Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವ ಬಾಕ್ಸಿಂಗ್: ನೋವಿನ ನಡುವೆ ಪದಕದ...

ವಿಶ್ವ ಬಾಕ್ಸಿಂಗ್: ನೋವಿನ ನಡುವೆ ಪದಕದ ನಗೆ

ವಾರ್ತಾಭಾರತಿವಾರ್ತಾಭಾರತಿ1 Sept 2017 9:15 AM IST
share
ವಿಶ್ವ ಬಾಕ್ಸಿಂಗ್: ನೋವಿನ ನಡುವೆ ಪದಕದ ನಗೆ

ಹ್ಯಾಂಬರ್ಗ್, ಸೆ.1: ಭಾರತದ ಗುರುದೇವ್ ಬಿಧೂರಿ ಎಐಬಿಎ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಈ ಮೂಲಕ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ನಾಲ್ಕನೆ ಭಾರತೀಯ ಎಂಬ ಹೆಗ್ಗಳಿಕೆಗೆ ಬಿಧೂರಿ ಆಯ್ಕೆಯಾಗಿದ್ದಾರೆ.

ಗುರುವಾರ ರಾತ್ರಿ ನಡೆದ ಬ್ಯಾಟನ್‌ವೆಯ್ಟಾ ವರ್ಗದ (56 ಕೆಜಿ) ಸೆಮಿಫೈನಲ್ ಕದನದಲ್ಲಿ ಅಮೆರಿಕದ ಡ್ಯೂಕ್ ರೇಗನ್ ವಿರುದ್ಧ ಸೋಲು ಅನುಭವಿಸಿದರು. ಮೊಟ್ಟಮೊದಲ ಬಾರಿಗೆ ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದ ಬಿಧೂರಿ ಮೂಲತಃ ದಿಲ್ಲಿಯವರು. ಈ ಬಾರಿಯ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಗಳಿಸಿದ ಏಕೈಕ ಪದಕ ಇದಾಗಿದೆ.

ಕಳೆದ ಆರು ತಿಂಗಳಿನಿಂದ ಬೆನ್ನುನೋವು ಸಮಸ್ಯೆಯಿಂದ ಬಳಲುತ್ತಿದ್ದ ಬಿಧೂರಿ (24), ನೋವಿನ ನಡುವೆಯೂ ಪದಕದ ಸಾಧನೆ ಮಾಡಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಅವರ ಬೆನ್ನುನೋವು ಸಮಸ್ಯೆ ತೀವ್ರವಾಗಿತ್ತು.

"ಇತಿಹಾಸ ಸೃಷ್ಟಿಸುವುದು ನನ್ನ ಗುರಿಯಾಗಿತ್ತು. ನನ್ನ ತರಬೇತುದಾರರು ಹಾಗೂ ತಂಡದ ಇತರರು ಸಾಕಷ್ಟು ಸಹಾಯ ಮಾಡಿದರು. ನನ್ನ ನೋವಿನ ಕಥೆಯ ಅರಿವಿದ್ದ ಅವರು ಪ್ರತಿ ಹಂತದಲ್ಲಿ ನೆರವು ನೀಡಿದ್ದರು. ಈ ಪದಕ ತಂದೆಗೆ ಸಮರ್ಪಣೆ" ಎಂದು ಬಿಧೂರಿ ಭಾವುಕರಾಗಿ ನುಡಿದರು.

ಟ್ಯೂನೇಶಿಯಾದ ಬಿಲಾಲ್ ಹಮ್ಡಿ ಅವರನ್ನು ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಬಿಧೂರಿಗೆ ಮಂಗಳವಾರವೇ ಪದಕ ಖಚಿತವಾಗಿತ್ತು. 2011ರಲ್ಲಿ ವಿಕಾಸ್‌ಕೃಷ್ಣ ಪದಕ ಗೆದ್ದ ಬಳಿಕ ಆ ಸಾಧನೆ ಮಾಡಿದ ಮೊದಲ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ವಿಕಾಸ್ ಅವರನ್ನು ಹೊರತುಪಡಿಸಿ ವಿಜೇಂದ್ರ ಸಿಂಗ್ (2009) ಹಾಗೂ ಶಿವ ಥಾಪಾ (2015) ಅವರು ಭಾರತಕ್ಕೆ ಪದಕ ಗೆದ್ದುಕೊಟ್ಟಿದ್ದರು.

ಸೆಮಿಫೈನಲ್‌ನಲ್ಲಿ ರೇಗನ್‌ನ ಬ್ರೆಡ್ ಅಂಡ್ ಬಟರ್ ದಾಳಿಗೆ ತುತ್ತಾದ ಬಿಧೂರಿ, ಎದುರಾಳಿಯ ಮಿಂಚಿನ ಪಂಚ್‌ಗೆ ಮಣಿದರು. ಎರಡನೆ ಸುತ್ತಿನ ವೇಳೆಗೆ ಆಟದ ಲಯ ಕಂಡುಕೊಂಡ ಅಮೆರಿಕನ್ ಬಾಕ್ಸರ್ ಎದುರು ಭಾರತೀಯ ಬಾಕ್ಸರ್ ಪ್ರತಿರೋಧ ತೋರಿದರೂ, ಉದಯೋನ್ಮುಖ ಪಟುವಿನ ತಾಂತ್ರಿಕ ಕೌಶಲಕ್ಕೆ ಮಣಿಯಬೇಕಾಯಿತು. ಅಂತಿಮವಾಗಿ ಎಲ್ಲ ಐದು ಮಂದಿ ತೀರ್ಪುಗಾರರು ಕೂಡಾ ರೇಗನ್ ಪರವಾಗಿ 30-27 ಅಂಕಗಳ ತೀರ್ಪು ಪ್ರಕಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X