Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುಗ್ಗಿ
  3. ಪಾದ್ರಿ ಹಾಗೂ ಸಾಹಸಿ ಫೆರಾರ್ ಮಾಂಚೋ

ಪಾದ್ರಿ ಹಾಗೂ ಸಾಹಸಿ ಫೆರಾರ್ ಮಾಂಚೋ

ವಾರ್ತಾಭಾರತಿವಾರ್ತಾಭಾರತಿ2 Sept 2017 7:26 PM IST
share
ಪಾದ್ರಿ ಹಾಗೂ ಸಾಹಸಿ ಫೆರಾರ್ ಮಾಂಚೋ

ದೀನ ದಲಿತರ ಒಳಿತಿಗಾಗಿ ಕೆಲಸ ಮಾಡಿದವರು ನಮ್ಮಲ್ಲಿ ಅನೇಕರಿದ್ದಾರೆ.

ನೆರೆಯ ಆಂಧ್ರಪ್ರದೇಶದ ಅನಂತಪುರದ ಪಾದ್ರಿ ಫೆರಾರ್ ಮಾಂಚೊ ಅಂತಹವರಲ್ಲಿ ಒಬ್ಬರಾಗಿದ್ದರು. ಮೂಲತಃ ಸ್ಪೈಯೆನ್ ದೇಶದವರಾಗಿದ್ದ ಫೆರಾರ್ ಮಾರ್ಕ್ಸ್ ವಾದಿ ರಾಜಕೀಯ ಚಿಂತನೆಗಳಿಂದ ಪ್ರೇರಣೆ ಪಡೆದಿದ್ದರು. ಸ್ಪೈಯೆನ್ ಅಂತರ್ಯುದ್ಧದಲ್ಲಿ ಭಾಗಿಯಾಗಿ ನಂತರ ಕೆಲಕಾಲ ಸೆರೆವಾಸವನ್ನು ಅನುಭವಿಸಿ ಕೊನೆಗೆ ಜೆಸ್ಯೂವಿಟ್ ಮತಪ್ರಚಾರಕರಾಗಿ ಕೆಲಸ ಮಾಡಲು 1952ರಲ್ಲಿ ಭಾರತಕ್ಕೆ ಬಂದರು. ಆಂಧ್ರದ ರಾಯಲ ಸೀಮಾದಲ್ಲಿ ಫೆರಾರ್ ಅದೆಂಥಾ ಅದ್ಭುತ ರಚನಾತ್ಮಕ ಕೆಲಸ ಮಾಡಿದರೆಂದರೆ ಜನರನ್ನು ಉತ್ತೇಜಿಸಿ ಅನಂತಪುರಂ ಸೇರಿದಂತೆ ರಾಯಲ ಸೀಮಾದ್ಯಂತ ಸುಮಾರು ಮೂರು ಸಾವಿರ ಬಾವಿಗಳನ್ನು ತೆಗೆಸಿದರು. ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮಳೆ ನೀರಿನ ಸಂಗ್ರಹ ಹಾಗೂ ಸ್ವಲ್ಪ ಮಟ್ಟಿಗೆ ಕೃಷಿ ಚಟುವಟಿಕೆಗಳಿಗೂ ಇದು ನೆರವಾಯಿತು.

ದಲಿತ ಸಮುದಾಯಗಳ ನಡುವೆ ಹೆಚ್ಚು ಕೆಲಸ ಮಾಡಿದ ಫೆರಾರ್ ಫೌಂಡೇಶನ್ ಬಾವಿಗಳನ್ನು ನಿರ್ಮಿಸಿದ್ದು ಮಾತ್ರವಲ್ಲದೆ, ಮೂರು ಆಸ್ಪತ್ರೆ, ಒಂದು ಏಡ್ಸ್ ಚಿಕಿತ್ಸಾ ಕೇಂದ್ರ, ಒಂದು ಕುಟುಂಬ ಯೋಜನಾ ಕೇಂದ್ರಕ್ಕೆ ಧನ ಸಹಾಯ ನೀಡುತ್ತಿತ್ತು. ಹದಿನಾಲ್ಕು ಗ್ರಾಮೀಣ ಆರೋಗ್ಯ ಕೇಂದ್ರಗಳು, ಸಾವಿರದ ಏಳುನೂರು ಶಾಲೆಗಳು, ಮೂವತ್ತು ಸಾವಿರ ಮನೆಗಳಿಗೆ ಒಂದಲ್ಲ ಒಂದು ರೀತಿ ಸಹಾಯ ಒದಗಿಸುತ್ತಿತ್ತು. ಫೆರಾರ್ ತಮ್ಮ ಜೀವಿತಾವಧಿಯಲ್ಲಿ ಒಟ್ಟು ಮೂವತ್ತು ಲಕ್ಷ ಸಸಿಗಳನ್ನು ನೆಟ್ಟು ಬರಪೀಡಿತ ರಾಯಲ ಸೀಮಾದಲ್ಲಿ ಹಸಿರು ಚಿಗುರಿಸಲು ಯತ್ನಿಸಿದ್ದರು. ಒಟ್ಟು ಇಪ್ಪತ್ತೈದು ಲಕ್ಷ ಜನರ ಬದುಕಿನಲ್ಲಿ ಪರಿಣಾಮಕಾರಿ ಬದಲಾವಣೆ ತಂದವರೆಂಬ ಖ್ಯಾತಿ ಅವರಿಗಿತ್ತು.

ಫೆರಾರ್ 2009ರಲ್ಲಿ ಅನಂತಪುರದಲ್ಲೇ ನಿಧನರಾದರು. ಅವರು ಸ್ಥಾಪಿಸಿದ ವಿನ್ಸೆಂಟ್ ಫೆರಾರ್ ಫೌಂಡೇಶನ್‌ಗೆ ನೊಬೆಲ್ ಶಾಂತಿ ಪುರಸ್ಕಾರ ನೀಡಬಹುದೆಂದು ಸ್ವತಂತ್ರ ಸಾಮಾಜಿಕ ಗುಂಪೊಂದು 2010ರಲ್ಲಿ ಶಿಫಾರಸು ಮಾಡಿತ್ತು.

ವಿನ್ಸೆಂಟ್ ಫೆರಾರ್‌ರ ಬದುಕು ಕೊಡುಗೆಗಳ ಬಗ್ಗೆ ರಾಯಲ ಸೀಮಾ ಜನತೆ ಅದೆಷ್ಟು ಕೃತಜ್ಞತಾ ಭಾವನೆ ಹೊಂದಿದ್ದರೆಂದರೆ ಕಂಬದೂರು ಕುಂದುರ್ಚಿ ಬಳಿ ಫೆರಾರ್ ಹೆಸರಿನಲ್ಲಿ ಒಂದು ಕ್ರೈಸ್ತ ದೇವಾಲಯವನ್ನೇ ನಿರ್ಮಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X