ನೀಡುವಂತೆ ಬೆಂಗಳೂರಿನ ಟೌನ್ ಪ್ಲ್ಯಾನಿಂಗ್ ವಿಭಾಗ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ. 

ಎಲ್ಲಿಯವರೆಗೆ: ಪ್ರಥಮ ಹಂತವಾಗಿ ಮಲ್ಲಿಗೇನಹಳ್ಳಿಯ ಸಾಗರ ರಸ್ತೆಯಿಂದ ಕೋಟೆಗಂಗೂರು, ಮೋಜಪ್ಪನ ಹೊಸೂರು, ಬಸವನಗಂಗೂರು ಮೂಲಕ ಸವಳಂಗ ರಸ್ತೆಯವರೆಗಿನ ಹೊರ ವರ್ತುಲ ರಸ್ತೆಯನ್ನು ಪ್ರಾಧಿಕಾರದ ಮೂಲಕ ಅಭಿವೃದ್ಧಿಪಡಿಸುವ ಚಿಂತನೆಯಿದೆ. ಈ ಪ್ರದೇಶದಲ್ಲಿ ಯೋಜನೆ ಅನುಷ್ಠಾನಕ್ಕೆ ಯಾವುದೇ ಅಡೆತಡೆಯಿಲ್ಲವಾಗಿದೆ. ರಸ್ತೆ ಹಾದು ಹೋಗುವ ಪ್ರದೇಶದ ಭೂ ಮಾಲಕರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಕ್ರಮಕೈಗೊಳ್ಳಲು ಪ್ರಾಧಿಕಾರ ನಿರ್ಧರಿಸಿದೆ. 


'ಪ್ರಾಧಿಕಾರದ ಮೂಲಕ ಹೊರ ವರ್ತುಲ ರಸ್ತೆ ಅಭಿವೃದ್ದಿ ನಡೆಸುವ ಬಗ್ಗೆ ಪ್ರಾಧಿಕಾರದ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುವುದು. ಸಾಧಕ-ಬಾಧಕಗಳ ಪರಿಶೀಲನೆ ನಡೆಸಲಾಗುವುದು. ತದನಂತರವಷ್ಟೆ ಈ ಕುರಿತಂತೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು.  

ಇಸ್ಮಾಯಿಲ್ ಖಾನ್‍, ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ 


'ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಭಿವೃದ್ದಿ ಪಡಿಸಲು ನಿರ್ಧರಿಸಿರುವ ರಸ್ತೆ ಹೊರತುಪಡಿಸಿ, ಉಳಿದ ಭಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಇರುವ ಅಡೆತಡೆಗಳೇನು ಎಂಬುವುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಹಾದು ಹೋಗುವ ಕೆಲ ಸ್ಥಳಗಳಿಗೆ ಖುದ್ದು ಭೇಟಿಯಿತ್ತು ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಲಾಗುತ್ತಿದೆ'.

ಮೂಕಪ್ಪ ಕರಭೀಮಣ್ಣವರ್ ,ಪ್ರಾಧಿಕಾರದ ಆಯುಕ್ತ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X