Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ವಿವಿಧಡೆ ಈದುಲ್ ಅಝ್ ಹಾ ಆಚರಣೆ

ಭಟ್ಕಳ: ವಿವಿಧಡೆ ಈದುಲ್ ಅಝ್ ಹಾ ಆಚರಣೆ

ವಾರ್ತಾಭಾರತಿವಾರ್ತಾಭಾರತಿ1 Sept 2017 10:36 PM IST
share
ಭಟ್ಕಳ: ವಿವಿಧಡೆ ಈದುಲ್ ಅಝ್ ಹಾ ಆಚರಣೆ

ಭಟ್ಕಳ, ಸೆ.1: ಜಗತ್ತಿನ ಮನುಷ್ಯ ವರ್ಗದ ನಾಯಕರಾಗಿ ನೇಮಿಸಲಸ್ಪಟ್ಟ ಪ್ರವಾದಿ ಇಬ್ರಾಹೀಂರವರನ್ನುಅನುಸರಿಸುತ್ತ, ತಮ್ಮ ಜೀವನದಲ್ಲಿ ತ್ಯಾಗ ಮತ್ತು ಬಲಿದಾನಗಳಿಗೆ ಸಿದ್ಧರಾಗುವಂತೆ ಜಾಮಿಯಾ ಮಸೀದಿ ಚಿನ್ನದಪಳ್ಳಿಯ ಇಮಾಮ್‍ ಖತೀಬ್ ಮೌಲಾನ ಅಬ್ದುಲ್‍ ಅಲೀಮ್‍ ಕತೀಬ್ ನದ್ವಿ ಮುಸ್ಲಿಮ್ ಸಮುದಾಯಕ್ಕೆ ಕರೆ ನೀಡಿದರು. 

ಅವರು  ಶುಕ್ರವಾರ ನಡೆದ ಈದುಲ್‍ ಅಝ್ ಹಾ ಪ್ರಾರ್ಥನೆಯನ್ನು ಜಾಮಿಯಾ ಮಸೀದಿಯಲ್ಲಿ  ನೆರವೇರಿಸಿ ಈದ್ ಸಂದೇಶ ನೀಡಿ ಮಾತನಾಡಿದರು.

ಕುರ್ಬಾನಿ (ಬಲಿದಾನ)ಎನ್ನುವುದು ಕೇವಲ ಪ್ರಾಣಿಬಲಿಯಾಗದೆ ಅದರ ಹಿಂದಿರುವ ಮಹಾನ್‍ ಉದ್ದೇಶವನ್ನು ಅರಿಯಬೇಕಾಗಿದೆ ಎಂದ ಅವರು, ವ್ಯಕ್ತಿಯ ಬಲಿದಾನವು ಒಂದು ಸಮುದಾಯ ಹಾಗೂ ಸಮಾಜವನ್ನು ಜೀವಂತವಾಗಿಡುತ್ತದೆ. ಕುರ್ಬಾನಿ ಎನ್ನುವುದು ಇಸ್ಲಾಮ್ ನ ಚಿನ್ನೆಗಳಲ್ಲೊಂದಾಗಿದ್ದು, ಅದು ನಮ್ಮ ಮೇಲೆ ಕಡ್ಡಾಯವಾಗಿದೆ. ಅಲ್ಲಾಹನ ಆದೇಶದ ಮೇರೆಗೆ ಪ್ರವಾದಿ ಇಬ್ರಾಹೀಮರು ತಮ್ಮ ಪ್ರೀತಿಯ ಪುತ್ರನನ್ನೇ ಬಲಿ ನೀಡಲು ಮುಂದಾದರು. ಇದು ಕೇವಲ ಸಂಕೇತ ಮಾತ್ರ. ಇಂದು ಮುಸ್ಲಿಮ್ ಸಮುದಾಯವು ಕೂಡ ಯಾವುದೇ ರೀತಿಯ ತ್ಯಾಗ ಬಲಿದಾನಗಳಿಗೆ ಸನ್ನದ್ಧರಾಗಿರಬೇಕೆಂಬುದು ಇದರ ಅಂತರಾಳವಾಗಿದೆ ಎಂದು ವಿವರಿಸಿದರು.

ವಿವಿಧಡೆ ಈದುಲ್‍ ಅಝ್ ಹಾ ಪ್ರಾರ್ಥನೆ: ಖಲಿಫಾ ಜಾಮಿಯಾ ಮಸೀದಿಯಲ್ಲಿ ಮೌಲಾನ ಕ್ವಾಜಾ ಮುಹಿದ್ದೀನ್‍ ಅಕ್ರಮಿ ಮದನಿ ನದ್ವಿ, ಮಗ್ದೂಮ್ ಕಾಲೋನಿ ಜಾಮಿಯ ಮಸೀದಿಯಲ್ಲಿ ಮೌಲಾನ ನೇಮತುಲ್ಲಾ ಅಸ್ಕರಿ ನದ್ವಿ, ನವಯಾತ್ ಕಾಲೋನಿ ತಂಝೀಮ್‍ ಜಾಮಿಯಾ ಮಸೀದಿಯಲ್ಲಿ ಮೌಲಾನ ಮುಹಮ್ಮದ್‍ ಅನ್ಸಾರ್‍ ಖತೀಬ್ ನದ್ವಿ, ಮುಗಳೀಹೊಂಡ ಜಾಮಿಯಾ ಮಸೀದಿಯಲ್ಲಿ ಮೌಲಾನ ಮುನವ್ವರ್ ಪೇಶ್ಮಾಮ್ ನದ್ವಿ, ಮದೀನಾ ಜಾಮಿಯಾ ಮಸೀದಿಯಲ್ಲಿ ಮೌಲಾನ ಝಕರಿಯಾ ಬರ್ಮಾವರ್ ನದ್ವಿ, ನೂರ್‍ ಜಾಮಿಯಾ ಮಸೀದಿಯಲ್ಲಿ ಮೌಲಾನ ತಾರಿಖ್‍ ಅಕ್ರಮಿ ನದ್ವಿ, ಗುಳ್ಮಿ ಜಾಮಿಯಾ ಮಸೀದಿಯಲ್ಲಿ ಮೌಲಾನ ಅಬ್ದುಲ್‍ ಆಹದ್ ಫರ್ಕದೆ ನದ್ವಿ, ಹಂಜಾ ಜಾಮಿಯಾ ಮಸೀದಿಯಲ್ಲಿ ಮೌಲಾನ ಇಕ್ಬಾಲ್ ನಾಯ್ತೆ ನದ್ವಿ, ಅಹ್ಮದ್ ಸಯೀದ್ ಹುರುಳಿ ಸಾಲ್ ಜಾಮಿಯಾ ಮಸೀದಿಯಲ್ಲಿ ಮೌಲಾನಜಾಫರ್ ಫಕ್ಕಿಭಾವ್ ನದ್ವಿ, ಇಮಾಮ್ ಬುಖಾರಿಜಾಮಿಯಾ ಮಸೀದಿಯಲ್ಲಿ ಶೇಖ್ ಫಝ್ಲುರ್ರಹ್ಮಾನ್ ಸಲಫಿ, ತೆಂಗಿನ ಗುಂಡಿ ಜಾಮಿಯಾ ಮಸೀದಿಯಲ್ಲಿ ಮೌಲಾನ ಇಸ್ಮಾಯೀಲ್‍ ಡಾಂಗಿ ನದ್ವಿ ಹಾಗೂ ಇಸ್ಮಾಯೀಲ್‍ ಜಾಮಿಯಾ ಮಸೀದಿ ರೇಲ್ವೆ ಸ್ಟೇಷನ್‍ ರಸ್ತೆಯಲ್ಲಿ ಮೌಲಾನ  ಮಹೆರಾಜ್‍ ಈದ್ ನಮಾಝ್ ನಿರ್ವಹಿಸಿ ಹಬ್ಬದ ಮಹತ್ವ, ಮುಸ್ಲಿಮ್ ಸಮುದಾಯದ ಹೊಣೆಗಾರಿಕೆ ಕುರಿತು ಪ್ರವಚನ ನೀಡಿ ದೇಶದ ಒಳಿತಿಗಾಗಿ ಪ್ರಾರ್ಥಿಸಿದರು.

ಹಬ್ಬದ ನಮಾಝ್ ನಂತರ ಮುಸ್ಲಿಮರು ಪರಸ್ಪರ ಈದ್ ಶುಭಾ ಕೋರಿ ಸಂಭ್ರಮಿಸಿದ್ದು, ಶುಕ್ರವಾರದಿಂದ ಮೂರು ದಿನಗಳ ಕಾಲ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುವುದು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X