Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ವಾಸ್ತವದ ವಿವೇಕದ ಕಣ್ಣಲ್ಲಿ-ಕನ್ನಡ

ವಾಸ್ತವದ ವಿವೇಕದ ಕಣ್ಣಲ್ಲಿ-ಕನ್ನಡ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ3 Sept 2017 12:14 AM IST
share
ವಾಸ್ತವದ ವಿವೇಕದ ಕಣ್ಣಲ್ಲಿ-ಕನ್ನಡ

ಬರಗೂರು ಅವರನ್ನು ಎರಡು ನೆಲೆಗಳಲ್ಲಿ ನಾವು ನೋಡಬಹುದು. ಒಂದು ಬಂಡಾಯ ಚಳವಳಿಯ ಮೂಲಕ. ಇನ್ನೊಂದು ಕನ್ನಡ ಪರ ಹೋರಾಟಗಾರರಾಗಿ. ಕನ್ನಡದ ಕುರಿತಂತೆ ಎಲ್ಲ ಆಯಾಮಗಳಲ್ಲಿ ಮಾತನಾಡುವ ನೈತಿಕ ಹಕ್ಕನ್ನು ಹೊಂದಿದವರು ಬರಗೂರು ರಾಮಚಂದ್ರಪ್ಪ. ಕನ್ನಡದ ವಿಷಯ ಬಂದಾಗ ಭಾವೋದ್ರೇಕದಿಂದ ವರ್ತಿಸುವ ಬದಲು ವಸ್ತುಸ್ಥಿತಿಯ ಅರಿವಿನೊಂದಿಗೆ ಚಿಂತನೆ ನಡೆಸಿ, ಹೋರಾಟ ಕಟ್ಟಬೇಕು ಎಂದು ನಂಬಿದವರು ಮತ್ತು ಹಾಗೆ ನಡೆದವರು. ಈ ಕಾರಣದಿಂದಲೇ, ಬರಗೂರು ಅವರು ಕನ್ನಡದ ಅನುಷ್ಠಾನ, ಸವಾಲುಗಳ ಕುರಿತಂತೆ ಮಾತನಾಡುವಾಗ ಅದನ್ನು ಚಿಂತನಾ ವಲಯ ಗಂಭೀರವಾಗಿ ಆಲಿಸುತ್ತದೆ.

ಖ್ಯಾತ ಲೇಖಕ, ಚಿಂತಕ, ಹೋರಾಟಗಾರ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಬರೆದಿರುವ ಕಿರು ಕೃತಿ 'ಶಿಕ್ಷಣದಲ್ಲಿ ಕನ್ನಡ'. ವಿವಿಧ ಸಂದರ್ಭಗಳಲ್ಲಿ ವಿವಿಧ ಪತ್ರಿಕೆಗಳಿಗಾಗಿ ಬರೆದ ಕೆಲವು ಲೇಖನಗಳು ಇಲ್ಲಿ ಒಂದಾಗಿ ಜೋಡಿಸಲಾಗಿದೆ. ಶಿಕ್ಷಣದಲ್ಲಿ ಕನ್ನಡದ ಸ್ಥಾನ, ಸಮಸ್ಯೆ, ಸವಾಲುಗಳು, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಂವಿಧಾನಾತ್ಮಕ ಹಿನ್ನೆಲೆಯಲ್ಲಿ ವಿಶ್ಲೇಷಿಸಿದ ಬರಹಗಳು ಇಲ್ಲಿವೆ. ಇಲ್ಲಿ ಕೆಲವು ಸಂಗತಿಗಳು ಪುನರುಕ್ತವಾಗಿದೆ. ಬರಗೂರು ಅವರೇ ಹೇಳುವಂತೆ, ಗೋಕಾಕ್ ಸಮಿತಿಯ ಸುತ್ತಮುತ್ತಲ ಸಂಗತಿಗಳು ಮತ್ತು ನ್ಯಾಯಾಲಯದಲ್ಲಿ ನಡೆದ ಮಾತೃಭಾಷಾ ಮಾಧ್ಯಮದ ಕಾನೂನು ಸಮರದ ಸಂಗತಿಗಳು ಪುನರುಕ್ತವಾಗಿವೆ. ಲೇಖನ ರಚಿತವಾದ ಸಂದರ್ಭದಲ್ಲಿ ಈ ವಿಷಯಗಳ ಪ್ರಸ್ತಾಪ ಅಗತ್ಯವಾಗಿತ್ತು ಎನ್ನುವ ಹಿನ್ನೆಲೆಯಲ್ಲಿ ಅವರು ಅದನ್ನು ಪುನರುಕ್ತಗೊಳಿಸಿದ್ದಾರೆ. ಈ ಪುಸ್ತಕದ ಬಹುಪಾಲು ಲೇಖನಗಳಲ್ಲಿ ಸಂವಿಧಾನದ ಮತ್ತು ಕಾನೂನುಗಳ ಪ್ರಸ್ತಾಪವಿದೆ. ಕನ್ನಡ ವಿಷಯದ ಕುರಿತಂತೆ ಬರೆಯುವಾಗ ಎಲ್ಲೂ ಭಾವೋದ್ರೇಕವನ್ನಾಗಲಿ, ಅಂಧಾಭಿಮಾನವನ್ನಾಗಲಿ ತಳೆಯದೆ, ವಾಸ್ತವದ ನೆಲೆಯಲ್ಲಿ ನಿಂತು ಬರಗೂರರು ಬರೆದಿದ್ದಾರೆ.ವಾಸ್ತವದ ವಿವೇಕದೊಂದಿಗೆ ಈ ಕೃತಿ ಮೂಡಿ ಬಂದಿದೆ.

ಇಲ್ಲಿ ಒಟ್ಟು ಹತ್ತು ಲೇಖನಗಳಿವೆ. ಕನ್ನಡ ಸಂಸ್ಕೃತಿ, ಕನ್ನಡ ಮಾಧ್ಯಮ ಮತ್ತು ಸಂವಿಧಾನ, ಕನ್ನಡ ಮಾಧ್ಯಮದ ವಿರುದ್ಧ ಸುಪ್ರೀಂಕೋರ್ಟ್ ತೀರ್ಪು, ಕನ್ನಡ ಮತ್ತು ಸಂಸ್ಕೃತದ ನಡುವಿನ ಸಂಬಂಧ, ಹಿಂದಿ ಹೇರಿಕೆಯ ಇತಿಹಾಸ, ಕಾಲೇಜು ಶಿಕ್ಷಣದಲ್ಲಿ ಕನ್ನಡದ ಸ್ಥಿತಿ, ಮಾತೃ ಭಾಷೆಯ ಅಗತ್ಯ ಮತ್ತು ಅದನ್ನು ಅಳವಡಿಸುವ ಸಂದರ್ಭದಲ್ಲಿರುವ ಸವಾಲು, ಉನ್ನತ ಶಿಕ್ಷಣದಲ್ಲಿ ಉದ್ಯಮದ ವೈಪರೀತ್ಯ ಹೀಗೆ ಕನ್ನಡವನ್ನು ಕೇಂದ್ರವಾಗಿಟ್ಟುಕೊಂಡೇ ಲೇಖನಗಳು ವರ್ತಮಾನದ ಸವಾಲುಗಳನ್ನು ಎದುರಿಸುತ್ತದೆ. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೃತಿಯನ್ನು ಪ್ರಕಟಿಸಿದೆ. ಕೃತಿಯ ಮುಖಬೆಲೆ 60 ರೂಪಾಯಿ. 
 

share
-ಕಾರುಣ್ಯಾ
-ಕಾರುಣ್ಯಾ
Next Story
X