Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಣ, ದಾಖಲೆಗಳೊಂದಿಗೆ ಗುರ್ಮೀತ್ ಕುಟುಂಬ...

ಹಣ, ದಾಖಲೆಗಳೊಂದಿಗೆ ಗುರ್ಮೀತ್ ಕುಟುಂಬ ತಪ್ಪಿಸಿಕೊಳ್ಳಲು ಸಹಕರಿಸಿದ ಹರ್ಯಾಣ ಸರಕಾರ: ಆರೋಪ

ವಾರ್ತಾಭಾರತಿವಾರ್ತಾಭಾರತಿ31 Aug 2017 9:28 PM IST
share
ಹಣ, ದಾಖಲೆಗಳೊಂದಿಗೆ ಗುರ್ಮೀತ್ ಕುಟುಂಬ ತಪ್ಪಿಸಿಕೊಳ್ಳಲು ಸಹಕರಿಸಿದ ಹರ್ಯಾಣ ಸರಕಾರ: ಆರೋಪ

ಚಂಡೀಗಡ, ಆ.31: ನಿಷೇಧಾಜ್ಞೆ ಉಲ್ಲಂಘಿಸಿ ಗುರ್ಮಿತ್ ಸಿಂಗ್ ಬೆಂಬಲಿಗರಿಗೆ ಪಂಚಕುಲದಲ್ಲಿ ಗುಂಪು ಸೇರಲು ಅವಕಾಶ ಮಾಡಿಕೊಟ್ಟಿರುವ ಆರೋಪ ಎದುರಿಸುತ್ತಿರುವ ಹರ್ಯಾಣದ ಬಿಜೆಪಿ ನೇತೃತ್ವದ ಸರಕಾರ ಇದೀಗ ಇನ್ನೊಂದು ಎಡವಟ್ಟು ಮಾಡಿಕೊಂಡಿದೆ. ಗುರ್ಮಿತ್ ಸಿಂಗ್ ಕುಟುಂಬ ಸದಸ್ಯರಿಗೆ ನಗದು, ದಾಖಲೆ ಪತ್ರದ ಸಹಿತ ಸಿರ್ಸಾ ಕೇಂದ್ರಕಚೇರಿ ತೊರೆಯಲು ಅವಕಾಶ ಮಾಡಿಕೊಟ್ಟಿರುವ ಆರೋಪ ಈಗ ಸರಕಾರದ ವಿರುದ್ಧ ಕೇಳಿಬರುತ್ತಿದೆ.

ತಾವು ಡೇರಾ ಸಚ್ಚಾ ಸೌದದ ಅನುಯಾಯಿಗಳನ್ನು ಸಿರ್ಸಾ ಮುಖ್ಯಕಚೇರಿಯಿಂದ ತೆರವುಗೊಳಿಸುತ್ತಿದ್ದೇವೆ ಎಂದು ಪೊಲೀಸರು ಹೇಳಿಕೊಂಡಿದ್ದರು. ಆದರೆ ಮೂಲಗಳ ಪ್ರಕಾರ, ಹಣ, ದಾಖಲೆಪತ್ರ ಹಾಗೂ ಅಕ್ರಮ ಶಸ್ತ್ರಾಸ್ತ ಸಹಿತ ಗುರ್ಮಿತ್ ಅನುಯಾಯಿಗಳು ಹಾಗೂ ಕುಟುಂಬ ಸದಸ್ಯರಿಗೆ ರಾಜಸ್ತಾನಕ್ಕೆ ತೆರಳಲು ಸರಕಾರ ಅವಕಾಶ ಮಾಡಿಕೊಟ್ಟಿದೆ. ಇವು ಗುರ್ಮಿತ್ ವಿರುದ್ಧದ ಆರೋಪಕ್ಕೆ ಪ್ರಬಲ ಸಾಕ್ಷ್ಯವಾಗುವ ಸಾಧ್ಯತೆಯಿತ್ತು. ಅಲ್ಲದೆ ಪಂಚಕುಲ ಹಾಗೂ ಸಿರ್ಸಾದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸುವ ಅವಕಾಶವನ್ನು ಸೇನೆಗೆ ನೀಡಲು ಸರಕಾರ ನಿರಾಕರಿಸಿತ್ತು. ಸೇನೆಯನ್ನು ನಿಯೋಜಿಸಲಾಗಿದ್ದರೆ ಗುರ್ಮಿತ್ ಕುಟುಂಬ ಸದಸ್ಯರಿಗೆ ದಾಖಲೆ ಪತ್ರ ಸಹಿತ ಇಲ್ಲಿಂದ ತೆರಳಲು ಆಗುತ್ತಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಸಿರ್ಸಾ ಕೇಂದ್ರಕಚೇರಿಯಲ್ಲಿ ಕೋಟಿಗಟ್ಟಲೆ ಹಣ:

  ಕೇಂದ್ರ ಕಚೇರಿಯೊಳಗಡೆ ಗುರ್ಮಿತ್ ಸಿಂಗ್ ಕೋಟಿಗಟ್ಟಲೆ ರೂಪಾಯಿಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದ. ಅಲ್ಲದೆ ನಿವೃತ್ತ ಸೇನಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಂದ ತರಬೇತಿ ಪಡೆದ ಖಾಸಗಿ ಸೈನಿಕರನ್ನು ಗುರ್ಮಿತ್ ಹೊಂದಿದ್ದು, ಇವರ ಬಳಕೆಗಾಗಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಕಚೇರಿಯೊಳಗೆ ಪೇರಿಸಿಡಲಾಗಿತ್ತು. ಆಗಸ್ಟ್ 25ರ ಮಧ್ಯರಾತ್ರಿ ಸಿರ್ಸಾ ಕಚೇರಿ ಸಮುಚ್ಚಯದಿಂದ ಹಲವಾರು ವಾಹನಗಳು ಸಂಶಯಾಸ್ಪದ ರೀತಿಯಲ್ಲಿ ಹೊರ ಸಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗುರ್ಮಿತ್‌ನ ಬಂಟರು ಈ ಶಸ್ತ್ರಾಸ್ತ್ರಗಳನ್ನು ಹೊರಗೆ ಸಾಗಿಸಿ ಬಚ್ಚಿಡಲು ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

 ಅಲ್ಲದೆ ಗುರ್ಮಿತ್ ಬೆಂಬಲಿಗರು ಪೊಲೀಸರ ಸಮ್ಮುಖದಲ್ಲೇ ಕೆಲವು ಮಹತ್ವದ ದಾಖಲೆಪತ್ರಗಳನ್ನು ನಾಶಪಡಿಸಲು ಯಶಸ್ವಿಯಾಗಿದ್ದಾರೆ. ಈ ಸಂದರ್ಭ ಪೊಲೀಸರು ಮೂಕಪ್ರೇಕ್ಷಕರಾಗಿದ್ದರು. ಅಲ್ಲದೆ ಗುರ್ಮಿತ್ ಜೈಲಿಗೆ ತೆರಳುತ್ತಿದ್ದಂತೆಯೇ ಆತ ಬಳಸುತ್ತಿದ್ದ ಐಷಾರಾಮಿ ವಾಹನವೊಂದಕ್ಕೆ ಆತನ ಬೆಂಬಲಿಗರೇ ಬೆಂಕಿ ಹಚ್ಚಿ ಸುಟ್ಟಿದ್ದು, ಈ ವಾಹನದ ಜೊತೆ ಹಲವು ಮಹತ್ವದ ಸಾಕ್ಷ್ಯಾಧಾರಗಳೂ ನಾಶವಾಗಿವೆ ಎನ್ನಲಾಗಿದೆ.

 ಗುರ್ಮೀತ್ ಬಂಧನವಾಗುತ್ತಿದ್ದಂತೆಯೇ ಶಸ್ತ್ರಾಸ್ತ್ರ ತುಂಬಿದ್ದ ಟ್ರಕ್ ಒಂದನ್ನು ರಾಜಸ್ತಾನಕ್ಕೆ ತೆರಳಲು ಅವಕಾಶ ನೀಡಲಾಗಿದೆ. ಈಗ ಗುರ್ಮೀತ್ ಕುಟುಂಬಸದಸ್ಯರು ರಾಜಸ್ತಾನದಲ್ಲಿ ತಮ್ಮ ಪಿತ್ರಾರ್ಜಿತ ಮನೆಯಲ್ಲಿ ನೆಲೆಸಿದ್ದಾರೆ. ರಹೀಮ್‌ನ ದತ್ತುಪುತ್ರಿ ಹನಿಪ್ರೀತ್ ತಲೆಮರೆಸಿಕೊಂಡಿದ್ದು ಆಕೆಯ ಪತ್ತೆಕಾರ್ಯಾಚರಣೆ ತೀವ್ರಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಆದರೆ ಈ ಆರೋಪವನ್ನು ಹರ್ಯಾಣ ಪೊಲೀಸ್ ಮುಖ್ಯಸ್ಥ ಬಿ.ಎಸ್.ಸಂಧು ನಿರಾಕರಿಸಿದ್ದಾರೆ. ಶಸ್ತ್ರಾಸ್ತ್ರ ಹೊಂದಿರುವ ಟ್ರಕ್ ರಾಜಸ್ತಾನದತ್ತ ತೆರಳಿದೆ ಎಂಬ ಆರೋಪದಲ್ಲಿ ಹುರುಳಿಲ್ಲ. ಏನಿದ್ದರೂ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

 ಈ ಮಧ್ಯೆ, ಜೈಲಿನಲ್ಲಿರುವ ಖೈದಿಗಳನ್ನು ಭೇಟಿಯಾಗಲು ಅಕಾರಾದಿ ಕ್ರಮದ ಅನುಸಾರ ವ್ಯವಸ್ಥೆ ಮಾಡಲಾಗುತ್ತದೆ. ಗುರ್ಮೀತ್ ನ ಹೆಸರಿನ ಮೊದಲಕ್ಷರ ಜಿ ಆಗಿರುವುದರಿಂದ ಆತನ ಕುಟುಂಬ ಸದಸ್ಯರು ಸೋಮವಾರ ಮತ್ತು ಗುರುವಾರ ಮಾತ್ರ ಭೇಟಿಯಾಗಲು ಅವಕಾಶವಿದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

 ಪದತ್ಯಾಗಕ್ಕೆ ಖಟ್ಟರ್ ನಿರಾಕರಣೆ:

ಪಕ್ಷದ ಸದಸ್ಯರ ಸಹಿತ ವಿವಿಧೆಡೆಗಳಿಂದ ಟೀಕಾಪ್ರಹಾರ ಎದುರಾಗಿದ್ದರೂ ಹರ್ಯಾಣ ಮುಖ್ಯಮಂತ್ರಿ ಮನೋಹರ್‌ಲಾಲ್ ಖಟ್ಟರ್ ಪದತ್ಯಾಗ ಮಾಡಲು ನಿರಾಕರಿಸಿದ್ದಾರೆ. ಅಲ್ಲದೆ ಬಿಜೆಪಿ ಹೈಕಮಾಂಡ್ ಕೂಡಾ ಖಟ್ಟರ್ ಪರ ನಿಂತಿದೆ ಎನ್ನಲಾಗುತ್ತಿದೆ. ಆದರೂ, ರಾಜ್ಯ ಸಚಿವ ಸಂಪುಟದ ಪುನರಚನೆಗೆ ಹೈಕಮಾಂಡ್ ಒಲವು ತೋರಿದೆ ಎನ್ನಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X