Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರಿ ಶಾಲೆಗಳಿಗೆ ಶಕ್ತಿ ತುಂಬಲು...

ಸರಕಾರಿ ಶಾಲೆಗಳಿಗೆ ಶಕ್ತಿ ತುಂಬಲು ಕಂಪೆನಿಗಳು ಕೈಜೋಡಿಸಬೇಕು: ಉಷಾಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ1 Sept 2017 11:32 PM IST
share
ಸರಕಾರಿ ಶಾಲೆಗಳಿಗೆ ಶಕ್ತಿ ತುಂಬಲು ಕಂಪೆನಿಗಳು ಕೈಜೋಡಿಸಬೇಕು: ಉಷಾಶೆಟ್ಟಿ

ಶಿಡ್ಲಘಟ್ಟ, ಸೆ.1: ಸರ್ಕಾರಿ ಶಾಲೆಗಳಿಗೆ ಹೊಸ ರೂಪ ಮತ್ತು ಶಕ್ತಿ ತುಂಬುವ ನಿಟ್ಟಿನಲ್ಲಿ ನಗರದ ಕಂಪೆನಿಗಳ ಉದ್ಯೋಗಿಗಳನ್ನು ಗ್ರಾಮಗಳಿಗೆ ಕರೆತಂದು ಸರ್ಕಾರಿ ಶಾಲೆಯೊಂದಿಗೆ ಕೈ ಜೋಡಿಸಬೇಕು. ಇಂತಹ ಕೆಲಸವನ್ನು ಗ್ರಾಮಾಂತರ ಟ್ರಸ್ಟ್ ಮೂಲಕ ಮಾಡುತ್ತಿದ್ದೇವೆ ಎಂದು ಸ್ವಯಂಸೇವಕಿ ಉಷಾಶೆಟ್ಟಿ ತಿಳಿಸಿದರು.

ತಾಲೂಕಿನ ಮುತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಿಟ್ರಿಕ್ಸ್ ಆರ್ ಆ್ಯಂಡ್  ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಉದ್ಯೋಗಿಗಳಿಂದ ವರ್ಲಿ ಚಿತ್ರಗಳನ್ನು ರಚಿಸುವ ಕೆಲಸಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಲೂಕಿನ ಮಳ್ಳೂರು ಮತ್ತು ಮುತ್ತೂರು ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಲಿಕಲಿ ಕೋಣೆ, ಶಾಲೆಯ ಗೋಡೆ ಹಾಗೂ ಕಾಂಪೋಂಡ್ ಗೋಡೆಗಳಿಗೆ ವರ್ಲಿ ಚಿತ್ರಗಳನ್ನು ಸಿಟ್ರಿಕ್ಸ್ ಆರ್ ಆ್ಯಂಡ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಉದ್ಯೋಗಿಗಳು ರಚಿಸುತ್ತಿದ್ದಾರೆ. ಕಂಪೆನಿಯ 50 ಮಂದಿ ಸ್ವಯಂ ಸೇವಕರು ಆಗಮಿಸಿದ್ದು ಅವರಲ್ಲಿ ಎರಡು ತಂಡಗಳು ಎರಡು ಶಾಲೆಗಳಲ್ಲಿ ಚಿತ್ರ ರಚಿಸುತ್ತಿದ್ದಾರೆ. ಮೂರನೇ ತಂಡದ ಎಂಟು ಮಂದಿ ತಾಲ್ಲೂಕಿನ ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಕೌಶಲ್ಯ ಹಾಗೂ ಮುಂದಿನ ಭವಿಷ್ಯದ ವಿದ್ಯೆಯ ಅವಕಾಶಗಳ ಕುರಿತಂತೆ ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದು ಹೇಳಿದರು.

ಚಿತ್ರ ರಚನೆಗೆ ಅಗತ್ಯವಿರುವ ಪೇಂಟ್, ಬ್ರಷ್ ಮುಂತಾದವುಗಳನ್ನು ಕಂಪೆನಿಯೇ ಭರಿಸಿದೆ. ಅವರಿಗೆ ಮಾರ್ಗದರ್ಶಕರಾಗಿ ಸ್ಥಳೀಯ ಗಿಡ್ನಹಳ್ಳಿ ಮತ್ತು ಹಳೇಪೆರೇಸಂದ್ರ ಸರ್ಕಾರಿ ಶಾಲೆಗಳ ಕಲಾ ಶಿಕ್ಷಕರಾದ ಎಂ.ನಾಗರಾಜ್ ಮತ್ತು ಅರುಣ್ ಇದ್ದಾರೆ. ಬೆಂಗಳೂರಿನಿಂದ ಕಲಾವಿದೆ ಮೀರಾ ಅರುಣ್ ಸಹ ಜೊತೆಗೂಡಿದ್ದಾರೆ. ಒಟ್ಟಾರೆ ಗ್ರಾಮೀಣ ಭಾಗದ ಸರ್ಕಾರಿ ಶಾಲೆಯನ್ನು ಚಂದಗೊಳಿಸುವುದು ನಮ್ಮ ಉದ್ದೇಶ ಎಂದು ತಿಳಿಸಿದರು.

ಮುತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ದಾವುದ್ ಪಾಷ ಮಾತನಾಡಿ, ಈ ಹಿಂದೆಯೂ ನಮ್ಮ ಶಾಲೆಗೆ ಸಿಟ್ರಿಕ್ಸ್ ಕಂಪೆನಿಯವರು ಅಡುಗೆಗೆ ಸಂಬಂಧಿಸಿದ ಪರಿಕರಗಳು, ಮಕ್ಕಳಿಗೆ ಉಪಯುಕ್ತ ವಸ್ತುಗಳನ್ನು ನೀಡಿದ್ದರು. ಈ ದಿನ ವರ್ಲಿ ಕಲೆಯಿಂದ ನಮ್ಮ ಶಾಲೆಯ ಗೋಡೆಗಳನ್ನು ಅಲಂಕರಿಸುತ್ತಿದ್ದಾರೆ. ಗಣಿತದ ಆಕೃತಿಗಳಾದ ತ್ರಿಭುಜ, ವೃತ್ತ, ಷಟ್ಭುಜ, ಚೌಕಗಳನ್ನು ಬಳಸಿ ರಚಿಸುವ ವರ್ಲಿ ಕಲೆಯ ಮೂಲಕ ಸಾಮಾಜಿಕ ಸಂದೇಶ, ಪರಿಸರ ಕಾಳಜಿ, ಗ್ರಾಮ ನೈರ್ವಲ್ಯ, ಜಾನಪದ ಸೊಗಡನ್ನು ಪ್ರದರ್ಶಿಸುತ್ತಿರುವುದು ಮಕ್ಕಳಿಗೆ ಹಾಗೂ ಶಾಲೆಗೆ ಬರುವವರಿಗೆಲ್ಲ ಅನುಕೂಲಕರ ಎಂದು ನುಡಿದರು.

ಗ್ರಾಮದ ಮುಖಂಡ ಕೆಂಪೇಗೌಡ, ಕಲಾ ಶಿಕ್ಷಕರಾದ ಎಂ.ನಾಗರಾಜ್ ಮತ್ತು ಅರುಣ್,  ಸಿಟ್ರಿಕ್ಸ್ ಕಂಪೆನಿಯ ಆಯುಷ್ ಅಗರ್ ವಾಲ್, ಅಭಿಜಿತ್ ಸತ್ಯನಾರಾಯಣ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X