Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂರಾರು ಪ್ರಯಾಣಿಕರ ಜೀವಗಳನ್ನುಳಿಸಿದ್ದ...

ನೂರಾರು ಪ್ರಯಾಣಿಕರ ಜೀವಗಳನ್ನುಳಿಸಿದ್ದ ತುರಂತೊ ರೈಲಿನ ಚಾಲಕರಿಗೆ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ2 Sept 2017 6:58 PM IST
share
ನೂರಾರು ಪ್ರಯಾಣಿಕರ ಜೀವಗಳನ್ನುಳಿಸಿದ್ದ ತುರಂತೊ  ರೈಲಿನ ಚಾಲಕರಿಗೆ ಪುರಸ್ಕಾರ

ಹೊಸದಿಲ್ಲಿ,ಸೆ.2: ಬಿಕ್ಕಟ್ಟಿನ ಸಂದರ್ಭದಲ್ಲಿ ಸಮಯಪ್ರಜ್ಞೆ ಮತ್ತು ಕರ್ತವ್ಯದಲ್ಲಿ ಅರ್ಪಣಾ ಮನೋಭಾವವನ್ನು ಮೆರೆಯುವ ಮೂಲಕ ನೂರಾರು ಪ್ರಯಾಣಿಕರ ಜೀವಗಳನ್ನುಳಿಸಿದ್ದ ನಾಗ್ಪುರ-ಮುಂಬೈ ತುರಂತೊ ಎಕ್ಸ್‌ಪ್ರೆಸ್ ರೈಲಿನ ಇಬ್ಬರು ಚಾಲಕರನ್ನು ಭಾರತೀಯ ರೈಲ್ವೆಯು ಶನಿವಾರ ಪುರಸ್ಕರಿಸಿತು.

ಆ.29ರಂದು ಮಹಾರಾಷ್ಟ್ರದ ವಾಶಿಂದ್ ಮತ್ತು ಅಸನಗಾಂವ್ ನಿಲ್ದಾಣಗಳ ನಡುವೆ ಭೂಕುಸಿತದಿಂದಾಗಿ ರೈಲಿನ ಇಂಜಿನ್ ಮತ್ತು ಒಂಭತ್ತು ಬೋಗಿಗಳು ಹಳಿ ತಪ್ಪಿದ್ದವು. ಇದು ಹತ್ತು ದಿನಗಳಲ್ಲಿ ರೈಲು ಹಳಿ ತಪ್ಪಿದ ನಾಲ್ಕನೇ ಘಟನೆಯಾಗಿತ್ತು.

ಅಪಘಾತ ಸಂಭವಿಸಿದ ದಿನದಂದು ಚಾಲಕ ವೀರೇಂದ್ರ ಸಿಂಗ್(52) ಮತ್ತು ಸಹಾಯಕ ಚಾಲಕ ಅಭಯ ಕುಮಾರ ಪಾಲ್(32) ಅವರ ಸಮಯಪ್ರಜ್ಞೆ ಮತ್ತು ಸೇವೆಯನ್ನು ಮನಸಾರೆ ಹೊಗಳಿದ ರೈಲ್ವೆ ಮಂಡಳಿಯ ಅಧ್ಯಕ್ಷ ಅಶ್ವನಿ ಲೋಹಾನಿ ಅವರು ಇಲಾಖೆಯ ಹಲವಾರು ಹಿರಿಯ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ಉಪಸ್ಥಿತಿಯಲ್ಲಿ ಅವರನ್ನು ಸನ್ಮಾನಿಸಿದರು.

ಕಡಿದಾದ ತಿರುವು ಮತ್ತು ಮಳೆಯಿಂದಾಗಿ ಗೋಚರ ದೂರವು ತುಂಬ ಕಡಿಮೆ ಯಿದ್ದರೂ ಭೂಕುಸಿತವನ್ನು ಗಮನಿಸಿದ್ದ ಚಾಲಕರು ತುರ್ತು ಬ್ರೇಕ್‌ಗಳನ್ನು ಹಾಕಿದ್ದರು. ಇದರಿಂದ ರೈಲಿನ ವೇಗ ಕಡಿಮೆಯಾಗಿದ್ದು, ಇಂಜಿನ್ ಮತ್ತು ಬೋಗಿಗಳು ಹಳಿ ತಪ್ಪಿದ್ದರೂ ಯಾವುದೇ ಸಾವುನೋವು ಸಂಭವಿಸದೇ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದರು.

ಅಪಘಾತದಿಂದ ಆಘಾತಗೊಂಡಿದ್ದರೂ ತಕ್ಷಣ ಚೇತರಿಸಿಕೊಂಡಿದ್ದ ಚಾಲಕರು ಪರಿಸ್ಥಿತಿಯ ಗಂಭೀರತೆಯ ಬಗ್ಗೆ ನಿಯಂತ್ರಣ ಕೊಠಡಿಗೆ ತುರ್ತು ಸಂದೇಶ ನೀಡಿದ್ದರು. ಇದರಿಂದಾಗಿ ಓವರ್‌ಹೆಡ್ ವಿದ್ಯುತ್ ಪೂರೈಕೆಯನ್ನು ಸಕಾಲದಲ್ಲಿ ಸ್ಥಗಿತಗೊಳಿಸಲು ಸಾಧ್ಯವಾಗಿತ್ತು ಮತ್ತು ಸಂಭಾವ್ಯ ಭಾರೀ ಅನಾಹುತ ತಪ್ಪಿತ್ತು.

ಮೆಚ್ಚುಗೆಯ ಕುರುಹಾಗಿ ಇಲಾಖೆಯು ಸಿಂಗ್ ಅವರಿಗೆ 10,000 ರೂ. ಮತ್ತು ಪಾಲ್‌ಗೆ 5,000 ರೂ.ಗಳ ನಗದು ಬಹುಮಾನವನ್ನೂ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X