Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕ್ ಸಿಬ್ಬಂದಿಗಳ ವೈಯಕ್ತಿಕ ಮಾಹಿತಿ...

ಬ್ಯಾಂಕ್ ಸಿಬ್ಬಂದಿಗಳ ವೈಯಕ್ತಿಕ ಮಾಹಿತಿ ಆರ್‌ಟಿಐಯಡಿ ಪಡೆಯುವಂತಿಲ್ಲ: ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ3 Sept 2017 10:14 PM IST
share
ಬ್ಯಾಂಕ್ ಸಿಬ್ಬಂದಿಗಳ ವೈಯಕ್ತಿಕ ಮಾಹಿತಿ ಆರ್‌ಟಿಐಯಡಿ ಪಡೆಯುವಂತಿಲ್ಲ: ಸುಪ್ರೀಂ

ಹೊಸದಿಲ್ಲಿ, ಸೆ.3: ಬ್ಯಾಂಕ್ ಸಿಬ್ಬಂದಿಗಳಿಂದ ವ್ಯಕ್ತಿಯೋರ್ವ ‘ಸ್ವಹಿತಾಸಕ್ತಿ’ಯ ಉದ್ದೇಶದಿಂದ ವೈಯಕ್ತಿಕ ಮಾಹಿತಿಯನ್ನು ಪಡೆಯುವುದು ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ)ಯಡಿ ಬರುವುದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ಜನವರಿ 2002ರಿಂದ ಜನವರಿ 2006ರವರೆಗೆ ತನ್ನ ಎಲ್ಲಾ ಗುಮಾಸ್ತ ವರ್ಗದ ನೇಮಕಾತಿ ಹಾಗೂ ವರ್ಗಾವಣೆಯ ಸಂಪೂರ್ಣ ವಿವರವನ್ನು ಆರ್‌ಟಿಐ ಅಡಿ ನೀಡಬೇಕೆಂದು ಕೇರಳ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕೆನರಾ ಬ್ಯಾಂಕ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ವೇಳೆ ಹೈಕೋರ್ಟ್ ಈ ಸೂಚನೆ ನೀಡಿದೆ. ಕೆನರಾ ಬ್ಯಾಂಕ್‌ನಲ್ಲಿ ಗುಮಾಸ್ತನಾಗಿ ಕಾರ್ಯನಿರ್ವಹಿಸಿದ್ದ ವ್ಯಕ್ತಿಯೋರ್ವ, 2002ರಿಂದ 2006ರವರೆಗೆ ಬ್ಯಾಂಕ್‌ನಲ್ಲಿ ಗುಮಾಸ್ತರಾಗಿ ನೇಮಕಗೊಂಡವರ ಬಗ್ಗೆ, ಅವರು ಎಲ್ಲಿ ಕೆಲಸಕ್ಕೆ ಸೇರಿದ್ದಾರೆ, ಅವರು ಎಂದು ಕೆಲಸಕ್ಕೆ ಸೇರಿದ್ದಾರೆ ಇತ್ಯಾದಿ ವಿವರವನ್ನು ಒದಗಿಸಬೇಕೆಂದು ಮಾಹಿತಿ ಹಕ್ಕು ಕಾಯ್ದೆಯಡಿ ಬ್ಯಾಂಕಿನ ಸಾರ್ವಜನಿಕ ಸಂಪರ್ಕಾಧಿಕಾರಿ(ಪಿಐಒ)ಗೆ ಸರ್ಜಿ ಸಲ್ಲಿಸಿದ್ದ. ಆದರೆ ಈ ಮಾಹಿತಿ ಗೌಪ್ಯವಾಗಿರುವ ಕಾರಣ ಇದನ್ನು ಬಹಿರಂಗಗೊಳಿಸಲು ತನಗೆ ಸಾಧ್ಯವಿಲ್ಲ ಎಂದು ಪಿಐಒ ತಿಳಿಸಿದ್ದರು. ಬಳಿಕ ಆ ವ್ಯಕ್ತಿ ಕೇಂದ್ರೀಯ ಮಾಹಿತಿ ಆಯೋಗದ ಮೊರೆ ಹೋಗಿದ್ದ. ಈ ಸಂದರ್ಭ ಮಾಹಿತಿ ಒದಗಿಸುವಂತೆ ಆಯೋಗವು ಬ್ಯಾಂಕ್‌ಗೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಬ್ಯಾಂಕ್‌ನವರು ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ತಳ್ಳಿಹಾಕಿದ್ದ ಹೈಕೋರ್ಟ್, ಕೇಂದ್ರೀಯ ಮಾಹಿತಿ ಆಯೋಗದ ಆದೇಶ ಪಾಲಿಸುವಂತೆ ಸೂಚಿಸಿತ್ತು.

  ಅರ್ಜಿಯನ್ನು ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಲಾಗಿರುವ ಕಾರಣ ಈ ವಿವರವನ್ನು ಒದಗಿಸುವಂತೆ ಕೇರಳ ಹೈಕೋರ್ಟ್ 2013ರಲ್ಲಿ ಕೆನರಾ ಬ್ಯಾಂಕ್‌ಗೆ ಆದೇಶ ನೀಡಿತ್ತು. ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

ಬ್ಯಾಂಕ್‌ನಲ್ಲಿ ಸಿಬ್ಬಂದಿಯಾಗಿದ್ದ ವ್ಯಕ್ತಿಯೋರ್ವ ಸಲ್ಲಿಸಿರುವ ಅರ್ಜಿ ‘ವೈಯಕ್ತಿಕ’ವಾಗಿರುವ ಕಾರಣ ಈ ಮಾಹಿತಿಯನ್ನು ಆರ್‌ಟಿಐ ಕಾಯ್ದೆಯಡಿ ಬಹಿರಂಗಗೊಳಿಸುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಆರ್.ಕೆ.ಅಗರ್‌ವಾಲ್ ಮತ್ತು ಎ.ಎಂ.ಸಪ್ರೆ ಅವರನ್ನೊಳಗೊಂಡ ನ್ಯಾಯಪೀಠ ಸೂಚಿಸಿದೆ.

ಈ ವ್ಯಕ್ತಿ ಸಲ್ಲಿಸಿರುವ ಅರ್ಜಿಯಲ್ಲಿ ಸಾರ್ವಜನಿಕ ಹಿತಾಸಕ್ತಿಯ ಬದಲು ವೈಯಕ್ತಿಕ ಹಿತಾಸಕ್ತಿ ಅಡಗಿದೆ. ಅಲ್ಲದೆ ಈ ವ್ಯಕ್ತಿಗೆ ಮಾಹಿತಿ ಒದಗಿಸುವುದು ಸಾರ್ವಜನಿಕ ಹಿತಾಸಕ್ತಿಗೆ ಹೇಗೆ ಪೂರಕವಾಗಿದೆ ಎಂಬುದನ್ನು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿಲ್ಲ. ಆದ್ದರಿಂದ ಇದನ್ನು ಮಾಹಿತಿ ಹಕ್ಕಿನ ಕಾಯ್ದೆಯಿಂದ ಹೊರತುಗೊಳಿಸಬಹುದು ಎಂದು ಸುಪ್ರೀಂಕೋರ್ಟ್‌ನ ನ್ಯಾಯಪೀಠ ಅಭಿಪ್ರಾಯಪಟ್ಟಿದ್ದು ಹೈಕೋರ್ಟ್ ಹಾಗೂ ಕೇಂದ್ರೀಯ ಮಾಹಿತಿ ಆಯೋಗದ ಆದೇಶವನ್ನು ತಳ್ಳಿಹಾಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X