Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ಯೂಬ: ‘ಶಬ್ದ ದಾಳಿ’ಯಿಂದ ಅಮೆರಿಕ...

ಕ್ಯೂಬ: ‘ಶಬ್ದ ದಾಳಿ’ಯಿಂದ ಅಮೆರಿಕ ರಾಜತಾಂತ್ರಿಕರ ಮೆದುಳಿಗೆ ಹಾನಿ; ಸ್ಟಾಫ್ ಅಸೋಸಿಯೇಶನ್ ಆರೋಪ

ವಾರ್ತಾಭಾರತಿವಾರ್ತಾಭಾರತಿ2 Sept 2017 7:51 PM IST
share
ಕ್ಯೂಬ: ‘ಶಬ್ದ ದಾಳಿ’ಯಿಂದ ಅಮೆರಿಕ ರಾಜತಾಂತ್ರಿಕರ ಮೆದುಳಿಗೆ ಹಾನಿ; ಸ್ಟಾಫ್ ಅಸೋಸಿಯೇಶನ್ ಆರೋಪ

ವಾಶಿಂಗ್ಟನ್, ಸೆ. 2: ಕ್ಯೂಬದಲ್ಲಿರುವ ಅಮೆರಿಕ ರಾಯಭಾರ ಕಚೇರಿಯಲ್ಲಿ ನಿಗೂಢ ‘ಶಬ್ದ ದಾಳಿ’ಯಲ್ಲಿ ಗಾಯಗೊಂಡಿರುವ ಕೆಲವು ರಾಜತಾಂತ್ರಿಕರು ಮೆದುಳಿನ ಗಾಯಗಳಿಗೆ ಅಥವಾ ಶಾಶ್ವತ ಕಿವುಡುತನಕ್ಕೆ ಒಳಗಾಗಿದ್ದಾರೆ ಎಂದು ಅವರ ಸ್ಟಾಫ್ ಅಸೋಸಿಯೇಶನ್ ಶುಕ್ರವಾರ ಹೇಳಿದೆ.

ಕ್ಯೂಬಾ ರಾಜಧಾನಿ ಹವಾನದಲ್ಲಿ ಕಳೆದ ವರ್ಷ ಆರಂಭಗೊಂಡ ಸರಣಿ ಘಟನೆಗಳಲ್ಲಿ ತನ್ನ ರಾಯಭಾರ ಕಚೇರಿಯ ಕನಿಷ್ಠ 16 ಉದ್ಯೋಗಿಗಳು ಗಾಯಗೊಂಡಿದ್ದಾರೆ ಎಂದು ವಾಶಿಂಗ್ಟನ್ ಇತ್ತೀಚೆಗೆ ಹೇಳಿತ್ತು. ಆದರೆ, ಗಾಯದ ಪ್ರಮಾಣವನ್ನು ಅಧಿಕಾರಿಗಳು ಹೇಳಿರಲಿಲ್ಲ.

ಈಗ, ಅಮೆರಿಕದ ರಾಜತಾಂತ್ರಿಕ ಮತ್ತು ಅಂತಾರಾಷ್ಟ್ರೀಯ ನೆರವು ಸಿಬ್ಬಂದಿಯನ್ನು ಪ್ರತಿನಿಧಿಸುವ ಕಾರ್ಮಿಕ ಸಂಘಟನೆ ಅಮೆರಿಕನ್ ವಿದೇಶ ಸೇವೆ ಅಸೋಸಿಯೇಶನ್‌ಗೆ ಚಿಕಿತ್ಸೆ ಪಡೆದವರ ಪೈಕಿ 10 ಮಂದಿಯ ಜೊತೆ ಮಾತನಾಡುವ ಅವಕಾಶ ಲಭಿಸಿದೆ.

‘‘ಲಘು ಆಘಾತಕರ ಮೆದುಳು ಗಾಯ ಮತ್ತು ಶಾಶ್ವತ ಕಿವುಡುತನಕ್ಕೆ ರಾಯಭಾರ ಸಿಬ್ಬಂದಿ ಒಳಗಾಗಿರುವುದು ಚಿಕಿತ್ಸೆಯ ವೇಳೆ ಪತ್ತೆಯಾಗಿದೆ. ಅದೇ ವೇಳೆ, ಸಮತೋಲನ ಕೊರತೆ, ತೀವ್ರ ತಲೆನೋವು, ಭ್ರಮೆಗೆ ಒಳಗಾಗುವುದು ಮತ್ತು ಮೆದುಳಿನ ಊತ ಕೂಡ ಕಂಡು ಬಂದಿದೆ’’ ಎಂದು ಅಸೋಸಿಯೇಶನ್ ಹೇಳಿದೆ.

ಅರ್ಧ ಶತಮಾನದದ ವೈರತ್ವದ ಬಳಿಕ, ಕ್ಯೂಬದಲ್ಲಿ ಅಮೆರಿಕದ ಪೂರ್ಣ ಪ್ರಮಾಣದ ರಾಯಭಾರ ಕಚೇರಿ 2015ರಲ್ಲಿ ಪುನಾರಂಭಗೊಂಡಿತ್ತು. ರಾಯಭಾರಿಗಳು ಕಳೆದ ವರ್ಷ ಅಸ್ವಸ್ಥಗೊಂಡಿದ್ದರು.

ರಾಜತಾಂತ್ರಿಕರ ಆರೋಗ್ಯವನ್ನು ಹದಗೆಡಿಸಲು ಒಂದು ರೀತಿಯ ‘ಸಾನಿಕ್’ ಉಪಕರಣವನ್ನು ಬಳಸಲಾಗಿದೆ ಎಂಬುದಾಗಿ ಅಮೆರಿಕದ ಅಧಿಕಾರಿಗಳು ಸುದ್ದಿಗಾರರಿಗೆ ಹೇಳಿದ್ದಾರೆ.

ಅಭೂತಪೂರ್ವ ಆಕ್ರಮಣ: ಅಮೆರಿಕ

 ರಾಯಭಾರಿಗಳ ಮೇಲಿನ ಈ ‘ಶಬ್ದಾಕ್ರಮಣ’ ಅಭೂತಪೂರ್ವ ಎಂಬುದಾಗಿ ಅಮೆರಿಕದ ವಿದೇಶಾಂಗ ಇಲಾಖೆ ಬಣ್ಣಿಸಿದೆ ಹಾಗೂ ತನ್ನ ನೆಲದಲ್ಲಿ ಕೆಲಸ ಮಾಡುವ ರಾಯಭಾರಿಗಳ ಸುರಕ್ಷತೆಯ ಹೊಣೆ ಕ್ಯೂಬದ್ದಾಗಿದೆ ಎಂದು ಎಚ್ಚರಿಸಿದೆ.

ಈ ದಾಳಿಗಳ ಹಿಂದೆ ಯಾರಿದ್ದಾರೆ ಎನ್ನುವುದನ್ನು ಅದು ಹೇಳಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X