Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು : ಧಾರಾಕಾರ ಮಳೆಗೆ ಜನತತ್ತರ

ಬೆಂಗಳೂರು : ಧಾರಾಕಾರ ಮಳೆಗೆ ಜನತತ್ತರ

ವಾರ್ತಾಭಾರತಿವಾರ್ತಾಭಾರತಿ2 Sept 2017 6:29 PM IST
share
ಬೆಂಗಳೂರು : ಧಾರಾಕಾರ ಮಳೆಗೆ ಜನತತ್ತರ

ಬೆಂಗಳೂರು, ಸೆ. 2: ಕಳೆದ ಎರಡು ವಾರಗಳಿಂದ ಕಣ್ಣಾಮುಚ್ಚಾಲೆ ಆಡುತ್ತಿದ್ದ ಮಳೆ ಶುಕ್ರವಾರ ಮಧ್ಯರಾತ್ರಿ ಅಬ್ಬರಿಸಿ ಸುರಿದಿದೆ. ಸಿಡಿಲು ಗುಡುಗು ಸಹಿತ ಸುರಿದ ಧಾರಾಕಾರ ಮಳೆ ಉದ್ಯಾನನಗರಿಯ ನಿವಾಸಿಗಳ ನಿದ್ದೆಗೆಡಿಸಿದೆ.

ಶುಕ್ರವಾರ ರಾತ್ರಿ 1 ಗಂಟೆಯಿಂದ ಬೆಳಗ್ಗೆ 9 ಗಂಟೆಯವರೆಗೆ ಸುರಿದ ಮಹಾಮಳೆಗೆ ನಗರದ ನಾನಾ ಭಾಗಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸಂಪಂಗಿರಾಮನಗರ, ಮಲ್ಲೇಶ್ವರಂ, ಜೆ.ಸಿ.ನಗರ, ಆರ್.ಟಿ.ನಗರ, ಹೆಎಚ್‌ಎಸ್‌ಆರ್ ಲೇಔಟ್, ಮೆಜೆಸ್ಟಿಕ್, ಕಲಾಸಿಪಾಳ್ಯ, ಬಾಪೂಜಿ ನಗರ, ಚಾಮರಾಜಪೇಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಹಾಮಳೆಗೆ ಜನ ತತ್ತರಿಸಿಹೋಗಿದ್ದಾರೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ರಾತ್ರಿಯಲ್ಲ ನಿದ್ದೆಯಿಲ್ಲದೆ ಕಾಲದೂಡಬೇಕಾಯಿತು. ಬಿಟಿಎಂ ಲೇಔಟ್‌ನ ಕೇಂದ್ರೀಯ ಅಬಕಾರಿ ಮತ್ತು ಸೀಮಾ ಸುಂಕ ವಸತಿ ಇವುಗಳ ಸಮೀಪ ಕಿರಿದಾಗಿ ನಿರ್ಮಿಸಿರುವ ರಾಜಕಾಲುವೆಗೆ ಕಟ್ಟಡದ ಅವಶೇಷಗಳನ್ನು ಸುರಿದಿರುವ ಪರಿಣಾಮ ನಿನ್ನೆ ರಾತ್ರಿ ಬಂದ ಮಳೆನೀರು ವಸತಿ ಗೃಹಗಳಿಗೆ ನುಗ್ಗಿ ಅಲ್ಲಿನ ನಿವಾಸಿಗಳಿಗೆ ತಲೆ ನೋವಾಗಿ ಪರಿಣಮಿಸಿದೆ.

ಬಿಟಿಎಂ ಲೇಔಟ್‌ನ ನಾಗಾರ್ಜುನ ಅಪಾರ್ಟ್‌ಮೆಂಟ್ ಸೆಲ್ಲರ್ ಕೂಡ ಮಳೆಯಿಂದ ಜಲಾವೃತಗೊಂಡಿದೆ. ನಗರದ ಚಂದ್ರ ಲೇಔಟ್, ಗಿರಿನಗರ, ಬನಶಂಕರಿ, ಲಾಲ್ಬಾಗ್, ವಿಲ್ಸನ್ ಗಾರ್ಡನ್, ಹೊಂಗಸಂದ್ರದಲ್ಲಿನ ಸ್ಲಂನ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿದ್ದು, ಜನ ಇಡೀ ರಾತ್ರಿ ಮಳೆ ನೀರನ್ನು ಹೊರಹಾಕುವ ಕಾರ್ಯದಲ್ಲಿ ನಿರತರಾಗಿದ್ದರು.

ಇನ್ನು ಎರಡು ದಿನ ಮಳೆ: ರಾಯಲಸೀಮ ಮತ್ತು ತಮಿಳುನಾಡಿನಲ್ಲಿ ವಾಯುಭಾರ ಕುಸಿತದಿಂದಾಗಿ ಶುಕ್ರವಾರ ಮಧ್ಯರಾತ್ರಿ 3 ಸೆ.ಮೀ.ಮಳೆಯಾಗಿದ್ದು, ಇನ್ನೂ ಎರಡು ಮೂರು ದಿನ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ಪಾರ್ಥನೆಗೂ ಅಡ್ಡಿ:  ಬಕ್ರೀದ್ ಹಬ್ಬದ ಅಂಗವಾಗಿ ಶನಿವಾರ ಬೆಳಗ್ಗೆ ನಗರದ ಚಾಮರಾಜಪೇಟೆಯ ಈದ್ಗಾ ಮೈದಾನ ಸೇರಿದಂತೆ, ವಿವಿಧ ಮೈದಾನಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಮಳೆ ಅಡ್ಡಿಯುಂಟುಮಾಡಿತು. ಮೈದಾನಗಳಲ್ಲಿ ನಿಂತಿದ್ದ ನೀರಿನಿಂದಾಗಿ ಸಮೀಪದ ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಬೇಗೂರು ಕೆರೆ ಕೋಡಿ: ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಬೇಗೂರು ಕೆರೆ ತುಂಬಿ ಕೋಡಿ ಹರಿಯಿತು. ಇದರ ಪರಿಣಾಮ ಕೋಡಿಯ ಪಕ್ಕದಲ್ಲಿರುವ ವಿಶ್ವಪ್ರಿಯ ಲೇಔಟ್‌ನ ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಇತ್ತ ಹರಿಯುತ್ತಿದ್ದ ಕೋಡಿಯ ನೀರಿನಲ್ಲಿ ಯುವಕರು ಕುಣಿದು ಕುಪ್ಪಳಿಸಿದರು.

ವಾಹನ ಸವಾರರ ಪರದಾಟ: ನಗರದಲ್ಲಿ ಮಳೆ ಸೃಷ್ಟಿಸಿರುವ ಅವಾಂತರಕ್ಕೆ ವಾಹನ ಸವಾರರು ಹೈರಾಣಾಗಿದ್ದಾರೆ. ನಗರದ ಬಹುತೇಕ ರಸ್ತೆಗಳು ಕರೆಯಂತಾಗಿರುವುದರಿಂದ ವಾಹನ ಸವಾರರ ಪಡಿಪಾಟಲು ಹೇಳತೀರದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X