Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫ್ರಾಂಕ್‌ಫರ್ಟ್‌ನಲ್ಲಿ ಜಾಗತಿಕ ಯುದ್ಧದ...

ಫ್ರಾಂಕ್‌ಫರ್ಟ್‌ನಲ್ಲಿ ಜಾಗತಿಕ ಯುದ್ಧದ ದೈತ್ಯ ಬಾಂಬ್‌ಗಳು ಪತ್ತೆ: ಸಾವಿರಾರು ಮಂದಿಯ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ3 Sept 2017 11:44 PM IST
share
ಫ್ರಾಂಕ್‌ಫರ್ಟ್‌ನಲ್ಲಿ ಜಾಗತಿಕ ಯುದ್ಧದ ದೈತ್ಯ ಬಾಂಬ್‌ಗಳು ಪತ್ತೆ: ಸಾವಿರಾರು ಮಂದಿಯ ಸ್ಥಳಾಂತರ

ಫ್ರಾಂಕ್‌ಫರ್ಟ್,ಸೆ.3: ಜರ್ಮನಿಯ ವಾಣಿಜ್ಯ ನಗರ ಪ್ರಾಂಕ್‌ಫರ್ಟ್‌ನ ಕಟ್ಟಡ ನಿರ್ಮಾಣ ಸ್ಥಳವೊಂದರಲ್ಲಿ ಪತ್ತೆಯಾಗಿರುವ ಎರಡನೆ ವಿಶ್ವಮಹಾಯುದ್ಧ ಕಾಲದ ಎರಡು ಬಾಂಬ್‌ಗಳನ್ನು ನಿಷ್ಕ್ರಿಯಗೊಳಿಸುವ ಕಾರ್ಯಾಚರಣೆಗೆ ಪೂರ್ವಭಾವಿಯಾಗಿ ಪರಿಸರದಲ್ಲಿರುವ ಸಾವಿರಾರು ನಿವಾಸಿಗಳನ್ನು ಅವರ ಮನೆಗಳಿಂದ ತೆರವು ಗೊಳಿಸಲಾಗಿದೆ.

 ತೆರವುಗೊಳಿಸಲ್ಪಟ್ಟ ನಿವಾಸಿಗಳಿಗೆ ಫ್ರಾಂಕ್‌ಫರ್ಟ್‌ನ ವಾಣಿಜ್ಯ ಮೇಳ ಪ್ರಾಂಗಣದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಕೇಂದ್ರವೊಂದರಲ್ಲಿ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆಯೆಂದು ಅಧಿಕೃತ ಮೂಲಗಳು ತಿಳಿಸಿವೆ.

  ಫ್ರಾಂಕ್‌ಫರ್ಟ್‌ನ ವೆಸ್ಟೆಂಡ್ ಉಪನಗರದಲ್ಲಿ ಕಳೆದ ವಾರ ಬೃಹತ್ ಗಾತ್ರದ ಈ ಎರಡು ಬಾಂಬ್‌ಗಳು ಪತ್ತೆಯಾಗಿದ್ದವು. ಈ ಪ್ರದೇಶದಲ್ಲಿ ಹಲವಾರು ಶ್ರೀಮಂತ ಉದ್ಯಮಿಗಳು, ಬ್ಯಾಂಕರ್‌ಗಳು ಈ ಪ್ರದೇಶದಲ್ಲಿ ವಾಸವಾಗಿದ್ದಾರೆ. 70 ಶತಕೋಟಿ ಡಾಲರ್ ವೌಲ್ಯದ ಚಿನ್ನದ ನಿಧಿಯ ಸಂಗ್ರಹವಿರುವ ಜರ್ಮನಿಯ ಕೇಂದ್ರೀಯ ಬ್ಯಾಂಕನ್ನು ಕೂಡಾ ಸ್ಥಳಾಂತರಿಸಲಾಗಿದೆ.

  ಬಾಂಬ್‌ಗಳನ್ನು ನಿಷ್ಕ್ರಿಯಗೊಳಿಸುವ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಸುಮಾರು 60 ಸಾವಿರ ನಿವಾಸಿಗಳನ್ನು ತೆರವುಗೊಳಿಸಬೇಕಾಗಿದೆ. ಅಗತ್ಯಬಿದ್ದಲ್ಲಿ ಬಲಪ್ರಯೋಗದ ಮೂಲಕವೂ ನಿವಾಸಿಗಳನ್ನು ತೆರವುಗೊಳಿಸಲಾಗುವುದು ಎಂದು ಪೊಲೀಸ್ ವರಿಷ್ಠರು ತಿಳಿಸಿದ್ದಾರೆ. ಈ ಬಾಂಬ್‌ಗಳ ನಿಯಂತ್ರಿತ ಸ್ಫೋಟ ಸಾಧ್ಯವಾಗದಿದ್ದಲಿ ್ಲ ನಗರದ ಒಂದು ಭಾಗವೇ ನಾಮಾವಶೇಷವಾಗಲಿದೆಯೆಂದು ಅವರು ಎಚ್ಚರಿಕೆ ನೀಡಿದ್ದಾರೆ.

  ಬಾಂಬ್ ಪತ್ತೆಯಾದ 1.5 ಕಿ.ಮೀ. ವ್ಯಾಪ್ತಿಯೊಳಗಿನ ನಿವಾಸಿಗಳನ್ನು ತೆರವುಗೊಳಿಸಲಾಗುತ್ತಿದೆ. ನವಜಾತ ಶಿಶುಗಳು ಹಾಗೂ ತೀವ್ರನಿಗಾ ವಿಭಾಗದ ರೋಗಿಗಳನ್ನು ಒಳಗೊಂಡಂತೆ ಎರಡು ಆಸ್ಪತ್ರೆಗಳನ್ನು ಕೂಡಾ ತೆರವುಗೊಳಿಸಲಾಗಿದೆ. ಎಂದು ಮೂಲಗಳು ಹೇಳಿವೆ.

    1939-45ರವರೆಗೆ ನಡೆದ ಎರಡನೆ ವಿಶ್ವಮಹಾಯುದ್ಧದ ಸಮಯದಲ್ಲಿ ಬ್ರಿಟನ್‌ನ ವಾಯುಪಡೆಯು ಈ ಬಾಂಬ್‌ಗಳನ್ನು ಎಸೆದಿರಬೇಕೆಂದು ಶಂಕಿಸಲಾಗಿದೆ. ಎರಡನೆ ಮಹಾಯುದ್ಧದಲ್ಲಿ ಬ್ರಿಟನ್ ಹಾಗೂ ಅಮೆರಿಕದ ಯುದ್ಧವಿಮಾನಗಳು 1.5 ದಶಲಕ್ಷ ಟನ್‌ಗಳಷ್ಟು ಬಾಂಬ್‌ಗಳನ್ನು ಜರ್ಮನಿಯ ಮೇಲೆ ಎಸೆದಿದ್ದು, 6 ಲಕ್ಕಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಈ ಪೈಕಿ ಶೇ.15ರಷ್ಟು ಬಾಂಬ್‌ಗಳು ಸ್ಪೋಟಿಸಲು ವಿಫಲವಾಗಿದ್ದು, ಅವು ಸುಮರು ನೆಲದಿಂದ ಆರು ಮೀಟರ್ ಆಳದಲ್ಲಿ ಹೂತುಹೋಗಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X