Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೇಶ್ಯಾವಾಟಿಕೆ ದಂಧೆಕೋರರ ಮೇಲೆ ದಾಳಿ:...

ವೇಶ್ಯಾವಾಟಿಕೆ ದಂಧೆಕೋರರ ಮೇಲೆ ದಾಳಿ: ಮಾಧ್ಯಮಗಳು ಸುಳ್ಳು ಸುದ್ದಿ ಪ್ರಸಾರ ಮಾಡಿದರೆ ಕ್ರಮ; ಕೆ. ಅಣ್ಣಾಮಲೈ

ವಾರ್ತಾಭಾರತಿವಾರ್ತಾಭಾರತಿ31 Aug 2017 5:27 PM IST
share
ವೇಶ್ಯಾವಾಟಿಕೆ ದಂಧೆಕೋರರ ಮೇಲೆ ದಾಳಿ: ಮಾಧ್ಯಮಗಳು ಸುಳ್ಳು ಸುದ್ದಿ ಪ್ರಸಾರ ಮಾಡಿದರೆ ಕ್ರಮ; ಕೆ. ಅಣ್ಣಾಮಲೈ

ಚಿಕ್ಕಮಗಳೂರು, ಆ.31: ವೆಶ್ಯಾವಾಟಿಕೆ ದಂದೆ ಕುರಿತು ಪಂಚರಾಗಿದ್ದ ಸ್ಥಳದಲ್ಲಿದ್ದವರ ವಿರುದ್ಧ ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಗಳು ಪ್ರಕರಣವಾಗುತ್ತಿವೆ. ಇದನ್ನು ತಕ್ಷಣ ನಿಲ್ಲಿಸದಿದ್ದರೆ ಕಾನೂನು ಕ್ರಮ ಜರಗಿಸಬೇಕಾಗುತ್ತದೆ ಎಂದು ಎಸ್ಪಿ ಕೆ.ಅಣ್ಣಾಮಲೈ ಪ್ರಕಟನೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಬಸವನಹಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಎರಡು ದಿನಗಳ ಹಿಂದೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದವರ ವಿರುದ್ಧ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಪ್ರಕರಣಗಳಿಗೆ ಸಂಬಂಧಿಸಿ ಕೆ. ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿಗಳು ಪ್ರಸಾರವಾಗುತ್ತಿದೆ.

ಪ್ರಕರಣಗಳಲ್ಲಿ ಪಂಚರಾದ ನಗರಸಭೆ ಮಾಜಿ ಸದಸ್ಯ ಎನ್.ಕೆ.ಮಧು, ಹಾಲಿ ನಗರಸಭೆ ಸದಸ್ಯರಾದ ಕೆ.ಬಾಲು ಮತ್ತು ಶ್ರೀಮತಿ ಸುರೇಖ ಸಂಪತ್ ರಾಜ್ ಬಗ್ಗೆ ತಪ್ಪು ಮಾಹಿತಿ ಬಿತ್ತರವಾಗುತ್ತಿದೆ.  ಈ ಪಂಚರುಗಳು ವೇಶ್ಯಾವಾಟಿಕೆ ವಿರುದ್ಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಪೊಲೀಸರ ಕೋರಿಕೆಯ ಮೇರೆಗೆ ಅವರುಗಳು ಪಂಚರಾಗಿ ತನಿಖೆಗಾಗಿ ಪೊಲೀಸರಿಗೆ ಸಹಕರಿಸಿದವರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಮಾಧ್ಯಮವು ಪ್ರಮುಖ ಪಾತ್ರ ವಹಿಸಿದ್ದು, ರಚನಾತ್ಮಕವಾಗಿ ಕಾರ್ಯನಿರ್ವಹಿಸಬೇಕಾಗಿದೆ. ಆದರೇ, ಹಾಲಿ ಮಾಧ್ಯಮವು ಸ್ಪರ್ಧಾತ್ಮಕತೆಯನ್ನು ಉಳಿಸಿಕೊಳ್ಳಲು ಬಹಳಷ್ಟು ಅಪೂರ್ಣ ಮಾಹಿತಿಗಳನ್ನು ಪ್ರಸಾರ ಮಾಡುತ್ತಿದೆ ಎನ್ನಬೇಕಾಗುತ್ತಿದೆ. ಇಲ್ಲಿನ ಅಪೂರ್ಣ ಮಾಹಿತಿಗಳನ್ನು ಸ್ಪಲ್ಪ ಸಮಯದ ನಂತರ ಸಾರ್ವಜನಿಕರು ನಿಜವೆಂದು ಗ್ರಹಿಸಿಕೊಳ್ಳುವಲ್ಲಿ ಯಾವುದೇ ಸಂಶಯವಿಲ್ಲ ಎಂದಿದ್ದಾರೆ.

ಪ್ರಜಾಪ್ರಭುತ್ವದ 4ನೇ ಆಧಾರ ಸ್ಥಂಭವಾಗಿರುವ ಮಾಧ್ಯಮ ವರ್ಗದವರನ್ನು ನಾನು ಬಹಳಷ್ಟು ಹತ್ತಿರ ಇಟ್ಟುಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಆದರೇ, ಈ ರೀತಿ ತಪ್ಪು ಮಾಹಿತಿಗಳನ್ನು ಪ್ರಸಾರ ಮಾಡಿದ್ದಲ್ಲಿ, ಮಾಧ್ಯಮಗಳಿಗೆ ಪ್ರಕರಣಗಳ ಮಾಹಿತಿಗಳನ್ನು ನೀಡುವುದು ನಿಷ್ಪ್ರಯೋಜಕವಾಗಿದೆ.

ಪೊಲೀಸ್ ಇಲಾಖೆಯು ಕರ್ನಾಟಕ ರಾಜ್ಯ ಸರ್ಕಾರ ಮತ್ತು ಸಾರ್ವಜನಿಕ ಹಿತಾಶಕ್ತಿ ಕಾಪಾಡಿಕೊಳ್ಳುವ ಮೂಲಕ ಕೆಲಸ ನಿರ್ವಹಿಸುತ್ತಿದೆ. ಮೇಲ್ಕಂಡ ಪ್ರಕರಣಗಳಲ್ಲಿ ಪೊಲೀಸರಿಗೆ ಪಂಚರನ್ನಾಗಿ ಸಹಕರಿಸಿದ್ದವರ ವಿರುದ್ಧ ಪ್ರಸಾರ ಮಾಡಲಾಗಿರುವ ಸುಳ್ಳು ಮಾಹಿತಿಯ ಬಗ್ಗೆ ಅಥವಾ ಇನ್ನಿತರೇ ಯಾವುದೇ ರೀತಿಯ ವಿಷಯಗಳಿಗೆ ಸಂಬಂಧಪಟ್ಟ ಸುದ್ಧಿಗಳಲ್ಲಿ ಯಾವುದೇ ರೀತಿಯ ಸ್ಪಷ್ಟೀಕರಣ ಇದ್ದಲ್ಲಿ, ಮಾಧ್ಯಮ ವರ್ಗದವರು ನನ್ನೊಂದಿಗೆ ನೇರವಾಗಿ ವಾಟ್ಸ್‍ಆಪ್ ಗ್ರೂಪ್ ಮೂಲಕ ಸ್ಪಷ್ಟೀಕರಿಸಿಕೊಳ್ಳಬಹುದಾಗಿತ್ತು ಎಂದು ಹೇಳಿದ್ದಾರೆ.

ಇನ್ನು ಮುಂದೆ ಇಂತಹ ರೀತಿಯಲ್ಲಿ ಸುಳ್ಳು ಮಾಹಿತಿಗಳನ್ನು ಯಾವುದೇ ರೀತಿಯ ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದಲ್ಲಿ, ಸಂಬಂಧಪಟ್ಟವರ ವಿರುದ್ಧ ಕಾನೂನಿನ ರೀತ್ಯಾ ಸೂಕ್ತ ಕ್ರಮವನ್ನು ಜರುಗಿಸಲಾಗುವುದು. ಮಾಧ್ಯಮ ವರ್ಗದವರೊಂದಿಗೆ ಅಂತರವನ್ನು ಇಟ್ಟುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X