Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಮಂಗಳೂರು ಚಲೋ’ ಹತ್ತಿಕ್ಕಲು ಪೊಲೀಸ್...

'ಮಂಗಳೂರು ಚಲೋ’ ಹತ್ತಿಕ್ಕಲು ಪೊಲೀಸ್ ಬಳಕೆ ಖಂಡನೀಯ: ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ3 Sept 2017 5:25 PM IST
share
ಮಂಗಳೂರು ಚಲೋ’ ಹತ್ತಿಕ್ಕಲು ಪೊಲೀಸ್ ಬಳಕೆ ಖಂಡನೀಯ: ಸಿ.ಟಿ.ರವಿ

ಬೆಂಗಳೂರು, ಸೆ.3: ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್ ರ್ಯಾಲಿಯನ್ನು ಹತ್ತಿಕ್ಕಲು ರಾಜ್ಯ ಸರಕಾರವು ಪೊಲೀಸ್ ಬಲವನ್ನು ಬಳಕೆ ಮಾಡಲು ಮುಂದಾಗಿರುವುದು ಖಂಡನಾರ್ಹ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ದ್ದೇಶಿಸಿ ಮಾತನಾಡಿದ ಅವರು, ನಕ್ಸಲರನ್ನು ಮತ್ತು ಪ್ರಜಾತಂತ್ರ ವಿರೋಧಿಗಳನ್ನು ಮಾತುಕತೆಗೆ ಕರೆಯುವ ಸರಕಾರ, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿ, ಶಾಂತಿಯುವಾಗಿ ರ್ಯಾಲಿ ನಡೆಸುವ ಬಿಜೆಪಿ ಕಾರ್ಯಕರ್ತರನ್ನು ಹತ್ತಿಕ್ಕಲು ಹೊರಟಿದೆ ಎಂದು ಆರೋಪಿಸಿದರು.

ಸರಕಾರದ ಕೋಮುವಾದಿ ಹಾಗೂ ಕ್ರಿಮಿನಲ್ ನೀತಿಯನ್ನು ನಾವು ಬಯಲು ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮಂಗಳೂರು ಚಲೋ ಕಾರ್ಯಕ್ರಮ ನಿಲ್ಲುವುದಿಲ್ಲ. ರಾಜ್ಯ ಸರಕಾರದ ವೋಟ್ ಬ್ಯಾಂಕ್ ರಾಜಕಾರಣವನ್ನು ನಾವು ಬಯಲು ಮಾಡದೆ ಬಿಡುವುದಿಲ್ಲ ಎಂದು ಹೇಳಿದರು.

ಮೈಸೂರಿನ ರಾಜು, ಬೆಂಗಳೂರಿನ ರುದ್ರೇಶ್ ಮತ್ತು ಮಂಗಳೂರಿನ ಶರತ್ ಮಡಿವಾಳ್ ಹತ್ಯೆಯಲ್ಲಿ ಪಿಎಫ್‌ಐ ಕೈವಾಡವಿರುವುದು ಸಾಬೀತಾಗಿದೆ. ಆದರೆ, ರಾಜ್ಯ ಸರಕಾರ ಪಿಎಫ್‌ಐ, ಎಸ್‌ಡಿಪಿಐ ಮತ್ತು ಕೆಎಫ್‌ಡಿ ಸಂಘಟನೆಗಳನ್ನು ನಿಷೇಧಿಸುವ ಬದಲಿಗೆ ಈ ಸಂಘಟನೆಗಳೊಂದಿಗೆ ಬೀಗತನ ಮಾಡುತ್ತಿದೆ ಎಂದು ಅವರು ಕಿಡಿಗಾರಿದರು.

ದತ್ತಪೀಠ ವಿವಾದ: ದತ್ತಪೀಠ ವಿವಾದವನ್ನು ಬಗೆಹರಿಸಲು ಸುಪ್ರೀಂಕೋರ್ಟ್ 8 ವಾರಗಳ ಅವಧಿ ನಿಗದಿ ಮಾಡಿದ್ದರೂ, ವಿವಾದ ಇತ್ಯರ್ಥಗೊಳಿಸದೆ ಮೂವರು ಸದಸ್ಯರ ಸಮಿತಿ ರಚಿಸಿರುವ ರಾಜ್ಯ ಸರಕಾರದ ನಿಲುವು ಖಂಡನೀಯ. ಈಗಾಗಲೇ ನ್ಯಾಯಾಲಯದ ಎಲ್ಲ ಹಂತದಲ್ಲೂ ಹಿಂದುಗಳ ಪರ ತೀರ್ಪು ಬಂದಿದೆ. ಆದರೆ, ರಾಜ್ಯ ಸರಕಾರಕ್ಕೆ ಈ ವಿವಾದ ಬಗೆಹರಿಸುವ ಇಚ್ಛಾಶಕ್ತಿಯಿಲ್ಲ ಎಂದು ರವಿ ದೂರಿದರು.

ಮುಜುರಾಯಿ ಇಲಾಖೆ ವರದಿ ಆಧರಿಸಿ ದತ್ತಪೀಠದಲ್ಲಿ ಹಿಂದು ಅರ್ಚಕರ ನೇಮಕವಾಗಬೇಕಿತ್ತು. ಆದರೆ, ಹಿಂದು ಪರವಾದ ತೀರ್ಪಿನ ಅನುಷ್ಠಾನಕ್ಕೆ ಸರಕಾರ ಮುಂದಾಗುತ್ತಿಲ್ಲ. ದತ್ತಪೀಠ ವಿವಾದ ಬಗೆಹರಿಸುವ ಬದಲು ನಾಸ್ತಿಕರು ಮತ್ತು ವೈಚಾರಿಕವಾಗಿ ವಿರೋಧಿಸುವವರನ್ನು ಒಳಗೊಂಡ ಸಮಿತಿ ರಚಿಸಿರುವುದನ್ನು ನಾವು ಒಪ್ಪುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದತ್ತಪೀಠ ವಿವಾದ ಬಗೆಹರಿಸದೆ ಸುಪ್ರೀಂ ಕೋರ್ಟ್ ತೀರ್ಪನ್ನು ಕಡೆಗಣಿಸಿರುವ ರಾಜ್ಯ ಸರಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗುವುದು. 1978ರಿಂದಲೂ ದತ್ತಪೀಠ ವಿಷಯದಲ್ಲಿ ಎಲ್ಲ ತೀರ್ಪುಗಳು ಹಿಂದುಗಳ ಪರವಾಗಿಯೇ ಇದೆ. ಆದರೆ, ರಾಜ್ಯ ಸರಕಾರ ಮಾತ್ರ ಓಲೈಕೆ ರಾಜಕಾರಣದ ಸಲುವಾಗಿ ವಿವಾದ ಬಗೆಹರಿಸುತ್ತಿಲ್ಲ ಎಂದು ರವಿ ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X