Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ನಾಟಕದಿಂದ ಮೋದಿ ಸಂಪುಟ ಸೇರುವವರು...

ಕರ್ನಾಟಕದಿಂದ ಮೋದಿ ಸಂಪುಟ ಸೇರುವವರು ಯಾರು ?

9 ಸಂಭಾವ್ಯ ನೂತನ ಕೇಂದ್ರ ಸಚಿವರ ಪಟ್ಟಿ ಇಲ್ಲಿದೆ

ವಾರ್ತಾಭಾರತಿವಾರ್ತಾಭಾರತಿ2 Sept 2017 11:27 PM IST
share
ಕರ್ನಾಟಕದಿಂದ ಮೋದಿ ಸಂಪುಟ ಸೇರುವವರು ಯಾರು ?

ಹೊಸದಿಲ್ಲಿ,ಸೆ.2: ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ ರವಿವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ಕರ್ನಾಟಕದ ಕೆನರಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ, ಮುಂಬೈನ ಮಾಜಿ ಪೊಲೀಸ್ ಆಯುಕ್ತ ಸತ್ಯಪಾಲ ಸಿಂಗ್ ಸೇರಿದಂತೆ ಒಂಭತ್ತು ಹೊಸಬರು ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಸರಕಾರದಲ್ಲಿನ ಮೂಲಗಳು ಶನಿವಾರ ರಾತ್ರಿ ತಿಳಿಸಿವೆ. ಇದು 2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಸಂಪುಟದ ಅಂತಿಮ ವಿಸ್ತರಣೆಯಾಗಿರುವ ಸಾಧ್ಯತೆಯಿದೆ. ತನ್ಮಧ್ಯೆ ಸಂಪುಟ ಪುನರ್‌ರಚನೆಗೆ ಅನುಕೂಲವಾಗುವಂತೆ ಆರಕ್ಕೂ ಅಧಿಕ ಸಚಿವರು ಈಗಾಗಲೇ ತಮ್ಮ ಹುದ್ದೆಗಳಿಗೆ ರಾಜೀನಾಮೆಗಳನ್ನು ಸಲ್ಲಿಸಿದ್ದು, ಇನ್ನಷ್ಟು ಸಚಿವರು ಹುದ್ದೆಗಳನ್ನು ತೊರೆಯುವ ನಿರೀಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೇ,2014ರಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಈಗಾಗಲೇ ಎರಡು ಬಾರಿ ಸಂಪುಟ ಪುನರ್‌ರಚನೆ ಮಾಡಿದ್ದಾರೆ. ಇಂತಹ ಮೊದಲ ಕಸರತ್ತು 2014,ನ.9ರಂದು ನಡೆದಿದ್ದರೆ, 2015,ಜು.5ರಂದು ಮತ್ತೊಮ್ಮೆ ಸಂಪುಟ ಪುನರ್‌ರಚನೆಯಾಗಿತ್ತು.

ಅನಂತಕುಮಾರ ಹೆಗಡೆ ಮತ್ತು ಸತ್ಯಪಾಲ ಸಿಂಗ್ ಜೊತೆಗೆ ಉತ್ತರ ಪ್ರದೇಶದ ರಾಜ್ಯಸಭಾ ಸದಸ್ಯ ಶಿವಪ್ರತಾಪ ಶುಕ್ಲಾ, ಬಿಹಾರದ ಲೋಕಸಭಾ ಸದಸ್ಯ ಅಶ್ವಿನಿ ಕುಮಾರ ಚೌಬೆ, ಮಧ್ಯಪ್ರದೇಶದ ಸಂಸದ ವೀರೇಂದ್ರ ಕುಮಾರ, ಮಾಜಿ ಐಎಎಸ್ ಅಧಿಕಾರಿ ರಾಜಕುಮಾರ ಸಿಂಗ್, ಮಾಜಿ ಐಎಫ್‌ಎಸ್ ಅಧಿಕಾರಿ ಹರ್ದೀಪ ಸಿಂಗ್ ಪುರಿ, ಜೋಧಪುರ ಸಂಸದ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಕೇರಳದ ಮಾಜಿ ಐಎಎಸ್ ಅಧಿಕಾರಿ ಕೆ.ಆಲ್ಫೋನ್ಸ್ ಅವರು ಸಂಪುಟವನ್ನು ಸೇರಲಿರುವ ಹೊಸಮುಖ ಗಳಾಗಿದ್ದಾರೆ.

ಆದರೆ ಸಂಪುಟದಲ್ಲಿ ಜೆಡಿಯು ಮತ್ತು ಶಿವಸೇನೆ ಭಾಗಿಯಾಗಲಿವೆಯೇ ಎನ್ನುವುದು ಸ್ಪಷ್ಟವಾಗಿಲ್ಲ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದು, ಸಂಜೆಯ ವೇಳೆಗೆ ಖಾತೆಗಳ ಹಂಚಿಕೆಯಾಗುವ ಸಾಧ್ಯತೆಯಿದೆ.

ನೂತನ ರಕ್ಷಣಾ ಸಚಿವರು ಯಾರಾಗಲಿದ್ದಾರೆ ಎಂಬ ವಿಷಯದ ಜೊತೆಗೆ ಹಾಲಿ ಸಚಿವರಾದ ಸುರೇಶ ಪ್ರಭು ಮತ್ತು ನಿತಿನ್ ಗಡ್ಕರಿ ಅವರ ಬಗ್ಗೆಯೂ ಊಹಾಪೋಹ ಗಳು ಕೇಳಿಬರುತ್ತಿವೆ. ಹಾಲಿ ರಕ್ಷಣಾ ಸಚಿವಾಲಯದ ಜವಾಬ್ದಾರಿಯನ್ನೂ ಹೊತ್ತಿರುವ ವಿತ್ತಸಚಿವ ಅರುಣ್ ಜೇಟ್ಲಿ ಅವರು ಅದನ್ನು ಕೊಡವಿಕೊಳ್ಳುವ ಸಂಕೇತವನ್ನು ಈಗಾಗಲೇ ನೀಡಿದ್ದಾರೆ. ಹೀಗಾಗಿ ರಕ್ಷಣಾ ಖಾತೆ ಗಡ್ಕರಿಯವರ ಹೆಗಲಿಗೇರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಸರಣಿ ರೈಲು ಅಪಘಾತಗಳ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದ ಪ್ರಭು ಅವರು ಬೇರೆ ಖಾತೆಗೆ ವರ್ಗಾವಣೆಗೊಳ್ಳಬಹುದು.

ವಿದ್ಯುತ ಸಚಿವ ಪಿಯೂಷ ಗೋಯಲ್, ತೈಲ ಸಚಿವ ಧಮೇಂದ್ರ ಪ್ರಧಾನ ಮತ್ತು ದೂರಸಂಪರ್ಕ ಸಚಿವ ಮನೋಜ ಸಿನ್ಹಾ ಅವರು ತಮ್ಮ ಖಾತೆಗಳನ್ನು ಉತ್ತಮವಾಗಿ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಸಂಪುಟ ಪುನರ್‌ರಚನೆ ಸಂದರ್ಭ ಭಡ್ತಿಗಳನ್ನು ಪಡೆಯಬಹುದು ಎಂದು ಹಿರಿಯ ಬಿಜೆಪಿ ನಾಯಕರೋರ್ವರು ತಿಳಿಸಿದರು.

ಸದ್ಯದ ಕೇಂದ್ರ ಸಂಪುಟವು ಪ್ರಧಾನಿ ಸೇರಿದಂತೆ 73 ಸಚಿವರನ್ನು ಹೊಂದಿದ್ದು, ಗರಿಷ್ಠ ಸಂಖ್ಯೆ 81ನ್ನು ಮೀರುವಂತಿಲ್ಲ. ಸಂವಿಧಾನಕ್ಕೆ ಮಾಡಲಾಗಿರುವ ತಿದ್ದುಪಡಿಯಂತೆ ಈ ಮಿತಿಯು ಲೋಕಸಭೆಯ ಸದಸ್ಯಬಲದ ಶೇ.15ನ್ನು ದಾಟಕೂಡದು. ಲೋಕಸಭೆಯ ಹಾಲಿ ಸದಸ್ಯಬಲ 545 ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X