Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಶಸ್ವಿ ಸಿನಿಮಾಗಳಿಗೆ ಬಾಲ್ಯದ ಅನುಭವ...

ಯಶಸ್ವಿ ಸಿನಿಮಾಗಳಿಗೆ ಬಾಲ್ಯದ ಅನುಭವ ಸ್ಫೂರ್ತಿ: ರಾಮದಾಸ್ ನಾಯ್ಡು

ವಾರ್ತಾಭಾರತಿವಾರ್ತಾಭಾರತಿ2 Sept 2017 11:14 PM IST
share

ಬೆಂಗಳೂರು, ಸೆ.2: ಕೋಲಾರದ ಕನ್ನಡ ಹಾಗೂ ತೆಲುಗು ಭಾಷೆಯ ಅಂತಸತ್ವ ಹಾಗೂ ಗ್ರಾಮೀಣ ಬದುಕಿನ ನನ್ನ ಅನುಭವಗಳಿಂದ ಸೃಜನಾತ್ಮಕ ಸಿನಿಮಾಗಳನ್ನು ನಿರ್ದೇಶಿಸಲು ಸಾಧ್ಯವಾಯ್ತು ಎಂದು ಹಿರಿಯ ನಿರ್ದೇಶಕ ಪಿ.ಆರ್.ರಾಮದಾಸ್ ನಾಯ್ಡು ತಿಳಿಸಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಬೆಳ್ಳೆ ಹೆಜ್ಜೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಆಂಧ್ರಪ್ರದೇಶಕ್ಕೆ ಅಂಟಿಕೊಂಡಿರುವ ಕೋಲಾರದ ರಾಯಲಪಾಡುವಿನಲ್ಲಿ ಹುಟ್ಟಿದ ನನಗೆ ಕನ್ನಡ ಹಾಗೂ ತೆಲಗು ಭಾಷೆಯ ಶ್ರೀಮಂತಿಕೆ ಬಾಲ್ಯದಲ್ಲಿಯೇ ದೊರಕಿತು. ಇದು ನನಗೆ ಚಿತ್ರಸಾಹಿತ್ಯ ಹಾಗೂ ಚಿತ್ರಕತೆ ಬರವಣಿಗೆಗೆ ಪ್ರೇರಣೆ ಒದಗಿಸಿತು ಎಂದು ತಿಳಿಸಿದರು.

ನನ್ನ ತಂದೆ ಪಿ.ರಾಮಪ್ಪ ನಾಯ್ಡು ಸ್ವಾತಂತ್ರ ಹೋರಾಟದ ಸಕ್ರಿಯ ಕಾರ್ಯಕರ್ತರಾಗಿದ್ದರು. ತಮ್ಮ ಇಡೀ ಬದುಕನ್ನು ಸಾಮಾಜಿಕ ಚಟುವಟಿಕೆಗಳಿಗೆ ಮೀಸಲಿಟ್ಟಿದ್ದರು. ಹೀಗಾಗಿ ಮನೆಯಲ್ಲಿ ಯಾವಾಗಲು ಸಮಾಜ ಸುಧಾರಕರ, ಸ್ವಾತಂತ್ರ ಹೋರಾಟಗಾರರ ಬದುಕಿನ ಕುರಿತು ಚರ್ಚೆ, ಜಾನಪದ ಹಾಗೂ ಹರಿದಾಸರ ಕೀರ್ತನೆಗಳನ್ನು ಸದಾ ಕೇಳುತ್ತಾ ಬೆಳೆದೆ. ಇದು ನನ್ನ ಬದುಕನ್ನು ರೂಪಿಸಿದವು ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಲೇಜು ಶಿಕ್ಷಣ ಕಲಿಯಲು ಬೆಂಗಳೂರಿಗೆ ಬಂದ ನನಗೆ ವಾರಕ್ಕೊಂದು ಸಿನಿಮಾ ನೋಡುವ ಹವ್ಯಾಸ ಅಂಟಿಕೊಂಡಿತು. ಈ ವೇಳೆ ಇಟಲಿಯ ‘ಬೈಸಿಕಲ್ ಥೀವ್ಸ್ ’ ಸಿನಿಮಾ ನೋಡಿದೆ. ಇದು ನನ್ನ ಮೇಲೆ ಭಾರೀ ಪರಿಣಾಮ ಬೀರಿತು. ನಾನು ಚಿತ್ರರಂಗಕ್ಕೆ ಬರಲು ಈ ಚಿತ್ರದ ಕತೆಯೇ ಪ್ರೇರಣೆಯಾಯಿತು ಎಂದು ಅವರು ಹೇಳಿದರು.

ನನ್ನ ಮುಂದಿನ ಜೀವನವನ್ನು ಸಿನಿಮಾ ರಂಗದಲ್ಲೇ ರೂಪಿಸಿಕೊಳ್ಳಲು ನಿರ್ಧರಿಸಿದೆ. ಹೀಗಾಗಿ ಆದರ್ಶ ಫಿಲಂ ಶಾಲೆಗೆ ಸೇರಿದೆ. ಅಲ್ಲಿ ಕಾಶಿನಾಥ್ ಗೆಳೆಯನಾದ. ನಾವಿಬ್ಬರು ದೇಶ-ವಿದೇಶದ ಹಲವು ವಿಭಿನ್ನ ಸಿನಿಮಾಗಳನ್ನು ನೋಡಿ, ಆ ಸಿನಿಮಾಗಳಲ್ಲಿ ಮೂಡಿ ಬರುತ್ತಿದ್ದ ಪ್ರತಿ ದೃಶ್ಯಗಳನ್ನು ಪರಸ್ಪರ ವಿಶ್ಲೇಷಿಸುತ್ತಿದ್ದೆವು ಎಂದು ಅವರು ತಮ್ಮ ಅನುಭವವನ್ನು ಹಂಚಿಕೊಂಡರು.

1979ರಲ್ಲಿ ‘ಅಮರ ಮಧುರ ಪ್ರೇಮ’ ಚಿತ್ರದ ಮೂಲಕ ಸ್ವತಂತ್ರ ನಿರ್ಮಾಪಕ, ನಿರ್ದೇಶಕನಾಗಿದ್ದು ಅವಿಸ್ಮರಣೀಯ ಗಳಿಗೆಗಳು. ನಂತರ ಮುಸ್ಸಂಜೆ, ಬೇಲಿ ಮತ್ತು ಹೊಲ, ಮೊಗ್ಗಿನ ಜಡೆ ಹಾಗೂ ಪ್ರವಾಹ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿದೆ. ಇವೆಲ್ಲವು ನನ್ನನ್ನು ಪರಿಪೂರ್ಣವಾಗಿ ರೂಪಿಸಿದ ಚಿತ್ರಗಳಾದವು ಎಂದು ಅವರು ತಮ್ಮ ಚಿತ್ರಗಳ ಕುರಿತು ಸ್ಮರಿಸಿದರು.

ನಿವೃತ್ತ ನ್ಯಾ.ನಾಗಮೋಹನ ದಾಸ್ ಮಾತನಾಡಿ, ಜನತೆಗೆ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಅರಿವು ಮೂಡಿಸುವಂತಹ ಶಕ್ತಿ ಸಿನಿಮಾ ರಂಗಕ್ಕಿದೆ. ಆದರೆ, ಇತ್ತೀಚಿಗೆ ತೆರೆಕಾಣುವ ಬಹುತೇಕ ಚಿತ್ರಗಳಲ್ಲಿ ಸಮಾಜಕ್ಕೆ ಮಾರಕವಾಗಿರುವ ಅಂಶಗಳೇ ಹೆಚ್ಚಿವೆ. ಈ ಬಗ್ಗೆ ಚಿತ್ರರಂಗದ ಗಣ್ಯರು ಗಂಭೀರವಾಗಿ ಚಿಂತಿಸಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಸಿದ್ದಲಿಂಗಯ್ಯ, ಹಿರಿಯ ಕತೆಗಾರ ಕು.ವೀರಭದ್ರಪ್ಪ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ರಾಜೇಂದ್ರಸಿಂಗ್ ಬಾಬು, ಹಿರಿಯ ನಿರ್ದೇಶಕರಾದ ಪಿ.ಶೇಷಾದ್ರಿ, ಲಿಂಗದೇವರು, ಕೆಸಿಎನ್ ಚಂದ್ರು ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X