Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.7ರ ಬಿಜೆಪಿ ಯುವ ಮೋರ್ಚಾ ರ್ಯಾಲಿ...

ಸೆ.7ರ ಬಿಜೆಪಿ ಯುವ ಮೋರ್ಚಾ ರ್ಯಾಲಿ ನಿಷೇಧಿಸಲು ಎಸ್‌ಡಿಪಿಐ ಆಗ್ರಹ

ಸಂಸದ ಪ್ರತಾಪ ಸಿಂಹ ವಿರುದ್ಧ ಕ್ರಮಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ2 Sept 2017 5:16 PM IST
share
ಸೆ.7ರ ಬಿಜೆಪಿ ಯುವ ಮೋರ್ಚಾ ರ್ಯಾಲಿ ನಿಷೇಧಿಸಲು ಎಸ್‌ಡಿಪಿಐ ಆಗ್ರಹ

ಮಂಗಳೂರು, ಸೆ.2: ಬಿಜೆಪಿ ಯುವ ಮೋರ್ಚಾ ಸೆ. 7ರಂದು ಮಂಗಳೂರಿನಲ್ಲಿ ಹಮ್ಮಿಕೊಂಡಿರುವ ರ್ಯಾಲಿಯನ್ನು ನಿಷೇಧಿಸಬೇಕು ಎಂದು ಎಸ್‌ಡಿಪಿಐ ದ.ಕ.ಜಿಲ್ಲಾ ಸಮಿತಿ ಆಗ್ರಹಿಸಿದೆ.

ಪಕ್ಷದ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೊಡಾಜೆ ಶನಿವಾರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈಗಾಗಲೆ ಕಲ್ಲಡ್ಕ ಪ್ರಕರಣದ ನಂತರ ಜಿಲ್ಲೆಯ ವಿವಿಧೆಡೆ 50ಕ್ಕೂ ಅಧಿಕ ದಿನಗಳ ಕಾಲ ನಿಷೇಧಾಜ್ಞೆ ಜಾರಿ, ಅಹಿತಕರ ಘಟನೆಯಿಂದ ಜನತೆ ತತ್ತರಿಸಿದ್ದಾರೆ. ಈ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈರನ್ನು ಸಂಪುಟದಿಂದ ಕೈ ಬಿಡಬೇಕು ಮತ್ತು ಎಸ್‌ಡಿಪಿಐ ಪಕ್ಷ ಹಾಗು ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಮಂಗಳೂರಿನಲ್ಲಿ ರ್ಯಾಲಿ ನಡೆಸುವುದರಲ್ಲಿ ಅರ್ಥವಿಲ್ಲ. ಸಚಿವರ ರಾಜೀನಾಮೆ ಕೇಳಲು ವಿಧಾನ ಸೌಧದ ಮುಂದೆ ಪ್ರತಿಭಟನೆ ಮಾಡಬಹುದಿತ್ತು.

ಪಿಎಫ್‌ಐ ರಾಷ್ಟ್ರೀಯ ಸಂಘಟನೆಯಾಗಿದೆ. ಎಸ್‌ಡಿಪಿಐ ರಾಷ್ಟ್ರಮಟ್ಟದ ಪಕ್ಷವಾಗಿದೆ. ಈ ಪಕ್ಷ ಮತ್ತು ಸಂಘಟನೆಯನ್ನು ನಿಷೇಧಿಸಲು ಆಗ್ರಹಿಸಿ ಕೇಂದ್ರದ ಮೂಲಕ ಒತ್ತಡ ಹಾಕಬಹುದಿತ್ತು. ಆದರೆ ಇದೆಲ್ಲಾ ನೆಪಮಾತ್ರ. ರಾಜಕೀಯ ಲಾಭಕ್ಕೋಸ್ಕರ ಮಂಗಳೂರಿನಲ್ಲಿ ರ್ಯಾಲಿ ನಡೆಸಿ ಮತ್ತೆ ಜನತೆಯಲ್ಲಿ ಭಯಭೀತಿ ಹುಟ್ಟಿಸಲು ಬಿಜೆಪಿ ಮುಂದಾಗಿದೆ. ಇದಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಬಾರದು ಎಂದರು.

ಜಿಲ್ಲೆಯಲ್ಲಿ ನಡೆಯುವ ಬೈಕ್ ರ್ಯಾಲಿಗೆ ಬೆಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ, ಚಿಕ್ಕಮಗಳೂರಿನ ಜನರು ಮಂಗಳೂರಿಗೆ ಆಗಮಿಸಲಿದ್ದಾರೆ. ಜಿಲ್ಲೆಯಲ್ಲಿ ಶಾಂತಿಯುತ ವಾತಾವರಣವಿದ್ದು, ಈ ರ್ಯಾಲಿಯ ಮೂಲಕ ಮತ್ತೆ ಅಶಾಂತಿ ಸೃಷ್ಟಿಯಾಗುವ ಅಪಾಯವಿದೆ. ಹಾಗಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಈ ರ್ಯಾಲಿಯನ್ನು ನಿಷೇಧಿಸಬೇಕು ಎಂದು ಹನೀಫ್ ಖಾನ್ ಕೊಡಾಜೆ ಒತ್ತಾಯಿಸಿದರು.

ನೈತಿಕತೆ ಇಲ್ಲ: ಕರಾವಳಿಯಲ್ಲಿ ಬಿಜೆಪಿ ಮತ್ತು ಸಂಘಪರಿವಾರವು 23 ಮುಸಲ್ಮಾನರನ್ನು ಮಾತ್ರವಲ್ಲ, 13 ಅಮಾಯಕ ಹಿಂದೂಗಳನ್ನು ಕೂಡ ಹತ್ಯೆ ಮಾಡಿದೆ. ಹಾಗಾಗಿ ಬಿಜೆಪಿ, ಸಂಘಪರಿವಾರಕ್ಕೆ ಬೈಕ್ ರ್ಯಾಲಿ ಅಥವಾ ಮಂಗಳೂರು ಚಲೋ ನಡೆಸಲು ನೈತಿಕ ಹಕ್ಕಿಲ್ಲ. ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಸಂಸದ ಪ್ರತಾಪ ಸಿಂಹ ಸುಳ್ಳು ಹೇಳಿಕೆಗಳನ್ನು ನೀಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಹಾಗಾಗಿ ಪೊಲೀಸ್ ಇಲಾಖೆ ತಕ್ಷಣ ಅವರನ್ನು ಬಂಧಿಸಿ ಕಾನೂನು ಕ್ರಮ ಜರಗಿಸಬೇಕು ಎಂದು ಹನೀಫ್ ಖಾನ್ ಕೊಡಾಜೆ ಆಗ್ರಹಿಸಿದರು.

ಸೌಹಾರ್ದ ನಡಿಗೆ ಕೂಡ ರಾಜಕೀಯ ಗಿಮಿಕ್:ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಜಿಲ್ಲೆಯಲ್ಲಿ ನಡೆಸುವ ‘ಶಾಂತಿಗಾಗಿ -ಸೌಹಾರ್ದ ನಡಿಗೆ’ ಕೂಡ ಒಂದು ರಾಜಕೀಯ ಗಿಮಿಕ್. ಅವರು ಶಾಂತಿಯನ್ನೇ ಬಯಸುವುದಾದರೆ ಎಲ್ಲ ರಾಜಕೀಯ ಪಕ್ಷ, ಸಂಘಟನೆಯನ್ನೂ ಆಹ್ವಾನಿಸಲಿ. ಅದು ಬಿಟ್ಟು ನಡೆಸುವ ನಡಿಗೆಯು ಚುನಾವಣಾ ರಾಜಕೀಯ ಕಾರ್ಯಕ್ರಮವಾಗಿದೆ ಎಂದು ಹನೀಫ್ ಖಾನ್ ಕೊಡಾಜೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಂ. ಅಥಾವುಲ್ಲಾ, ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಕೋಶಾಧಿಕಾರಿ ಇಕ್ಬಾಲ್ ಗೂಡಿನಬಳಿ, ಸದಸ್ಯ ಶಾಹುಲ್ ಹಮೀದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X