Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟ್ವಿಟರ್ ನಲ್ಲಿ ಬಿಜೆಪಿಯನ್ನು ಕುಟುಕಲು...

ಟ್ವಿಟರ್ ನಲ್ಲಿ ಬಿಜೆಪಿಯನ್ನು ಕುಟುಕಲು ಕೊನೆಗೂ ಕಲಿತ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ1 Sept 2017 1:41 PM IST
share
ಟ್ವಿಟರ್ ನಲ್ಲಿ ಬಿಜೆಪಿಯನ್ನು ಕುಟುಕಲು ಕೊನೆಗೂ ಕಲಿತ ಕಾಂಗ್ರೆಸ್

ಹೊಸದಿಲ್ಲಿ, ಸೆ.1: ಸಾಮಾಜಿಕ ಜಾಲತಾಣಗಳನ್ನು ತನ್ನ ಲಾಭಕ್ಕಾಗಿ ಹೇಗೆ ಉಪಯೋಗಿಸಬಹುದೆಂಬುದನ್ನು ಕಾಂಗ್ರೆಸ್ ಪಕ್ಷ ತಡವಾಗಿಯಾದರೂ ತನ್ನ ವೈರಿ ಪಕ್ಷ ಬಿಜೆಪಿಯಿಂದ ಕಲಿತುಕೊಂಡಿದೆಯೆಂಬುದು ಅದರ ಇತ್ತೀಚಿಗಿನ ಟ್ವಿಟ್ಟರ್ ಕ್ವಿರ್ ಒಂದರಿಂದ ಸಾಬೀತಾಗಿದೆ.

ಬಿಜೆಪಿಯ ಐಡಿಯಾದ ಪಡಿಯಚ್ಚೆಂಬಂತೆ ಕಾಂಗ್ರೆಸ್ ಪಕ್ಷ ನಿಯಮಿತವಾಗಿ ನಡೆಸಲಾರಂಭಿಸಿದ ಟ್ವಿಟ್ಟರ್ ಕ್ವಿರ್ ನ ಲೇಟೆಸ್ಟ್ ಪ್ರಶ್ನೆ ಇಂತಿದೆ.

‘‘ದೇಶದ ಆರ್ಥಿಕತೆಗೆ ಕೋಟಿಗಟ್ಟಲೆ ನಷ್ಟವುಂಟು ಮಾಡಿದ ನೋಟು ಅಮಾನ್ಯೀಕರಣವನ್ನು 2016ರಲ್ಲಿ ಜಾರಿಗೆ ತಂದ ಪ್ರಧಾನಿ ಯಾರು?.’’ ಕಳೆದ ವರ್ಷ ಅಮಾನ್ಯೀಕರಣಗೊಂಡ ನೋಟುಗಳಲ್ಲಿ ಶೇ.99ರಷ್ಟು ಬ್ಯಾಂಕುಗಳಲ್ಲಿ ಠೇವಣಿಯಿರಿಸಲಾಗಿದೆ ಎಂದು ಆರ್ ಬಿ ಐ ಹೇಳಿದ್ದಕ್ಕೆ ಪ್ರತಿಯಾಗಿ ಮೇಲಿನ ಪ್ರಶ್ನೆಯನ್ನು ಕ್ವಿರ್ ಭಾಗವಾಗಿ ಪಕ್ಷ ಕೇಳಿದೆ. ನೋಟು ಅಮಾನ್ಯೀಕರಣ ಒಂದು ವಿಫಲ ಕ್ರಮವೆಂದು ಆರ್ ಬಿ ಐ ಹೇಳಿಕೆಯಿಂದ ಸ್ಪಷ್ಟ ಎಂದು ಕಾಂಗ್ರೆಸ್ ಹಾಗೂ ಇತರ ವಿಪಕ್ಷಗಳು ಹೇಳಿಕೊಂಡಿವೆ.

ಅಮಾನ್ಯೀಕರಣ ಒಂದು ಬೃಹತ್ ವೈಫಲ್ಯವೆಂಬುದನ್ನು ಒಪ್ಪಿಕೊಳ್ಳಿ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಟ್ವೀಟ್ ಮುಖಾಂತರ ಪ್ರಧಾನಿ ಮೋದಿಯನ್ನು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಾದಂತಹ ಟ್ವಿಟ್ಟರನ್ನು ಹೇಗೆ ಇತ್ತೀಚಿಗಿನ ದಿನಗಳಲ್ಲಿ ಸಮರ್ಪಕವಾಗಿ ಉಪಯೋಗಿಸುತ್ತಿದೆ ಎಂಬುದಕ್ಕೆ ಕಳೆದ ತಿಂಗಳು ಅದು ಕ್ವಿಟ್ ಇಂಡಿಯಾ ಚಳುವಳಿಯ 75ನೆ ವಾರ್ಷಿಕೋತ್ಸವದ ಸಂದರ್ಭ ಟ್ವಿಟ್ಟರ್ ಕ್ವಿರ್ ಅಂಗವಾಗಿ ಕೇಳಿದ ಇನ್ನೊಂದು ಪ್ರಶ್ನೆ ಸ್ವಾರಸ್ಯಕರವಾಗಿತ್ತು.

‘‘ಕ್ವಿಟ್ ಇಂಡಿಯಾ ಚಳುವಳಿಯನ್ನು ಬಹಿಷ್ಕರಿಸುವಂತೆ ಸದಸ್ಯರಿಗೆ ಕರೆ ನೀಡಿ ಸ್ಟಿಕ್ ಟು ಯುವರ್ ಪೋಸ್ಟ್ಸ್ ಎಂಬ ಶೀರ್ಷಿಕೆಯ ಪತ್ರವನ್ನು ಬರೆದ ಹಿಂದೂ ಮಹಾಸಭಾ ನಾಯಕ ಯಾರು?’’ ಎಂಬುದೇ ಆ ಪ್ರಶ್ನೆ ಆಗಿತ್ತು. ಇದಕ್ಕೆ ಉತ್ತರ ನೀಡಲು ನಾಲ್ಕು ಆಯ್ಕೆಗಳನ್ನು ನೀಡಲಾಗಿತ್ತು- ವಿ ಡಿ ಸಾರ್ವಕರ್, ಕೆ ಬಿ ಹೆಡ್ಗೆವಾರ್, ಎಂ ಎಸ್ ಗೋಲ್ವಾಲ್ಕರ್, ಶ್ಯಾಮ ಪ್ರಸಾದ್ ಮುಖರ್ಜಿ. ಈ ಪ್ರಶ್ನೆಗೆ ಉತ್ತರ ಸಾರ್ವಕರ್ ಆಗಿತ್ತು. ಸಾರ್ವಕರ್ ಅವರು ಪ್ರಧಾನಿ ಮೋದಿ ಹಾಗೂ ಬಿಜೆಪಿಯ ನೆಚ್ಚಿನ ನಾಯಕರಾಗಿದ್ದರೂ, ಕ್ವಿಟ್ ಇಂಡಿಯಾ ಚಳುವಳಿಯನ್ನು ಬಹಿಷ್ಕರಿಸಿದವರು. ವಿವಿಧ ಸರಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಸಭಾದ ಸದಸ್ಯರಿಗೆ ಸ್ಟಿಕ್ ಟು ಯುವರ್ ಪೋಸ್ಟ್ಸ್ ಎಂಬ ಶೀರ್ಷಿಕೆಯಡಿ ಪತ್ರ ಬರೆದು ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸದಂತೆ ಹಾಗೂ ತಮ್ಮ ಹುದ್ದೆಯಲ್ಲಿ ಮುಂದುವರಿಯುವಂತೆ ಸಲಹೆಯನ್ನು ಅವರು ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X