Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬುಡಕಟ್ಟು ಸಮುದಾಯಗಳು ಸಮಾಜದ...

ಬುಡಕಟ್ಟು ಸಮುದಾಯಗಳು ಸಮಾಜದ ಮುಖ್ಯವಾಹಿನಿಗೆ ಬರಲು ಹಿಂಜರಿಯುತ್ತಿವೆ: ಡಾ.ಬಂಜಗೆರೆ ಜಯಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ3 Sept 2017 6:20 PM IST
share
ಬುಡಕಟ್ಟು ಸಮುದಾಯಗಳು ಸಮಾಜದ ಮುಖ್ಯವಾಹಿನಿಗೆ ಬರಲು ಹಿಂಜರಿಯುತ್ತಿವೆ: ಡಾ.ಬಂಜಗೆರೆ ಜಯಪ್ರಕಾಶ್

ಬೆಂಗಳೂರು, ಸೆ.3: ಜಗತ್ತು ಬಹಳಷ್ಟು ವೇಗವಾಗಿ ಬೆಳೆಯುತ್ತಿದ್ದರೂ, ಇಂದಿಗೂ ಬಹುತೇಕ ಬುಡಕಟ್ಟು ಸಮುದಾಯಗಳು ಸಮಾಜದ ಮುಖ್ಯವಾಹಿನಿಗೆ ಬರುವುದರಲ್ಲಿ ಹಿಂದುಳಿದಿವೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಬಂಜಗೆರೆ ಜಯಪ್ರಕಾಶ್ ಅಭಿಪ್ರಾಯಿಸಿದ್ದಾರೆ.

ರವಿವಾರ ನಗರದ ಸರಕಾರಿ ವಿಜ್ಞಾನ ಕಾಲೇಜಿನಲ್ಲಿ ಅಹರ್ನಿಶಿ ಪ್ರಕಾಶನದಿಂದ ಆಯೋಜಿಸಿದ್ದ ಸಿ.ಮಂಗಳ ಅವರ ‘ಕೃಷ್ಣ ಮುದ್ರಿಕೆ’ ಹಾಗೂ ಮಂಜುಳಾ ಹುಲಿಕುಂಟೆ ಅವರ ‘ದೀಪದುಳುವಿನ ಕಾತರ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತ ವಿವಿಧ ಕ್ಷೇತ್ರಗಳಲ್ಲಿ ಅಪಾರ ಪ್ರಮಾಣದಲ್ಲಿ ಮುಂದುವರಿಯುತ್ತಿದೆ. ಆದರೆ, ಹಲವು ಬುಡಕಟ್ಟು ಸಮುದಾಯಗಳು ಮುಂದಕ್ಕೆ ಚಲಿಸಿದಂತೆ ಕಾಣುತ್ತಿದ್ದರೂ, ಸಮಾಜದ ಮುಖ್ಯವಾಹಿನಿಗೆ ಬರಲು ಹಿಂದುಳಿಯುತ್ತಿವೆ ಎಂದು ಹೇಳಿದರು.

ಬುಡಕಟ್ಟು ಸಮುದಾಯಗಳಲ್ಲಿನ ಜನರು ತಾವೇ ಹಾಕಿಕೊಂಡಿರುವ ನಿರ್ಬಂಧನೆಗಳಿಂದ ಹೊರ ಬರಲು ಸಾಧ್ಯವಾಗುತ್ತಿಲ್ಲ. ವೌಢ್ಯದ ಅಂಧಕಾರದೊಳಗೆ ಸಿಕ್ಕಿಕೊಂಡು ಜೀವಂತವಾಗಿ ಬಲಿ ಪಶುಗಳಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬುಡಕಟ್ಟು ಸಮುದಾಯಗಳನ್ನು ಗಂಭೀರವಾಗಿ ಅರ್ಥ ಮಾಡಿಕೊಂಡು, ಅಧ್ಯಯನ ಮಾಡಿ ಸಾಮಾನ್ಯ ಜನರಿಗೆ ಅರ್ಥ ಮಾಡಿಸಬೇಕು ಹಾಗೂ ಅವರು ಸಮಾಜದ ಮುಖ್ಯವಾಹಿನಿ ಕಡೆಗೆ ಬರುವ ನಿಟ್ಟಿನಲ್ಲಿ ಸಹಕಾರಿಯಾಗಬೇಕು ಎಂದರು.

ಕಾದಂಬರಿ ಬರೆಯುವುದು ಕವಿತೆ ಬರೆದಷ್ಟು ಸುಲಭವಾದ ವಿಷಯವಲ್ಲ. ಹಲವು ತಲೆ ಮಾರುಗಳು, ವ್ಯಕ್ತಿಗಳ ಪಾತ್ರಗಳು ಬದಲಾಗುತ್ತವೆ. ಈ ಸನ್ನಿವೇಶವನ್ನು ಓದುಗರಿಗೆ ಅಚ್ಚು ಕಟ್ಟಾಗಿ, ಓದಿಸುವಂತೆ ಕಟ್ಟಿಕೊಡಬೇಕು. ಜೊತೆಗೆ, ವ್ಯಕ್ತಿ ಕೇಂದ್ರಿತ ಕಾದಂಬರಿ ಗಳಿಗಿಂತ ಸಮುದಾಯ ಆಧಾರಿತ ಕಾದಂಬರಿಗಳು ಹೆಚ್ಚು ಅರ್ಥ ಪೂರ್ಣವಾಗಿರುತ್ತದೆ ಎಂದು ತಿಳಿಸಿದರು.

ಕವಿಯತ್ರಿ ಮಂಜುಳಾ ಹುಲಿಕುಂಟೆ ಅವರ ಕವಿತೆಗಳು ಸಹಜವಾದ, ಅಲಂಕಾರ ನಿರೀಕ್ಷಿಸದೇ ಕವಿತೆ ರಚಿಸಿದ್ದಾರೆ. ದೈನಿಕ ಬಳಕೆ ಮಾಡುವ ಭಾಷೆಯಲ್ಲಿ ಎಲ್ಲರಿಗೂ ಅರ್ಥವಾಗುವಂತೆ ರಚಿಸಿದ್ದಾರೆ. ಪ್ರೇಮದ ಕಾವಿನ ಹಾಗೂ ಭಾವನಾತ್ಮಕ ಕವಿತೆಗಳನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ. ಲೇಖಕಿ ಮಂಜುಳಾ ಅವರ ಕಾದಂಬರಿ ಒಂದು ಹದವಾದ ಜಾನಪದ ಅಧ್ಯಯನ ಕೃತಿಯ ರೀತಿಯಲ್ಲಿ ಕೆಲಸ ಮಾಡುತ್ತದೆ. ಒಂದು ಕುಟುಂಬ, ಕುಲದ ಹೆಸರು, ಕೆಲವು ಪಾತ್ರಗಳು ಅಥವಾ ಒಂದಿಷ್ಟು ಘಟನಾವಳಿಗಳಿಗೆ ಕೊನೆಯಾಗಿಲ್ಲ. ಹೆಚ್ಚೂ ಕಡಿಮೆ ಅರ್ಧ ಶತಮಾನದ ಕಾಲ ವ್ಯಾಪ್ತಿಯನ್ನು ನಿರ್ಧಿಷ್ಟವಾಗಿ ಗೊಲ್ಲ ಸಮುದಾಯದ ಬದುಕಿನೊಂದಿಗೆ ಜೋಡಿಸಿ ಇಲ್ಲಿ ನೀಡಲಾಗಿದೆ. ಅಲ್ಲದೆ, ಬುಡಕಟ್ಟುಗಳ ಸಂಪೂರ್ಣ ಸಾಂಸ್ಕೃತಿಕ ವಿವರಗಳನ್ನು ಓದುಗರಿಗೆ ಕಣ್ಣಿಗೆ ಕಟ್ಟುವಂತೆ ವಿವರಿಸಿದ್ದಾರೆ ಎಂದು ಬಣ್ಣಿಸಿದರು.

ವಿಮರ್ಶಕ ಡಾ.ಕೆ.ವೈ.ನಾರಾಯಣಸ್ವಾಮಿ ಮಾತನಾಡಿ, ನಮ್ಮ ಸಾಹಿತ್ಯ ಲೋಕದಲ್ಲಿ ಪುರುಷರ ಪಾತ್ರ ಹೆಚ್ಚಿನದಾಗಿ ಬರೆಯುತ್ತಾರೆ ಎಂಬ ಪೂರ್ವಗ್ರಹಗಳಿವೆ. ಆದರೆ, ಇದಕ್ಕೆ ವಿರುದ್ಧ ಎಂಬಂತೆ ಇತ್ತೀಚಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಲೋಕಕ್ಕೆ ವಿಸ್ಮಯದಂತೆ ಮಹಿಳಾ ಸಾಹಿತಿಗಳು ಕಾಲಿಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸಾಹಿತ್ಯ ಲೋಕ ಪ್ರವೇಶಿಸಬೇಕು ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಕವಿಯತ್ರಿ ಡಾ.ಎಚ್.ಎಲ್.ಪುಷ್ಪ, ಅಹರ್ಶಿನಿ ಪ್ರಕಾಶನದ ಅಕ್ಷತಾ ಹುಂಚದಕಟ್ಟೆ, ಲೇಖಕಿ ಸಿ.ಮಂಗಳ, ಕವಿಯತ್ರಿ ಮಂಜುಳಾ ಹುಲಿಕುಂಟೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X